ಲಾಕ್‌ಡೌನ್‌ ಸಮಯದಲ್ಲಿ 1 ಗಂಟೆಗೆ 90 ಕೋಟಿ ರೂ. ಗಳಿಸಿದ ಮುಖೇಶ್‌ ಅಂಬಾನಿ!


Team Udayavani, Sep 29, 2020, 5:32 PM IST

ambani

ಮಣಿಪಾಲ: ಮುಖೇಶ್‌ ಅಂಬಾನಿ ಕಳೆದ 6 ತಿಂಗಳಿಂದ ಪ್ರತಿ ಗಂಟೆಗೆ 90 ಕೋಟಿ ರೂ. ಗಳಿಸುತ್ತಿದ್ದಾರಂತೆ. ಅದೂ ಕೋವಿಡ್‌ ತಂದೊಡ್ಡಿದ ಸಮಸ್ಯೆಗಳ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಳ್ಳುತ್ತಿರುವ ಈ ಸಮಯದಲ್ಲಿ ಈ ಸುದ್ದಿ ಸಹಜವಾಗಿ ಆಶ್ಚರ್ಯ ಉಂಟುಮಾಡಿದೆ.

ಈ ಮಾಹಿತಿಯನ್ನು ಹುರುನ್‌ ಇಂಡಿಯಾ ಮತ್ತು ಐಐಎಓಎಲ್‌ ವೆಲ್ತ್‌ ಮ್ಯಾನೇಜ್ಮೆಂಟ್‌ ಲಿಮಿಟೆಡ್‌ ತಮ್ಮ ವರದಿಯಲ್ಲಿ ನೀಡಿದೆ. ಇಂದು ಐಐಎಫ್ಎಲ್‌ ವೆಲ್ತ್‌ ಹುರುನ್‌ ಇಂಡಿಯಾ ರಿಚ್‌ ಲಿಸ್ಟ್‌-2020ರ ಒಂಬತ್ತನೇ ಲಿಸ್ಟ್‌ ಬಿಡುಗಡೆಯಾಗಿದೆ. 2020ರ ಆಗಸ್ಟ್‌ 31ರ ವೇಳೆಗೆ 1,000 ಕೋಟಿ ಅಥವ ಅದಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಭಾರತದ ಶ್ರೀಮಂತ ಜನರು ಈ ಪಟ್ಟಿಗೆ ಸೇರುತ್ತಾರೆ.

ಅಂಬಾನಿ ಸತತ 9ನೇ ವರ್ಷಕ್ಕೆ ಪ್ರಥಮ ಸ್ಥಾನ
ಈ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಖೇಶ್‌ ಅಂಬಾನಿ ಸತತ 9ನೇ ವರ್ಷವೂ ಅಗ್ರ ಸ್ಥಾನದಲ್ಲಿದ್ದಾರೆ. ವರದಿಯ ಪ್ರಕಾರ ಮುಖೇಶ್‌ ಅಂಬಾನಿಯ ಒಟ್ಟು ಆದಾಯ 6,58,400 ಕೋಟಿ ರೂಪಾಯಿ. ಕಳೆದ 12 ತಿಂಗಳಲ್ಲಿ ಅವರ ಒಟ್ಟು ಸಂಪತ್ತು ಶೇ. 73ರಷ್ಟು ವೃದ್ಧಿಯಾಗಿದೆ‌ಯಂತೆ. ಈ ವರದಿಯಲ್ಲಿ 828 ಭಾರತೀಯರು ಸೇರಿದ್ದಾರೆ.

ವರದಿಯ ಪ್ರಕಾರ 63 ವರ್ಷದ ಅಂಬಾನಿ ಲಾಕ್‌ಡೌನ್‌ ಸಮಯದಲ್ಲಿ ಪ್ರತಿ ಗಂಟೆಗೆ 90 ಕೋಟಿ ರೂ. ಗಳಿಸಿದ್ದಾರೆ. ಅಂದರೆ ಮಾರ್ಚ್‌ನಿಂದ ಆಗಸ್ಟ್‌ ವರೆಗೆ. ಪ್ರಸ್ತುತ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಅಂಬಾನಿ ಬಳಿಕ ಹಿಂದೂಜಾ ಬ್ರದರ್ಸ್‌
ಲಂಡನ್‌ ಮೂಲದ ಹಿಂದೂಜಾ ಸಹೋದರರು (ಎಸ್‌ಪಿ ಹಿಂದೂಜಾ, ಅವರ ಮೂವರು ಸಹೋದರರು) 1,43,700 ಕೋಟಿ ರೂ. ಆಸ್ತಿಯೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ 1,43,700 ಕೋಟಿ ಎಂದು ಹೇಳಲಾಗಿದೆ. ಪಟ್ಟಿಯಲ್ಲಿ ಮೂರನೇ ಸ್ಥಾನ ಎಚ್‌ಸಿಎಲ್‌ ಸಂಸ್ಥಾಪಕ ಶಿವ ನಾಡರ್‌ ಇದ್ದು, ಅವರ ಆಸ್ತಿ 1,41,700 ಕೋಟಿ ರೂ.ಗಳು. ಅನಂತರದ ಸ್ಥಾನಗಳಲ್ಲಿ ಗೌತಮ್‌ ಅದಾನಿ ಮತ್ತು ಕುಟುಂಬ ನಾಲ್ಕನೇ ಸ್ಥಾನ ಮತ್ತು ಅಜೀಮ್‌ ಪ್ರೇಮ್‌ಜಿ ಐದನೇ ಸ್ಥಾನದಲ್ಲಿದ್ದಾರೆ.

ರಾಧಾಕಿಶನ್‌ ದಮಾನಿ ಅವರಿಗೆ ಸ್ಥಾನ
ಅವೆನ್ಯೂ ಸೂಪರ್‌ ಮಾರ್ಟ್‌ಗಳ ಸಂಸ್ಥಾಪಕ ರಾಧಾಕಿಶನ್‌ ದಮಾನಿ 2020ರ ಹುರುನ್‌ ಇಂಡಿಯಾ ಶ್ರೀಮಂತ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಟಾಪ್‌ 10 ಪಟ್ಟಿಯಲ್ಲಿರುವ ಇತರ ಹೆಸರುಗಳಲ್ಲಿ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಸೈರಸ್‌ ಎಸ್‌. ಪೂನವಾಲಾ, ಕೊಟಕ್‌ ಮಹೀಂದ್ರಾ ಬ್ಯಾಂಕಿನ ಉದಯ್‌ ಕೊಟಕ್‌, ಸನ್‌ ಫಾರ್ಮಾದ ದಿಲೀಪ್‌ ಶಾಂಘ್ವಿ ಮತ್ತು ಪಾಲ್ಲೊಂಜಿ ಗುಂಪಿನ ಸೈರಸ್‌ ಪಾಲೂಂಜಿ ಮಿಸ್ತ್ರಿ ಮತ್ತು ಶಪೂರ್ಜಿ ಪಲೋಂಜಿ ಮಿಸ್ತ್ರಿ ಸೇರಿದ್ದಾರೆ.

 

 

 

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.