Lok Sabha Election: ದಕ್ಷಿಣ ಭಾರತದಲ್ಲಿ ಬಿಜೆಪಿ ಸಾಧನೆ ಬಗ್ಗೆ ಮೋದಿ ಮೆಚ್ಚುಗೆ
Team Udayavani, Jun 7, 2024, 7:01 PM IST
ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್ಡಿಎ ಹೊಸದಾಗಿ ಚುನಾಯಿತರಾದ ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಯನ್ನಾಗಿ ಅನುಮೋದಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿಯ ಪ್ರದರ್ಶನದ ಬಗ್ಗೆ ಉಲ್ಲೇಖಿಸಿದರು.
“ನಾನು ಖಂಡಿತವಾಗಿ ಉಲ್ಲೇಖಿಸಲು ಬಯಸುತ್ತೇನೆ… ದಕ್ಷಿಣ ಭಾರತದಲ್ಲಿ ಹೊಸ ರಾಜಕೀಯಕ್ಕೆ ಎನ್ ಡಿಎ ಬಲವಾದ ನೆಲೆಯನ್ನು ಸ್ಥಾಪಿಸಿದೆ. ಕರ್ನಾಟಕ ಮತ್ತು ತೆಲಂಗಾಣವನ್ನು ನೋಡಿ, ಕಾಂಗ್ರೆಸ್ ಇತ್ತೀಚೆಗೆ ಸರ್ಕಾರಗಳನ್ನು ರಚಿಸಿದೆ, ಆದರೆ ಜನರ ನಂಬಿಕೆ ಮುರಿದು ಹೋಯಿತು, ಹೀಗಾಗಿ ಅವರು ಎರಡೂ ರಾಜ್ಯದಲ್ಲೂ ಎನ್ ಡಿಎಯನ್ನು ಸ್ವೀಕರಿಸಿದರು” ಎಂದು ನರೇಂದ್ರ ಮೋದಿ ಹೇಳಿದರು.
“ನಾನು ತಮಿಳುನಾಡಿನ ತಂಡವನ್ನು ಅಭಿನಂದಿಸಲು ಬಯಸುತ್ತೇನೆ. ನಾವು ತಮಿಳುನಾಡಿನಲ್ಲಿ ಸೀಟುಗಳನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ರಾಜ್ಯದಲ್ಲಿ ಎನ್ ಡಿಎಯ ಮತಗಳ ಪ್ರಮಾಣವು ಹೆಚ್ಚಾದ ರೀತಿಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ನರೇಂದ್ರ ಮೋದಿ ಹೇಳಿದರು.
ಕೇರಳದಲ್ಲಿ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ-ರಾಜಕಾರಣಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಎನ್ ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಬಿಜೆಪಿ ಮಿತ್ರಪಕ್ಷಗಳಾದ ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್, ಎಚ್ಎಎಂ(ಎಸ್) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.