
“ಮೆಕುನು’ ಬೆನ್ನಲ್ಲೇ ರಾಜ್ಯಕ್ಕೆ ಮುಂಗಾರು
Team Udayavani, May 31, 2018, 6:00 AM IST

ನವದೆಹಲಿ: ಮೆಕುನು ಚಂಡಮಾರುತದ ಬೆನ್ನಲ್ಲೇ ಮೂರು ದಿನ ಮೊದಲೇ ಕೇರಳಕ್ಕೆ ಆಗಮಿಸಿರುವ ಮುಂಗಾರು, ಬುಧವಾರ ಕರ್ನಾಟಕವನ್ನೂ ಪ್ರವೇಶಿಸಿದೆ. ಈ ಬಗ್ಗೆ ಸ್ವತಃ ಭಾರತೀಯ ಹವಾಮಾನ ಇಲಾಖೆಯೇ ಹೇಳಿಕೆ ನೀಡಿದ್ದು, ಅರಬ್ಬಿ ಸಮುದ್ರದ ಮೂಲಕ ಕೇರಳ, ಕರಾವಳಿ ಕರ್ನಾಟಕ
ಮತ್ತು ರಾಜ್ಯದ ದಕ್ಷಿಣ ಒಳನಾಡಿಗೆ ಪ್ರವೇಶ ಮಾಡಿದೆ. ಹೀಗಾಗಿಯೇ ಬುಧವಾರ ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.
ಈ ಮಧ್ಯೆ, ಮುಂಗಾರು ಮಳೆಯ ಬಗ್ಗೆ ಮತ್ತೂಮ್ಮೆ ಭಾರತೀಯ ಹವಾಮಾನ ಇಲಾಖೆ ಖುಷಿಯ ಸುದ್ದಿ ನೀಡಿದೆ. ಈ ಬಾರಿ ಮುಂಗಾರು ಕೊರತೆ ಕಾಣಿಸುವುದಿಲ್ಲ. ಸಾಮಾನ್ಯ, ಅಂದರೆ ಶೇ.97 ರಷ್ಟು ಮಳೆಯಾಗಲಿದೆ. ಆದರೆ ದೇಶದ ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಮಾತ್ರ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಹಾ ನಿರ್ದೇಶಕ ಕೆ.ಜೆ. ರಮೇಶ್ ಹೇಳಿದ್ದಾರೆ.
2017ರಲ್ಲಿ ಶೇ.97ರಷ್ಟು ಮಳೆಯಾಗಿದ್ದರೆ, ಈ ವರ್ಷ ಅದಕ್ಕಿಂತ ಹೆಚ್ಚು ಮಳೆಯಾಗಲಿದೆ. ಜುಲೈನಲ್ಲಿ ದೀರ್ಘಾವಧಿ ಸರಾಸರಿ ಆಧಾರದಲ್ಲಿ ಶೇ. 101ರಷ್ಟು ಹಾಗೂ ಆಗಸ್ಟ್ನಲ್ಲಿ ಶೇ.94ರಷ್ಟು ಮಳೆಯಾಗಲಿದೆ. ಸಾಮಾನ್ಯವಾಗಿ ಶೇ 90-96ರಷ್ಟು ಮಳೆಯಾದರೆ ಸರಾಸರಿಗಿಂತ ಕಡಿಮೆ, ಶೇ.90 ಕ್ಕಿಂತ ಕಡಿಮೆ ಇದ್ದರೆ ಮಳೆ ಕೊರತೆ ಹಾಗೂ ಶೇ.96-104ರಷ್ಟು ಮಳೆಯಾದರೆ ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ಈ ಹಿಂದೆ ಶೇ. 97ಕ್ಕಿಂತ ಶೇ.5 ಹೆಚ್ಚು ಅಥವಾ ಕಡಿಮೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿತ್ತು. ಆದರೆ ಈಗಿನ ವರದಿಯಲ್ಲಿ ಈ ದೋಷ ಅಂದಾಜನ್ನು ಶೇ. 4ಕ್ಕೆ ಇಳಿಸಲಾಗಿದೆ. ಅಂದರೆ ಶೇ. 97ಕ್ಕಿಂತ ಶೇ. 4 ಹೆಚ್ಚು ಅಥವಾ ಕಡಿಮೆ ಮಳೆಯಾಗಬಹುದು ಎಂದು ರಮೇಶ್ ಹೇಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.