![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 8, 2018, 11:15 AM IST
ಮುಂಬಯಿ : ಭಾರತೀಯ ಕ್ರಿಕೆಟ್ ರಂಗದ ದೇವರು ಎಂದೇ ಪರಿಗಣಿತರಾಗಿರುವ ಭಾರತ ರತ್ನ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆಯನ್ನು ತೆರೆದ ನಿತಿನ್ ಶಿಶೋಡೆ ಎಂಬ ಸಾಫ್ಟ್ ವೇರ್ ಇಂಜಿನಿಯರ್ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ತೆಂಡೂಲ್ಕರ್ ಪುತ್ರಿ ಸಾರಾ ಹೆಸರಲ್ಲಿ ನಕಲಿ ಟ್ವಿಟರ್ ಖಾತೆಯನ್ನು ತೆರದ ಆರೋಪಿ ಟೆಕ್ಕಿ ಶಿಶೋಡೆ ಅದರಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟಿಂಗ್ಗಳನ್ನು ಹಾಕುತ್ತಿದ್ದ.
ಮುಂಬಯಿ ಪೊಲೀಸರು ನಗರದ ಅಂಧೇರಿ ಪ್ರದೇಶದಲ್ಲಿ ಆರೋಪಿ ನಿತಿನ್ ಶಿಶೋಡೆಯನ್ನು ಬಂಧಿಸಿದರು.
ತಿಂಗಳ ಹಿಂದೆ ಸಾರಾ ತೆಂಡೂಲ್ಕರ್ಗೆ ಪೋನಿನಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ 32ರ ಹರೆಯದ ವ್ಯಕ್ತಿಯನ್ನು ಪಶ್ಚಿಮ ಬಂಗಾಲದಲ್ಲಿ ಬಂಧಿಸಲಾಗಿತ್ತು. ಆತನನ್ನು ಮುಂಬಯಿ ಪೊಲೀಸರು ಮತ್ತು ಪಶ್ಚಿಮ ಬಂಗಾಲ ಪೊಲೀಸರ ಜಂಟಿ ತಂಡ ಪೂರ್ವ ಮಿಡ್ನಾಪುರ ಜಿಲ್ಲೆಯ ಮಹಿಸದಾಲ್ ಎಂಬಲ್ಲಿ ಬಂಧಿಸಿತ್ತು.
ಮಹಿಸದಾಲ್ ಪೊಲೀಸ್ ಠಾಣೆಯ ಪ್ರಭಾರಾಧಿಕಾರಿ ಪಾರ್ಥ ಬಿಸ್ವಾಸ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ಸಾರಾ ತೆಂಡೂಲ್ಕರ್ಗೆ ಫೋನಿನಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪಿ ದೇಬಕುಮಾರ್ ಮೈತಿ ಎಂಬಾತನನ್ನು ಇಬ್ಬರು ಸದಸ್ಯರ ಮುಂಬಯಿ ಪೊಲೀಸ್ ತಂಡ ಮತ್ತು ನಮ್ಮ ಪೊಲೀಸ್ ಸಿಬಂದಿಗಳು ಬಂಧಿಸಿದ್ದರು’ ಎಂದು ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.