![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 8, 2019, 7:26 PM IST
ಕೋಲ್ಕತ : ದೇಶದ ಹಾಲಿ ರಾಜಕಾರಣದಲ್ಲಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಮಹಾಭಾರತದಲ್ಲಿ ಪಾಂಡವರ ವಿರುದ್ಧ ಹೋರಾಡಿದ ದುರ್ಯೋಧನ ಮತ್ತು ದುಶ್ಶಾಸನ ರಾಗಿದ್ದಾರೆ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಭಾನುವಾರದ ರಾಲಿಯಲ್ಲಿ ಭಾಷಣ ಮಾಡಿದ ಮರುದಿನವೇ ಇಂದು ಸೋಮವಾರ ಕೂಚ್ ಬೆಹಾರ್ ನಲ್ಲಿ ಏರ್ಪಡಿಸಲಾದ ರಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಮೋದಿ ಮತ್ತು ಶಾ ಅವರೇ ನೀವು ರಾಜ್ಯದಲ್ಲಿನ ನಮ್ಮ ಕಾರ್ಯ ನಿರ್ವಹಣೆಯನ್ನು ಪ್ರಶ್ನಿಸುತ್ತಿದ್ದೀರಿ. ಕೇಂದ್ರದಲ್ಲಿ ನಿಮ್ಮ ಕಾರ್ಯ ನಿರ್ವಹಣೆಯನ್ನು ನೀವು ಎಂದಾದರೂ ಅವಲೋಕಿಸಿದ್ದೀರಾ ? ನಾನು ನನ್ನ ಈ ರಾಜ್ಯದಲ್ಲಿ ಮಾಡಿರುವ ಕೆಲಸಗಳ ಒಂದು ಪರ್ಸೆಂಟ್ ಕೆಲಸವನ್ನೂ ನೀವು ಕೇಂದ್ರದಲ್ಲಿ ಮಾಡಿಲ್ಲ’ ಎಂದು ಗುಡುಗಿದರು.
ಪ್ರಧಾನಿ ಮೋದಿ ಅವರು ನಿನ್ನೆ ತಮ್ಮ ಭಾಷಣದಲ್ಲಿ ಪಶ್ಚಿಮ ಬಂಗಾಲದಲ್ಲಿ ನಡೆದಿದ್ದ ಕೋಟ್ಯಂತರ ರೂ.ಗಳ ಚಿಟ್ ಫಂಡ್ ಹಗರಣವನ್ನು ಪ್ರಶ್ನಿಸಿದ್ದರು. ಇದಕ್ಕೆ ಉತ್ತರವಾಗಿ ಮಮತಾ, “ಮೋದಿ ಅವರೇ ನೀವು ಬಡಜನರಿಗೆ ಕೊಡುವುದಾಗಿ ಹೇಳಿದ್ದ ಹಣ ಎಂದೂ ಅವರಿಗೆ ಸಂದಿಲ್ಲ; ಅದೆಲ್ಲ ಎಲ್ಲಿ ಹೋಯಿತು ?’ ಎಂದು ಕೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದ ಮಮತಾ, ಟಿಎಂಸಿ ವಿರುದ್ಧ ಪದೇ ಪದೇ ಆರೋಪಿಲಾಗುತ್ತಿರುವ ರಾಜಕೀಯ ಹಿಂಸೆಯನ್ನು ಸಾರಾಸಗಟು ಅಲ್ಲಗಳೆದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.