![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 17, 2023, 7:10 AM IST
ಹೊಸದಿಲ್ಲಿ: ಪ್ರಸಕ್ತ ವರ್ಷ ಕೇರಳಕ್ಕೆ ಮುಂಗಾರು ಆಗಮನ ಸ್ವಲ್ಪ ವಿಳಂಬವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ. ಹೀಗಾಗಿ ಈ ಬಾರಿಯ ಬೇಸಗೆ ಸಾಮಾನ್ಯಕ್ಕಿಂತ ದೀರ್ಘವಾಗುವ ಆತಂಕ ವ್ಯಕ್ತವಾಗಿದೆ.
ನೈಋತ್ಯ ಮುಂಗಾರು ಈ ಬಾರಿ ಜೂ. 4ರ ವೇಳೆಗೆ ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂ. 1ರಂದು ಕೇರಳಕ್ಕೆ ಪ್ರವೇಶವಾಗುತ್ತದೆ. ಇದು ಸುಮಾರು 7 ದಿನ ಏರುಪೇರಾಗುವ ಸಾಧ್ಯತೆಯಿರುತ್ತದೆ. ಆದರೆ ಈ ಬಾರಿ 4 ದಿನಗಳ ಏರುಪೇರಿನೊಂದಿಗೆ ಜೂ. 4ರಂದು ಕೇರಳದಲ್ಲಿ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ವರ್ಷ ಮೇ 29ರಂದು ದೇವರ ನಾಡಿಗೆ ಮುಂಗಾರು ಪ್ರವೇಶ ಪಡೆದಿತ್ತು. 2021ರಲ್ಲಿ ಜೂ. 3ರಂದು ಮತ್ತು 2020ರಲ್ಲಿ ಜೂ. 1ರಂದು ಪ್ರವೇಶವಾಗಿತ್ತು.
ಎಲ್ನಿನೋ ಪ್ರಭಾವದ ಹೊರತಾಗಿಯೂ ಈ ಬಾರಿ ದೇಶದಲ್ಲಿ ವಾಡಿಕೆ ಮಳೆಯಾಗಲಿದೆ ಎಂದು ಕಳೆದ ತಿಂಗಳು ಹವಾಮಾನ ಇಲಾಖೆ ಸ್ಪಷ್ಟಪಡಿಸಿತ್ತು.
ವಿಳಂಬದಿಂದ ಏನು ಸಮಸ್ಯೆ?
ಭಾರತವು ಕೃಷಿಯನ್ನೇ ಆಧರಿಸಿರುವ ದೇಶವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ. 75ರಷ್ಟನ್ನು ಮುಂಗಾರು ಮಳೆಯೇ ಒಳಗೊಂಡಿದೆ. ಈ ಬಾರಿ ಮುಂಗಾರು ವಿಳಂಬವಾದರೆ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆದರೆ ವಿಳಂಬವು ದೊಡ್ಡ ಮಟ್ಟದಲ್ಲಿ ಕೃಷಿ ಚಟುವಟಿಕೆಗಳ ಮೇಲಾಗಲೀ, ದೇಶದ ಒಟ್ಟಾರೆ ಮಳೆಯ ಪ್ರಮಾಣದ ಮೇಲಾಗಲೀ ಪರಿಣಾಮ ಬೀರುವುದಿಲ್ಲ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.