ವಿಶ್ವದ ಟಾಪ್‌-15 ಶ್ರೀಮಂತ ನಗರಗಳ ಪಟ್ಟಿಯಲ್ಲಿ ಮುಂಬಯಿ !


Team Udayavani, Feb 13, 2018, 5:03 PM IST

1202mum09mumbaiCity.jpg

ಮುಂಬಯಿ: ದೇಶದ ವಾಣಿಜ್ಯ ರಾಜಧಾನಿ ಮುಂಬಯಿ ವಿಶ್ವದ ಅಗ್ರ 15 ಶ್ರೀಮಂತ ನಗರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.  ಹೌದು, ನ್ಯೂ ವರ್ಲ್ಡ್ ವೆಲ್ತ್‌ ವರದಿಯ ಪ್ರಕಾರ, ಮುಂಬಯಿ ಒಟ್ಟು 950 ಬಿಲಿಯನ್‌ ಡಾಲರ್‌ (ಸುಮಾರು 61 ಲಕ್ಷ ಕೋಟಿ ರೂಪಾಯಿ)ಸಂಪತ್ತಿನೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ನಗರಗಳ ಪಟ್ಟಿಯಲ್ಲಿ 12 ನೇ ಸ್ಥಾನವನ್ನು ಪಡೆದಿದೆ. ಇದರೊಂದಿಗೆ ಮುಂಬಯಿ ನಗರವು ಟೊರೊಂಟೊ ಮತ್ತು ಪ್ಯಾರಿಸ್‌ನಂತಹ ನಗರಗಳನ್ನು ಹಿಂದಿಕ್ಕಿದೆ. ವಿಶೇಷವೆಂದರೆ, ನ್ಯೂ ವರ್ಲ್ಡ್ ವೆಲ್‌§ ಇತ್ತೀಚಿನ ವರದಿಯೊಂದರಲ್ಲಿ ಭಾರತ ಕೂಡ ವಿಶ್ವದ ಶ್ರೀಮಂತ ದೇಶಗಳ ಪಟ್ಟಿಯಲ್ಲಿ 6ನೇ ಸ್ಥಾನವನ್ನು ಪಡೆದುಕೊಂಡಿತ್ತು.

ವಿಶ್ವದ ಶ್ರೀಮಂತ ನಗರಗಳ ಈ ಪಟ್ಟಿಯಲ್ಲಿ ಅಮೆರಿಕದ ನ್ಯೂಯಾರ್ಕ್‌ ನಗರವು 3 ಟ್ರಿಲಿಯನ್‌ ಡಾಲರ್‌ (ಸುಮಾರು 193 ಲಕ್ಷ ಕೋ.ರೂ.)ಸಂಪತ್ತಿನೊಂದಿಗೆ ಮೊದಲ ಸ್ಥಾನವನ್ನು ಪಡೆದಿದೆ. ಇದರ  ಬಳಿಕ 173 ಲಕ್ಷ ಕೋ.ರೂ. ಆಸ್ತಿಯೊಂದಿಗೆ ಲಂಡನ್‌ ಎರಡನೇ ಹಾಗೂ 161 ಲಕ್ಷ ಕೋ.ರೂ. ಆಸ್ತಿಯೊಂದಿಗೆ ಟೋಕಿಯೋ ಮೂರನೇ ಸ್ಥಾನದಲ್ಲಿದೆ. ಸ್ಯಾನ್‌ ಫ್ರಾನ್ಸಿಸ್ಕೋ (147 ಲಕ್ಷ ಕೋ.ರೂ.) ಮತ್ತು ಬೀಜಿಂಗ್‌ (141 ಲಕ್ಷ ಕೋ.ರೂ.)ನಗರಗಳು ಪಟ್ಟಿಯಲ್ಲಿ ಕ್ರಮವಾಗಿ 4ನೇ ಮತ್ತು 5ನೇ ಸ್ಥಾನದಲ್ಲಿವೆ.

ಮುಂಬಯಿಯ ಒಟ್ಟು ಸಂಪತ್ತು 950 ಬಿಲಿಯನ್‌ ಡಾಲರ್‌(ಸುಮಾರು 61 ಲಕ್ಷ ಕೋ.ರೂ.)  ಆಗಿದೆ. ಮುಂಬಯಿ ಭಾರತದ ಆರ್ಥಿಕ ಕೇಂದ್ರವಾಗಿದೆ. ಇದಲ್ಲದೆ ವಿಶ್ವದ  12ನೇ ಅತಿದೊಡ್ಡ ಸ್ಟಾಕ್‌ ಎಕ್ಸ್‌ಚೇಂಜ್‌ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬಾಂಬೇ ಸ್ಟಾಕ್‌ ಎಕ್ಸ್‌ಚೆಂಜ್‌ ಕೂಡ ನಗರದಲ್ಲಿದೆ. ನಗರದಲ್ಲಿ ವಾಣಿಜ್ಯ ಸೇವೆಗಳು, ರಿಯಲ್‌ ಎಸ್ಟೇಟ್‌ ಮತ್ತು ಮೀಡಿಯಾ ಇಂಡಸ್ಟ್ರಿಗಳಿವೆ ಎಂದು ಮುಂಬಯಿ ಮಹಾನಗರದ ಬಗ್ಗೆ ನ್ಯೂ ವರ್ಲ್ಡ್ ವೆಲ್ತ್‌ ವರದಿಯಲ್ಲಿ ವಿವರಿಸಲಾಗಿದೆ.

ಏನಿದು ಒಟ್ಟು ಸಂಪತ್ತು ?

ಯಾವುದೇ ದೇಶ ಅಥವಾ ನಗರದಲ್ಲಿ ವಾಸಿಸುವ ಜನರ ಒಟ್ಟು ಖಾಸಗಿ ಸಂಪತ್ತು ಆ ದೇಶ ಅಥವಾ ನಗರದ ಒಟ್ಟು ಸಂಪತ್ತು ಆಗಿರುತ್ತದೆ. ಇದರಲ್ಲಿ ಜನರ ಆಸ್ತಿ, ನಗದು, ಷೇರು, ಬಿಜ್‌ನೆಸ್‌ ಇಂಟ್ರೆಸ್ಟ್‌ ಅನ್ನು ಸೇರಿಸಿಕೊಳ್ಳಲಾಗುತ್ತದೆ. ಆದರೆ, ಈ ವರದಿಯಲ್ಲಿ ಸರಕಾರಿ ನಿಧಿಗಳನ್ನು ಸೇರಿಸಿಕೊಳ್ಳಲಾಗಿಲ್ಲ ಎಂದು ನ್ಯೂ ವರ್ಲ್ಡ್ ವೆಲ್‌§ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಮುಂಬಯಿಯಲ್ಲಿ 28 ಶತಕೋಟ್ಯಾಧಿಪತಿಗಳು
ಶತಕೋಟ್ಯಾಧಿಪತಿಗಳ ವಿಷಯದಲ್ಲೂ ಮುಂಬಯಿ ವಿಶ್ವದ ಅಗ್ರ 10 ನಗರಗಳಲ್ಲಿ ಒಂದಾಗಿದೆ. ಮುಂಬಯಿಯಲ್ಲಿ ಒಟ್ಟು 28 ಶತಕೋಟ್ಯಾಧಿಪತಿಗಳು ಇದ್ದಾರೆ. ಅಲ್ಲದೆ, ಮುಂಬಯಿ ರಾಷ್ಟ್ರದ ಅತ್ಯಂತ ಶ್ರೀಮಂತ ನಗರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
 

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.