ಮುಂಬಯಿ: ಬಾಲಕಿಯ ಮೇಲೆ ಕ್ರೂರ ಬಲಾತ್ಕಾರ 


Team Udayavani, Sep 13, 2021, 6:50 AM IST

ಮುಂಬಯಿ: ಬಾಲಕಿಯ ಮೇಲೆ ಕ್ರೂರ ಬಲಾತ್ಕಾರ 

ಚೆನ್ನೈ/ಮುಂಬಯಿ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‌ನಗರದಲ್ಲಿ 15 ವರ್ಷ ಬಾಲಕಿಯ ಮೇಲೆ ಕಿಡಿಗೇಡಿಗಳು ಅತ್ಯಾಚಾರ ಎಸಗಿದ್ದಾರೆ. ಜತೆಗೆ ಆಕೆಯ ತಲೆಯ ಮೇಲೆ ಸುತ್ತಿಗೆಯಲ್ಲಿ ಏಟು ಹಾಕಿದ ಕ್ರೂರ ಘಟನೆ ನಡೆದಿದೆ.

ಮುಂಬಯಿಯಲ್ಲಿ ನಿರ್ಭಯಾ ಮಾದರಿಯಲ್ಲಿ ಅತ್ಯಾಚಾರ ಘಟನೆ ನಡೆದ ಬೆನ್ನಲ್ಲೇ ಈ ಕುಕೃತ್ಯ ನಡೆದಿದೆ.

ಉಲ್ಲಾಸ್‌ನಗರ ಘಟನೆಗೆ ಸಂಬಂಧಿಸಿದಂತೆ ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಶ್ರೀಕಾಂತ ಗಾಯಕ್ವಾಡ್‌ ಎಂಬಾತನನ್ನು ಬಂಧಿಸಲಾ­ಗಿದೆ ಎಂದು ರೈಲ್ವೇ ಪೊಲೀಸರು ರವಿವಾರ ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿತ್ತು. ಶಿರ್ಡಿಯಿಂದ ಉಲ್ಲಾಸ್‌ನಗರಕ್ಕೆ ರೈಲಿನಲ್ಲಿ ಆಗಮಿಸಿದ್ದ ಬಾಲಕಿ ಸ್ಕೈವಾಕ್‌ನಲ್ಲಿ ಇಬ್ಬರು ಸ್ನೇಹಿತೆಯರ ಜತೆ ನಡೆದು ಕೊಂಡು ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಶ್ರೀಕಾಂತ ಗಾಯಕ್ವಾಡ್‌ ಆಕೆ ಧರಿಸಿದ್ದ ಶಿರವಸ್ತ್ರ ತೆಗೆದಿದ್ದಾನೆ. ಅನಂತರ ಸುತ್ತಿಗೆಯಿಂದ ಏಟು ಹಾಕಿ, ಆಕೆಯ ಸ್ನೇಹಿತರನ್ನು ಬೆದರಿಸಿದ್ದಾನೆ. ಅನಂತರ ರೈಲ್ವೇ ನಿಲ್ದಾಣದ ಬಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಸ್ಥಳದಿಂದ ಬಾಲಕಿ ಪರಾರಿಯಾಗಲು ಯತ್ನಿಸಿದಾಗ ಆಕೆಯನ್ನು ಥಳಿಸಿದ್ದಾನೆ. ಇದರ ಹೊರತಾಗಿಯೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಆಕೆಯ ತಲೆಗೆ ಗಾಯಗಳಾಗಿದ್ದು, ಉಲ್ಲಾಸ್‌ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಪ್ರಕರಣದ ವಿರುದ್ಧ ಕಲ್ಯಾಣ್‌ ರೈಲ್ವೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮತ್ತೂಂದೆಡೆ, ಮುಂಬಯಿಯಲ್ಲಿ ಸಾಮೂಹಿಕ ಅತ್ಯಾ ಚಾರಕ್ಕೊಳಗಾಗಿ ಬಲಿಯಾದ 34 ವರ್ಷದ ಮಹಿಳೆಯ ಕುಟುಂಬ ಸದಸ್ಯರನ್ನು ರವಿವಾರ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು)ದ ತಂಡ ಭೇಟಿಯಾಗಿದೆ.

ಕೇಸು ದಾಖಲಿಸದ ಪೊಲೀಸರು :

ರೈಲ್ವೇ ಪೊಲೀಸ್‌ ಆಯುಕ್ತ ಖಾಸಿರ್‌ ಖಾಲಿದ್‌ ನೀಡಿದ ಮಾಹಿತಿ ಪ್ರಕಾರ ಥಾಣೆಯ ಎರಡು ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದವು. ಘಟನೆ ನಡೆದ ಪ್ರದೇಶ ಯಾವ ಠಾಣೆಯ ವ್ಯಾಪ್ತಿಗೆ ಬರುತ್ತದೆ ಎಂಬ ಬಗ್ಗೆ ಗೊಂದಲ ಇದ್ದುದರಿಂದ ಈ ರೀತಿಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ.

ಚೆನ್ನೈಯಲ್ಲಿ ಅತ್ಯಾಚಾರ :

ಇದೇ ವೇಳೆ ತಮಿಳುನಾಡು ರಾಜಧಾನಿ ಚೆನ್ನೈಯಲ್ಲಿ ನಾಲ್ವರು ಕಿಡಿಗೇಡಿಗಳು 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್‌ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಗುಣಶೀಲನ್‌ ಎಂಬಾತನ ಪರಿಚಯ ಉಂಟಾಗಿತ್ತು. ಆಕೆಗೆ ಮಾದಕ ಪೇಯ ನೀಡಿ ಕಾರ್‌ನಲ್ಲಿಯೇ ಅತ್ಯಾಚಾರವೆಸಗಿದ್ದಾರೆ.  ಪ್ರಜ್ಞೆ ಬಂದಾಗ ಆಕೆ ಕೂಗಾಡುತ್ತಾ ಕಾರಿನ ಗಾಜನ್ನು ಒಡೆಯಲು ಯತ್ನಿಸುತ್ತಿದ್ದಾಗ, ಶಬ್ದ ಕೇಳಿ ಸ್ಥಳೀಯರು ಅಲ್ಲಿಗೆ ಧಾವಿಸಿದ್ದಾರೆ. ಕೂಡಲೇ ಕಾರು ಸ್ಟಾರ್ಟ್‌ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ದಾರಿ ಮಧ್ಯೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವತಿಯನ್ನು ಕಾರಿನಿಂದ ಕೆಳಕ್ಕೆಸೆದಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.