![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಕೋವಿಡ್ 19: ವಿದೇಶದಿಂದ ಭಾರತಕ್ಕೆ ಮರಳಲು ಧಾವಂತ; ಸಚಿವಾಲಯದ ವೆಬ್ ಸೈಟ್ ಕ್ರ್ಯಾಶ್!
ಈ ನಿಟ್ಟಿನಲ್ಲಿ ಮಂಗಳವಾರ ಮೊದಲ ಹಂತವಾಗಿ ಭಾರತದಿಂದ ಎರಡು ಹಡಗು ತೆರಳಿದೆ
Team Udayavani, May 7, 2020, 1:54 PM IST
![ಕೋವಿಡ್ 19: ವಿದೇಶದಿಂದ ಭಾರತಕ್ಕೆ ಮರಳಲು ಧಾವಂತ; ಸಚಿವಾಲಯದ ವೆಬ್ ಸೈಟ್ ಕ್ರ್ಯಾಶ್!](https://www.udayavani.com/wp-content/uploads/2020/05/International-Airport-620x375.jpg)
ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟಲು ಲಾಕ್ ಡೌನ್ ಜಾರಿಯಾದ ಪರಿಣಾಮ ಜಗತ್ತಿನ ಹಲವು ದೇಶಗಳಲ್ಲಿ ಭಾರತೀಯರು ಅನಿವಾರ್ಯವಾಗಿ ಅಲ್ಲೇ ಉಳಿಯುವಂತಾಗಿತ್ತು. ಇದೀಗ 12 ದೇಶಗಳಲ್ಲಿನ ಸುಮಾರು 15 ಭಾರತೀಯರು ತಾಯ್ನಾಡಿಗೆ ಮರಳಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮುಗಿಬಿದ್ದ ಪರಿಣಾಮ ಬುಧವಾರ ನಾಗರಿಕ ವಿಮಾನಯಾನ ಸಚಿವಾಲಯದ ವೆಬ್ ಸೈಟ್ ಕ್ರ್ಯಾಶ್ (ಸ್ಥಗಿತವಾಗು) ಆಗಿರುವುದಾಗಿ ವರದಿ ತಿಳಿಸಿದೆ.
ಕೋವಿಡ್ ತಡೆಗಟ್ಟಲು ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕೇಂದ್ರ ಸರ್ಕಾರ ಮಾರ್ಚ್ ತಿಂಗಳಾಂತ್ಯದಲ್ಲಿ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಆಗಮನಕ್ಕೆ ನಿಷೇಧ ಹೇರಿತ್ತು. ಇದರಿಂದಾಗಿ ವಿದೇಶದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಪ್ರವಾಸಿಗರು ಸಿಕ್ಕಿಹಾಕಿಕೊಳ್ಳುವಂತಾಗಿತ್ತು.
ಊರಿಗೆ ಮರಳುವ ಧಾವಂತದಲ್ಲಿ ಅತೀ ಹೆಚ್ಚು ಜನರು ಹೆಸರನ್ನು ನೋಂದಾಯಿಸಲು ಮುಂದಾಗಿದ್ದರಿಂದ ವೆಬ್ ಸೈಟ್ ಕ್ರ್ಯಾಶ್ ಆಗುವಂತಾಗಿದೆ. ಜನರು ಏರ್ ಇಂಡಿಯಾ ವೆಬ್ ಸೈಟ್ ಪರಿಶೀಲಿಸಿ, ಅದರಲ್ಲಿ ಯಾವ ವಿಮಾನ ಕಾರ್ಯಾಚರಿಸಲಿದೆ ಎಂಬ ವಿವರ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈ ನಿಟ್ಟಿನಲ್ಲಿ ಮಂಗಳವಾರ ಮೊದಲ ಹಂತವಾಗಿ ಭಾರತದಿಂದ ಎರಡು ಹಡಗು ತೆರಳಿದ್ದು, ಒಂದು ಮಾಲ್ಡೀವ್ಸ್ ನಲ್ಲಿ ಸಿಕ್ಕಿಹಾಕಿಕೊಂಡ ಒಂದು ಸಾವಿರ ಭಾರತೀಯ ಪ್ರಜೆಗಳನ್ನು ಕರೆತರಲು ಹಾಗೂ ಮತ್ತೊಂದು ಹಡಗು ಗಲ್ಫ್ ಗೆ ತೆರಳಿದೆ ಎಂದು ವರದಿ ವಿವರಿಸಿದೆ.
ಯುನೈಟೆಡ್ ಅರಬ್ ನಲ್ಲಿ ಊರಿಗೆ ಮರಳಲು ಮೂರು ಲಕ್ಷಕ್ಕೂ ಅಧಿಕ ಭಾರತೀಯರು ಕಾತರದಿಂದ ಇದ್ದು ಮೊದಲ ಹಂತದಲ್ಲಿ 64 ವಿಮಾನಗಳಲ್ಲಿ ಕರೆತರಲು ಸಿದ್ದತೆ ನಡೆದಿದೆ. ಕತಾರ್ ನಿಂದ ಕೇರಳಕ್ಕೆ ಗುರುವಾರ ವಿಮಾನ ಬರುವುದು ನಿಗದಿಯಾಗಿದ್ದು, ಅದು ಶನಿವಾರಕ್ಕೆ ಮುಂದೂಡಿಕೆಯಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಗಲ್ಫ್ ದೇಶಗಳಲ್ಲಿ ಇರುವ ಭಾರತೀಯರನ್ನು ಒಟ್ಟು 26 ವಿಮಾನಗಳಲ್ಲಿ ಕರೆತರಲು ಸಿದ್ದತೆಯಾಗಿದ್ದು, ಉಳಿದ ವಿಮಾನಗಳು ಏಷ್ಯಾ, ಬ್ರಿಟನ್ ಹಾಗೂ ಅಮೆರಿಕದಲ್ಲಿ ಇರುವ ಭಾರತೀಯರನ್ನು ಭಾರತಕ್ಕೆ ಕರೆತರಲಿದೆ ಎಂದು ಹೇಳಿದೆ. ಈವರೆಗೆ ವಿದೇಶದಲ್ಲಿರುವ ಎರಡು ಲಕ್ಷ ಭಾರತೀಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವುದಾಗಿ ನಾಗರಿಕ ವಿಮಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![7](https://www.udayavani.com/wp-content/uploads/2024/12/7-30-150x90.jpg)
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
![ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ](https://www.udayavani.com/wp-content/uploads/2024/12/ud-1-1-150x97.jpg)
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.