ಮಧುರ್ ಭಂಡಾರ್ಕರ್ ಕೊಲೆ ಸಂಚು: ಪ್ರೀತಿ ಜೈನ್ಗೆ 3 ವರ್ಷ ಜೈಲು
Team Udayavani, Apr 28, 2017, 2:53 PM IST
ಮುಂಬಯಿ : ಹಿಂದಿ ಚಿತ್ರ ನಿರ್ಮಾಪಕ – ನಿರ್ದೇಶಕ ಮಧುರ್ ಭಂಡಾರ್ಕರ್ ಅವರನ್ನು ಕೊಲ್ಲುವ ಸಂಚು ರೂಪಿಸಿದ್ದ ಅಪರಾಧಕ್ಕಾಗಿ ರೂಪದರ್ಶಿ ಪ್ರೀತಿ ಜೈನ್ ಅವರಿಗೆ ಸಿಟಿ ಸಿವಿಲ್ ಮತ್ತು ಸೆಶನ್ಸ್ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡವನ್ನು ವಿಧಿಸಿದೆ.
ಈ ಹಿಂದೆ ಮಧುರ್ ಭಂಡಾರ್ಕರ್ ವಿರುದ್ಧ ಪ್ರೀತಿ ಜೈನ್ ಅತ್ಯಾಚಾರದ ದೂರನ್ನು ದಾಖಲಿಸಿದ್ದಳು.
ಮಧುರ್ ಭಂಡಾರ್ಕರ್ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದುದಕ್ಕಾಗಿ ಪ್ರೀತಿ ಜೈನ್ಳ ಇಬ್ಬರು ಸಹವರ್ತಿಗಳಾದ ನರೇಶ್ ಪರ್ದೇಶಿ ಮತ್ತು ಶಿವರಾಮ್ ದಾಸ್ ಅವರಿಗೂ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಈ ಕೊಲೆ ಸಂಚಿನ ಪ್ರಕರಣದಲ್ಲಿ ಉತ್ತರ ಪ್ರದೇಶದ ಇನ್ನಿಬ್ಬರು ಆರೋಪಿಗಳ ವಿರುದ್ಧ ಸರಿಯಾದ ಸಾಕ್ಷ್ಯಾಧಾರಗಳು ದೊರಕದ ಕಾರಣಕ್ಕೆ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದ ಒಡನೆಯೇ ಪ್ರೀತಿ ಜೈನ್ ಆ ತೀರ್ಪಿನ ಅಮಾನತಿಗೆ ಮನವಿ ಮಾಡಿಕೊಂಡಳು.
ಮಧುರ್ ಭಂಡಾರ್ಕರ್ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ ಒಂದು ವರ್ಷದ ತರುವಾಯ ಪ್ರೀತಿ ಜೈನ್ 2005ರಲ್ಲಿ ಪರ್ದೇಶಿಯನ್ನು ಸಂಪರ್ಕಿಸಿ ಭಂಡಾರ್ಕರ್ನನ್ನು ಮುಗಿಸಿಬಿಡಲು ಆತನಿಗೆ 75,000 ರೂ. ಪಾವತಿಸಿದ್ದಳು ಎಂದು ಆರೋಪಿಸಲಾಗಿದೆ.
ಆದರೆ ಪರ್ದೇಶಿ ತನ್ನ ಕೆಲಸವನ್ನು ಮಾಡಿ ಮುಗಿಸದ ಕಾರಣಕ್ಕೆ ಪ್ರೀತಿ ಜೈನ್ ಆತನಿಗೆ ತಾನು ಕೊಟ್ಟಿದ್ದ 75,000 ರೂ.ಗಳನ್ನು ಹಿಂದಿರುಗಿಸಬೇಕೆಂದು ಕೇಳಿದ್ದಳು.
ಈ ವಿಷಯವು ಗಾವಳಿಯನ್ನು ಮುಟಿಟದಾಗ ಆತ ತನ್ನ ವ್ಯಕ್ತಿಗಳನ್ನು ಕಳುಹಿಸಿ ಪೊಲೀಸರನ್ನು ಜಾಗೃತಗೊಳಿಸಿದ್ದ.
ವಾರಪೂರ್ತಿ ತನಿಖೆಯ ಬಳಿಕ ಪಲೀಸರು 2005ರ ಸೆಪ್ಟಂಬರ್ 10ರಂದು ಪ್ರೀತಿ ಜೈನ್ ವಿರುದ್ಧ ಕೊಲೆ ಸಂಚಿನ ಆರೋಪ ಹೊರಿಸಿದ್ದರು. ಅದೇ ದಿನ ಪರ್ದೇಶಿಯನ್ನು ಬಂಧಿಸಲಾಗಿತ್ತು. ಪ್ರೀತಿ ಜೈನ್ ಅಂದು ವಾರ್ಸೋವಾ ಪೊಲೀಸ್ ಠಾಣೆಯತ್ತ ಸಾಗುತ್ತಿದ್ದಾಗ ಆಕೆಯನ್ನು ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.