World’s largest ಧಾನ್ಯ ಸಂಗ್ರಹ ಯೋಜನೆಗೆ ಮೋದಿ ಚಾಲನೆ : 1.25 ಲಕ್ಷ ಕೋಟಿ ರೂ. ಹೂಡಿಕೆ

ಐದು ವರ್ಷಗಳಲ್ಲಿ 7 ಕೋಟಿ ಟನ್‌ ಧಾನ್ಯ ಸಂಗ್ರಹ ಗುರಿ

Team Udayavani, Feb 25, 2024, 1:03 AM IST

1-wewqewq

ಹೊಸದಿಲ್ಲಿ: ವಿಶ್ವದ ಬೃಹತ್‌ ಧಾನ್ಯ ಸಂಗ್ರಹಾಗಾರ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಮುಂದಿನ ಐದು ವರ್ಷಗಳಲ್ಲಿ 7 ಕೋಟಿ ಟನ್‌ ಧಾನ್ಯ ಸಂಗ್ರಹ ಮಾಡಲು ಸಾಧ್ಯವಾಗುವಂತೆ ಗೋದಾಮುಗಳು, ಸಂಗ್ರಹಾಗಾರ ನಿರ್ಮಿಸುವುದು ಯೋಜನೆಯ ಗುರಿ. ಈ ಹಿನ್ನೆಲೆಯಲ್ಲಿ ದೇಶದ 11 ರಾಜ್ಯಗಳ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ (ಪ್ಯಾಕ್ಸ್‌) 11 ಗೋದಾಮುಗಳನ್ನು ಸಾಂಕೇತಿಕ ವಾಗಿ ಉದ್ಘಾಟಿಸಲಾಯಿತು.

ಸಹಕಾರಿ ಕ್ಷೇತ್ರದಲ್ಲಿ ಸಂಘಗಳನ್ನು ಬಲ ಪಡಿಸುವುದರ ಜತೆಗೆ ರೈತರ ಧಾನ್ಯಗಳ ದಾಸ್ತಾನಿಗೆ ಅಗತ್ಯ ವ್ಯವಸ್ಥೆ ಮಾಡಿಕೊಡಲು ಕೇಂದ್ರ ಸರಕಾರವು 1.25 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ. ಕಾರ್ಯಕ್ರಮದಲ್ಲಿ ಮೋದಿಯವರು 500 ಇತರ ಪ್ಯಾಕ್ಸ್‌ ಗಳಲ್ಲಿ ಗೋದಾಮುಗಳು, ಇತರ ಕೃಷಿ ಸೌಲಭ್ಯಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಮೋದಿ ಹೇಳಿದ್ದೇನು?
ಯೋಜನೆ ಉದ್ಘಾಟಿಸಿ ಮಾತನಾಡಿದ ಮೋದಿ, ಇವತ್ತು ನಾವು ವಿಶ್ವದ ಬೃಹತ್‌ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಬೃಹತ್‌ ಯೋಜನೆ ಮೂಲಕ, ಮುಂದಿನ ಐದು ವರ್ಷಗಳಲ್ಲಿ 7 ಕೋಟಿ ಟನ್‌ ಸಂಗ್ರಹ ಸಾಮರ್ಥ್ಯವನ್ನು ನಿರ್ಮಿಸ ಲಾಗುವುದು. ಇದಕ್ಕಾಗಿ 1.25 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು’ ಎಂದು ಹೇಳಿದ್ದಾರೆ.

ನಾವು ವಿಶ್ವದ ಬೃಹತ್‌ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ್ದೇವೆ. ಇದರ ಮೂಲಕ ದೇಶಾದ್ಯಂತ ಸಾವಿರಾರು ಸಂಗ್ರಹಾಗಾರಗಳು, ಗೋದಾಮುಗಳನ್ನು ನಿರ್ಮಿಸಲಾಗು ವುದು. ಹಿಂದಿನ ಸರಕಾರಗಳು ಈ ವಿಚಾರಕ್ಕೆ ಆದ್ಯತೆಯನ್ನೇ ನೀಡಿರಲಿಲ್ಲ. ಇವತ್ತು ಸಹಕಾರಿ ಸಂಘಗಳ ಮೂಲಕ ಈ ಸಮಸ್ಯೆಗೆ ಉತ್ತರ ನೀಡಿದ್ದೇವೆ.

ಗೋದಾಮುಗಳಿಂದ ಲಾಭಗಳೇನು?
ಈ ಸಂಗ್ರಹಾಗಾರಗಳಲ್ಲಿ ರೈತರು ಧಾನ್ಯ ಸಂಗ್ರಹಿಸಿಡಬಹುದು. ಸೂಕ್ತ ಬೆಲೆ ಬಂದಾಗ ಮಾರಬಹುದು. ಇಲ್ಲಿ ಧಾನ್ಯಗಳನ್ನು ಇರಿಸಿ ಸಾಲವನ್ನೂ ಪಡೆಯಬಹುದು.

2 ಲಕ್ಷ ಪ್ಯಾಕ್ಸ್‌ ಸ್ಥಾಪನೆ ಗುರಿ
ದೇಶಾದ್ಯಂತ ಕೃಷಿ ಸಹಕಾರಿ ಸಂಘ (ಪ್ಯಾಕ್ಸ್‌)ಗಳನ್ನು 2 ಲಕ್ಷಕ್ಕೇರಿಸುವ ಗುರಿಯನ್ನು ಮೋದಿ ಸರಕಾರ ಹೊಂದಿದೆ. ಒಟ್ಟು ಕೃಷಿ ಉತ್ಪಾದಕ ಸಂಘಗಳನ್ನು (ಎಫ್ಪಿಒ) 10 ಸಾವಿರಕ್ಕೆ ಏರಿಸುವ ಗುರಿಯಿದೆ. ಈಗಾಗಲೇ 8 ಸಾವಿರ ಎಫ್ಪಿಒಗಳನ್ನು ಸ್ಥಾಪಿಸಲಾಗಿದೆ ಎಂದೂ ಮೋದಿ ಹೇಳಿದ್ದಾರೆ.

 

 

ಟಾಪ್ ನ್ಯೂಸ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.