Tragedy: ಬೆಳ್ಳಂಬೆಳಗ್ಗೆ 17 ವರ್ಷದ ಯುವಕನ ಹುಚ್ಚಾಟಕ್ಕೆ ಹಾಲು ವಿತರಕ ಮೃತ್ಯು…
Team Udayavani, Aug 30, 2024, 12:00 PM IST
ಮುಂಬಯಿ: ಹದಿನೇಳು ವರ್ಷದ ಯುವಕನೊಬ್ಬ ಚಲಾಯಿಸುತ್ತಿದ್ದ ಎಸ್ಯುವಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಗೋರೆಗಾಂವ್ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.
ಮೃತ ಯುವಕನನ್ನು ನವೀನ್ ವೈಷ್ಣವ್(24) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಕಾರು ಚಲಾಯಿಸುತ್ತಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದು ಜೊತೆಗೆ ಆತ ಚಲಾಯಿಸುತ್ತಿದ್ದ ಎಸ್ಯುವಿ ಕಾರನ್ನು ವಶಕ್ಕೆ ಪಡೆದ ಪೊಲೀಸರು ಕಾರಿನ ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಏನಿದು ಪ್ರಕರಣ:
ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆಯ ವೇಳೆಗೆ ಗೋರೆಗಾಂವ್ ಪ್ರದೇಶದ ಕಾಲೊನಿಯೊಂದರಲ್ಲಿ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಅದೇ ಕಾಲೋನಿಯಲ್ಲಿ ಹಾಲು ವಿತರಣೆ ಮಾಡುತ್ತಿದ್ದ ನವೀನ್ ವೈಷ್ಣವ್ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ ಬಳಿಕ ಮುಂದೆ ಸಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಡಿಕ್ಕಿಯ ರಭಸಕ್ಕೆ ನವೀನ್ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತ ನಡೆಸಿದ ಯುವಕ ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಆದರೆ ಅಪಘಾತದಲ್ಲಿ ಆತನೂ ಗಾಯಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ, ಅಷ್ಟೋತ್ತಿಗಾಗಲೇ ಪೊಲೀಸರು ಬಂದು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಯುವಿ ಕಾರಿನ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ ಮೊಹಮ್ಮದ್ ಫಾಜ್ ಇಕ್ಬಾಲ್ ಜಿವಾನಿ (21) ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಕಾರನ್ನೂ ವಶಕ್ಕೆ ಪಡುದುಕೊಂಡಿದ್ದಾರೆ.
ಅಪಘಾತದ ವೇಳೆ ಯುವಕ ಮದ್ಯದ ಅಮಲಿನಲ್ಲಿದ್ದನೇ ಎಂಬುದನ್ನು ತಿಳಿಯಲು ಯುವಕನ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.