“ಭಾರತ ವಿರೋಧಿ ಕೃತ್ಯ’: 20 ಯೂಟ್ಯೂಬ್‌ ಚಾನೆಲ್‌, 2 ವೆಬ್‌ಸೈಟ್‌ ಬ್ಲಾಕ್‌

ಪಾಕ್‌ ಪ್ರಾಯೋಜಿತ ನಕಲಿ ಸುದ್ದಿ ಜಾಲಗಳ ವಿರುದ್ಧವೂ ಕೇಂದ್ರ ಕ್ರಮ

Team Udayavani, Dec 21, 2021, 11:15 PM IST

“ಭಾರತ ವಿರೋಧಿ ಕೃತ್ಯ’: 20 ಯೂಟ್ಯೂಬ್‌ ಚಾನೆಲ್‌, 2 ವೆಬ್‌ಸೈಟ್‌ ಬ್ಲಾಕ್‌

ನವದೆಹಲಿ: ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಹಾಗೂ ಭಾರತ ವಿರೋಧಿ ಪ್ರಚಾರದಲ್ಲಿ ತೊಡಗಿದ್ದ 20 ಯೂಟ್ಯೂಬ್‌ ಚಾನೆಲ್‌ಗಳು ಹಾಗೂ 2 ವೆಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶಿಸಿದೆ. ವಿಶೇಷವೆಂದರೆ, ಇವುಗಳ ಪೈಕಿ ಪಾಕಿಸ್ತಾನ ಪ್ರಾಯೋಜಿತ ನಕಲಿ ಸುದ್ದಿ ಜಾಲವೂ ಸೇರಿದೆ.

ಗುಪ್ತಚರ ಸಂಸ್ಥೆಗಳು ಮತ್ತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜಂಟಿಯಾಗಿ ಪರಿಶೀಲನೆ ನಡೆಸಿ, ಮಾಹಿತಿ ತಂತ್ರಜ್ಞಾನ(ಡಿಜಿಟಲ್‌ ಮಾಧ್ಯಮ ನೀತಿಸಂಹಿತೆಗಳು) ನಿಯಮಗಳು, 2021ರ ರೂಲ್‌ 16ರಡಿ ತುರ್ತು ಅಧಿಕಾರವನ್ನು ಬಳಸಿಕೊಂಡು ಈ ಕ್ರಮ ಕೈಗೊಂಡಿವೆ. ಈ ನ್ಯೂಸ್‌ ಚಾನೆಲ್‌ಗಳು ಮತ್ತು ಪೋರ್ಟಲ್‌ಗಳನ್ನು ಬ್ಲಾಕ್‌ ಮಾಡುವಂತೆ ಇಂಟರ್ನೆಟ್‌ ಸೇವಾದಾರರಿಗೆ ನಿರ್ದೇಶಿಸುವಂತೆ ದೂರಸಂಪರ್ಕ ಇಲಾಖೆಗೆ ಮನವಿ ಮಾಡಲಾಗಿದೆ.

ಈ ಚಾನೆಲ್‌ಗಳು ಕಾಶ್ಮೀರ, ಭಾರತೀಯ ಸೇನೆ, ಅಲ್ಪಸಂಖ್ಯಾತ ಸಮುದಾಯಗಳು, ರಾಮಮಂದಿರ, ಜ.ಬಿಪಿನ್‌ ರಾವತ್‌ ಸೇರಿದಂತೆ ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳ ಕುರಿತು ವಿಭಜನೀಯ ಅಂಶಗಳನ್ನು ಒಳಗೊಂಡ ಕಂಟೆಂಟ್‌ಗಳನ್ನು ಪ್ರಸಾರ ಮಾಡುತ್ತಿದ್ದವು.

ಇದನ್ನೂ ಓದಿ:ಗುರುವಿನಲ್ಲಿ ಶಕ್ತಿ ಮತ್ತು ಭಕ್ತರಲ್ಲಿ ಭಕ್ತಿ ಇದ್ದರೆ ಮಾತ್ರ ಮಠಗಳು ಅಭಿವೃದ್ಧಿ

ಪಾಕಿಸ್ತಾನದ ಎನ್‌ಪಿಜಿ:
ಈ ಭಾರತ ವಿರೋಧಿ ಸುಳ್ಳು ಮಾಹಿತಿಗಳನ್ನು ಹಬ್ಬಿಸುವ ಚಾನೆಲ್‌ಗಳ ಪೈಕಿ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ನಯಾ ಪಾಕಿಸ್ತಾನ್‌ ಗ್ರೂಪ್‌(ಎನ್‌ಪಿಜಿ) ಕೂಡ ಒಂದು. ಇದು ಯೂಟ್ಯೂಬ್‌ ಚಾನೆಲ್‌ಗಳ ದೊಡ್ಡ ಜಾಲವನ್ನೇ ಹೊಂದಿದ್ದು, ಇದಕ್ಕೆ ಒಟ್ಟಾರೆ ಸುಮಾರು 35 ಲಕ್ಷ ಚಂದಾದಾರರಿದ್ದಾರೆ. ಈ ಚಾನೆಲ್‌ನಲ್ಲಿ ಪ್ರಸಾರವಾಗುವ ವಿಡಿಯೋಗಳು ಸುಮಾರು 55 ಕೋಟಿ ಬಾರಿ ವೀಕ್ಷಣೆಗೆ ಒಳಗಾಗುತ್ತಿವೆ. ಪಾಕಿಸ್ತಾನದ ಸುದ್ದಿವಾಹಿನಿಗಳ ನಿರೂಪಕರೇ ಎನ್‌ಪಿಜಿಯ ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಆ್ಯಂಕರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವುದು ತಿಳಿದುಬಂದಿದೆ.

ಈ ಚಾನೆಲ್‌ಗಳಲ್ಲಿ ರೈತರ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳ ಬಗ್ಗೆಯೂ ಪ್ರಸಾರ ಮಾಡಲಾಗಿದೆ. ಜತೆಗೆ, ಸರ್ಕಾರದ ವಿರುದ್ಧ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸಗಳನ್ನೂ ಈ ಚಾನೆಲ್‌ಗಳು ಮಾಡುತ್ತಿದ್ದವು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.