![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, May 14, 2024, 9:34 PM IST
ನವದೆಹಲಿ: ಲೋಕಸಭೆ ಚುನಾವಣೆ ನಿಮಿತ್ತ ಜಾರಿಯಾಗಿರುವ ಮಾದರಿ ನೀತಿ ಸಂಹಿತೆ ಈಗ ಮೋದಿ ನೀತಿ ಸಂಹಿತೆ ಆಗಿದೆ. ಬಿಜೆಪಿ ನಾಯಕರು ಪದೇ ಪದೆ ಸಂಹಿತೆ ಉಲ್ಲಂ ಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.
ಬಿಜೆಪಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ಮುಖಂಡರಾದ ಸಾಕೇತ್ ಘೋಖಲೆ, ಸಾಗರಿಕಾ ಘೋಷ್ ಒತ್ತಾಯಿಸಿದ್ದಾರೆ.
ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಇಬ್ಬರು ನಾಯಕರು, ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಯೋಗವನ್ನು ಪ್ರಶ್ನಿಸಿದ್ದಾಗಿ ತಿಳಿಸಿದ್ದಾರೆ. ಕ್ರಮ ಕೈಗೊಳ್ಳದೇ ಇರುವುದರಿಂದ ಧೈರ್ಯವಾಗಿ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದು ಆಯೋಗಕ್ಕೆ ಮನವರಿಕೆ ಮಾಡಿದ್ದಾಗಿ ಟಿಎಂಸಿ ನಾಯಕರು ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.