![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 11, 2022, 2:27 PM IST
ಮುಂಬೈ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂನ ‘ಡಿ’ ಕಂಪನಿಗೆ ಸಂಬಂಧಿಸಿದ ಐವರನ್ನು ಮುಂಬೈ ಕ್ರೈಂ ಬ್ರಾಂಚ್ ಮಂಗಳವಾರ ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಲಿಗೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ಶಕೀಲ್ನ ಸೋದರ ಮಾವ ಸಲೀಂ ಖುರೇಷಿ ಅಲಿಯಾಸ್ ಸಲೀಂ ಫ್ರೂಟ್ ಮತ್ತು ಉದ್ಯಮಿ ರಿಯಾಜ್ ಭಾಟಿಯನ್ನು ಪೊಲೀಸರ ಸುಲಿಗೆ ನಿಗ್ರಹ ದಳ (ಎಇಸಿ) ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಕಠಿಣ ಆರೋಪ ಹೊರಿಸಿ ಇತ್ತೀಚೆಗೆ ಬಂಧಿಸಿತ್ತು.
ಇದನ್ನೂ ಓದಿ: ಜೈಲಿನಲ್ಲಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಅಲ್ತಾಫ್ ಶಾ ನಿಧನ
ಪ್ರಕರಣದ ಹೆಚ್ಚಿನ ತನಿಖೆಯ ಸಮಯದಲ್ಲಿ, ಅಜಯ್ ಗಂಡ, ಫಿರೋಜ್ ಚಮ್ದಾ, ಸಮೀರ್ ಖಾನ್, ಪಾಪಾ ಪಠಾಣ್ ಮತ್ತು ಅಮ್ಜದ್ ರೆಡ್ಕರ್ ಎಂಬ ಐದು ಜನರ ಪಾತ್ರವು ಬೆಳಕಿಗೆ ಬಂದಿತ್ತು ಆದ್ದರಿಂದ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜತೆ ಸಂಪರ್ಕ ಹೊಂದಿದ್ದ ರಿಯಾಜ್ ಭಾಟಿಯನ್ನು ಮುಂಬೈನ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಬಂಧಿಸಲಾಗಿತ್ತು.
ವರ್ಸೋವಾದ ಉದ್ಯಮಿಯೊಬ್ಬರನ್ನು ಬೆದರಿಸಿ ಆತನಿಂದ 30 ಲಕ್ಷ ರೂ. ಮೌಲ್ಯದ ಕಾರು ಮತ್ತು 7.5 ಲಕ್ಷ ರೂ. ನಗದು ಬೇಡಿಕೆಯಿಟ್ಟಿದ್ದಾರೆ ಎಂದು ಪೊಲೀಸರು ಮೊದಲು ತಿಳಿಸಿದ್ದರು. ಇಬ್ರಾಹಿಂ ಅವರ ಆಪ್ತ ಸಹಾಯಕ ಛೋಟಾ ಶಕೀಲ್ ಮತ್ತು ಶಕೀಲ್ ಸಂಬಂಧಿ ಸಲೀಂ ಫ್ರೂಟ್ ಅವರನ್ನೂ ಎಫ್ಐಆರ್ನಲ್ಲಿ ಹೆಸರಿಸಲಾಗಿದೆ.
ಎಇಸಿ ಇತ್ತೀಚೆಗೆ ದಾವೂದ್ ಇಬ್ರಾಹಿಂ ಗ್ಯಾಂಗ್ನ ಭಯೋತ್ಪಾದಕ ಚಟುವಟಿಕೆಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಲೀಂ ನನ್ನು ಎನ್ಐಎ ವಶಕ್ಕೆ ತೆಗೆದುಕೊಂಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.