
ಮಹಾ ಮಳೆಗೆ ಮುಂಬಯಿ ತತ್ತರ; ಮಲಾಡ್ ಗೋಡೆ ಕುಸಿತ ಬಲಿ ಸಂಖ್ಯೆ 21ಕ್ಕೆ
Team Udayavani, Jul 2, 2019, 7:31 PM IST

ಮುಂಬಯಿ : ನಿನ್ನೆ ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಮುಂಬಯಿ ಮಹಾನಗರಿ ತತ್ತರಿಸುತ್ತಿದ್ದು ಪೂರ್ವ ಮಲಾಡ್ನಲ್ಲಿ ಗೋಡೆ ಕುಸಿತಕ್ಕೆ ಬಲಿಯಾದವರ ಸಂಖ್ಯೆ 21ಕ್ಕೆ ಏರಿರುವುದಾಗಿ ವರದಿಯಾಗಿದೆ.
ಇದೇ ವೇಳೆ ಭಾರತೀಯ ಹವಾಮಾನ ಇಲಾಖೆ, ಪ್ರವಾಸಿಗರು ಮಹಾರಾಷ್ಟ್ರದಲ್ಲಿನ ಬೆಟ್ಟ ಪ್ರದೇಶಗಳಿಗೆ ಹೋಗಬಾರದೆಂಬ ಎಚ್ಚರಿಕೆ ನೀಡಿದೆ.
ಮಹಾ ನಗರಿಯ ಬಹುತೇಕ ಎಲ್ಲ ರಸ್ತೆಗಳು ನೀರಿನಲ್ಲಿ ಮುಳುಗಿದ್ದು ಭಾರತೀಯ ನೌಕಾ ಪಡೆ ರಕ್ಷಣಾ ಕಾರ್ಯದಲ್ಲಿ ನೆರವಾಗುತ್ತಿದೆ. ಮುಂಬಯಿಯಲ್ಲಿ ವಿಮಾನ ಸಾರಿಗೆ ತೀವ್ರವಾಗಿ ಬಾಧಿತವಾಗಿದೆ.
ಮುಂಬಯಿಯ ಅನೇಕ ಪ್ರದೇಶಗಳಲ್ಲಿ ಕಳೆದ 24 ತಾಸುಗಳಲ್ಲಿ 20 ಮಿ.ಮೀ.ಗಿಂತಲೂ ಅಧಿಕ ಮಳೆಯಾಗಿದೆ. ನಗರ ಹೊರವಲಯದ ಮುಲುಂದ್ ನಲ್ಲಿ ಹೌಸಿಂಗ್ ಸೊಸೈಟಿಯ ಗೋಡೆ ಕುಸಿದ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತ ಪಟ್ಟಿರುವ 45 ವರ್ಷ ಪ್ರಾಯದ ವಾಚ್ ಮ್ಯಾನ್ ನನ್ನು ಗಂಭೀರ್ ಕರಿ ಸಿಂಗ್ ಎಂದು ಗುರುತಿಸಲಾಗಿದೆ.
ಮುಲುಂದ್ ನಲ್ಲಿ ಮೃತಪಟ್ಟಿರುವ ಇನ್ನೋರ್ವ 22ರ ಹರೆಯದ ತರುಣ ಗೋಪಾಲ್ ಝಾ ವಿದ್ಯುದಾಘಾತಕ್ಕೆ ಗುರಿಯಾಗಿ ಸಾವಪ್ಪಿದನೆಂದು ವರದಿಯಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.