Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
ದುರ್ಬಲ ಪ್ರಧಾನಿ ‘U-turn’ ಸರಕಾರ ಎಂದು ಜರಿದ ಕಾಂಗ್ರೆಸ್
Team Udayavani, Sep 16, 2024, 7:37 PM IST
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ 100 ದಿನಗಳಾಗಿವೆ. ಮೋದಿ 3.0 ಮೊದಲ 100 ದಿನಗಳು ವಿಶಾಲ ದೃಷ್ಟಿಕೋನ ಹೊಂದಿವೆ ಎಂದು ಕೇಂದ್ರ ಸರಕಾರ ಹೇಳಿದೆ.
ಗುಜರಾತ್ ನ ಗಾಂಧಿ ನಗರದಲ್ಲಿ ಸೋಮವಾರ(ಸೆ16) ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್ಪೋದ 4 ನೇ ಆವೃತ್ತಿ (RE-INVEST 2024) ಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ದೇಶದ ತ್ವರಿತ ಪ್ರಗತಿಗಾಗಿ ಪ್ರತಿಯೊಂದು ಕ್ಷೇತ್ರ ಮತ್ತು ಅಂಶವನ್ನು ಪರಿಹರಿಸಲು ನಮ್ಮ ಸರಕಾರ ಪ್ರಯತ್ನಿಸಿದೆ ಎಂದರು.
ಕೇವಲ ಭಾರತೀಯರು ಮಾತ್ರವಲ್ಲದೆ ಇಡೀ ಜಗತ್ತು ಭಾರತವು 21 ನೇ ಶತಮಾನದ ಅತ್ಯುತ್ತಮ ಅವಧಿಯಾಗಿದೆ ಎಂದು ಭಾವಿಸುತ್ತದೆ. ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ನಮ್ಮ ಆದ್ಯತೆಗಳು, ವೇಗದ ಪ್ರಮಾಣವನ್ನು ನೀವು ವೀಕ್ಷಿಸಬಹುದು. ದೇಶದ ಕ್ಷಿಪ್ರ ಪ್ರಗತಿಗೆ ಅಗತ್ಯವಿರುವ ಪ್ರತಿಯೊಂದು ಕ್ಷೇತ್ರ ಮತ್ತು ಅಂಶವನ್ನು ಪರಿಹರಿಸಲು ನಾವು ಪ್ರಯತ್ನಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.
“ಭಾರತದ ವೈವಿಧ್ಯತೆ, ಪ್ರಮಾಣ, ಸಾಮರ್ಥ್ಯ ಮತ್ತು ಕಾರ್ಯಕ್ಷಮತೆ ಅನನ್ಯವಾಗಿದೆ. ಜಾಗತಿಕ ವಿಚಾರಗಳಿಗೆ ಭಾರತೀಯ ಪರಿಹಾರಗಳನ್ನು ನಾನು ಹೇಳಲು ಇದು ಕಾರಣವಾಗಿದೆ” ಎಂದರು.
”ಭಾರತವು ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿಯನ್ನು ಸಿದ್ಧಪಡಿಸುತ್ತಿದೆ. ಕೇವಲ ಉನ್ನತ ಸ್ಥಾನವನ್ನು ತಲುಪುವುದು ಮಾತ್ರವಲ್ಲದೆ ಶ್ರೇಯಾಂಕವನ್ನು ಉಳಿಸಿಕೊಳ್ಳುವುದೂ ಕೇಂದ್ರಿತವಾಗಿದೆ” ಎಂದು ಮೋದಿ ಪ್ರತಿಪಾದಿಸಿದರು.
ಕಾಂಗ್ರೆಸ್ ಸೇರಿ ವಿಪಕ್ಷಗಳ ಟೀಕಾ ಪ್ರಹಾರ
ತಮ್ಮ ಮೂರನೇ ಅವಧಿಯಲ್ಲಿ ನರೇಂದ್ರ ಮೋದಿ ಅವರು ಊರುಗೋಲನ್ನು ಅವಲಂಬಿಸಿದ್ದಾರೆ. ಯು-ಟರ್ನ್ಗಳಿಗಾಗಿ ಹೊಸ ದಾಖಲೆಗಳನ್ನು ನಿರ್ಮಿಸುವ ದುರ್ಬಲ ಪ್ರಧಾನಿ ಎಂದು ಸಾಬೀತುಪಡಿಸಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಟೀಕಾ ಪ್ರಹಾರ ನಡೆಸಿದೆ.
”ಕಳೆದ 100 ದಿನಗಳು ದೇಶದ ರೈತರು, ಯುವಕರು, ಮಹಿಳೆಯರು, ಮೂಲಸೌಕರ್ಯ, ರೈಲ್ವೆ ಮತ್ತು ಒಟ್ಟಾರೆ ಶಾಂತಿಯ ಮೇಲೆ ಹೆಚ್ಚು ತೂಕವನ್ನು ಹೊಂದಿದ್ದು, ಮೋದಿಯವರಿಗೆ ದೇಶದ ಸಮಸ್ಯೆಗಳಿಗೆ ಪರಿಹಾರವೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂಬುದನ್ನು ಈ ನೂರು ದಿನಗಳು ಸಾಬೀತುಪಡಿಸಿವೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.