Monsoon: ಶೇ.8 ಹೆಚ್ಚು ಮಳೆಯೊಂದಿಗೆ ಮುಂಗಾರು ಮುಕ್ತಾಯ: ಹವಾಮಾನ ಇಲಾಖೆ
2020ಕ್ಕೆ ಹೋಲಿಸಿದರೆ ಹೆಚ್ಚು ಮಳೆ ದಕ್ಷಿಣ ಭಾರತದಲ್ಲಿ ಈ ಬಾರಿ ಹೆಚ್ಚು
Team Udayavani, Oct 2, 2024, 6:24 AM IST
ನವದೆಹಲಿ: ವಾಡಿಕೆಗಿಂತ ಶೇ.8ರಷ್ಟು ಹೆಚ್ಚುವರಿ ಮಳೆಯೊಂದಿಗೆ ಪ್ರಸಕ್ತ ವರ್ಷದ ಮುಂಗಾರು ಹಂಗಾಮು ಸೋಮವಾರ ಮುಕ್ತಾಯವಾಗಿದೆ. ಜೂನ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇ.8ರಷ್ಟು ಹೆಚ್ಚು ಮಳೆಯಾಗಿದ್ದು, 2020ರ ಬಳಿಕ ಇದೇ ಮೊದಲ ಬಾರಿಗೆ ಅತ್ಯುತ್ತಮ ಮಳೆಯಾದಂತಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಸಾಮಾನ್ಯವಾಗಿ ಮುಂಗಾರಿನಲ್ಲಿ ದೇಶಾದ್ಯಂತ 868.6 ಮಿ.ಮೀ. ಮಳೆಯಾಗುತ್ತದೆ. ಆದರೆ ಪ್ರಸಕ್ತ ವರ್ಷ 934.8 ಮಿ.ಮೀ. ಮಳೆಯಾಗಿದೆ. ಒಟ್ಟಾರೆಯಾಗಿ ಹೆಚ್ಚುವರಿ ಮಳೆಯಾದರೂ, ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಶೇ.14ರಷ್ಟು ಮಳೆ ಕೊರತೆ ಉಂಟಾಗಿದೆ. ಮಧ್ಯ ಭಾರತದಲ್ಲಿ ಸರಾಸರಿಗಿಂತ ಶೇ.19ರಷ್ಟು ಹೆಚ್ಚು, ವಾಯವ್ಯ ಭಾರತದಲ್ಲಿ ಶೇ.7ರಷ್ಟು ಹೆಚ್ಚು, ದಕ್ಷಿಣದಲ್ಲಿ ಶೇ.14ರಷ್ಟು ಹೆಚ್ಚು ಮಳೆಯಾಗಿದೆ ಎಂದೂ ಇಲಾಖೆ ಹೇಳಿದೆ.
ನೈರುತ್ಯ ಮುಂಗಾರು ಸಂಪೂರ್ಣವಾಗಿ ನಿರ್ಗಮನವಾಗಿಲ್ಲ. ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಇನ್ನೂ 2 ವಾರ ಉತ್ತಮ ಮಳೆಯಾಗಲಿದ್ದು, ಅ.10ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಮುಂಗಾರು ವಾಪಸಾತಿ ಪ್ರಕ್ರಿಯೆ ಮುಗಿಯಲಿದೆ ಎಂದೂ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್: ಬಿಜೆಪಿ
ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ
Swachh Bharat : “ಸ್ವಚ್ಛ ಭಾರತ್ ಮಿಷನ್’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು
Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್ಗೆ ಅಮೆರಿಕ ಎಚ್ಚರಿಕೆ
Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.