ಉಗ್ರ ಸಯೀದ್‌ಗೆ ಶಿಕ್ಷೆ: ಮುಸ್ಲಿಂ ಧಾರ್ಮಿಕ ನಾಯಕರ ಆಗ್ರಹ


Team Udayavani, Oct 19, 2017, 12:10 PM IST

96.jpg

ಮುಂಬಯಿ: ಭಾರತದಲ್ಲಿ 26/11 ಮುಂಬಯಿ ದಾಳಿ ಸಹಿತ ಹಲವು ವಿಧ್ವಂಸಕ ಕೃತ್ಯ ಎಸಗಿರುವ ಪಾಕಿಸ್ಥಾನದ ಉಗ್ರ ಲಷ್ಕರ್‌ -ಎ-ತಯ್ಯಬ ಮತ್ತು ಜಮಾತ್‌ – ಉದ್‌ – ದಾವಾದ ಮುಖಂಡ ಹಾಫಿಜ್‌ ಸಯೀದ್‌ಗೆ ಶಿಕ್ಷೆ ವಿಧಿಸುವಂತೆ ವಿಶ್ವಸಂಸ್ಥೆಯನ್ನು ಆಗ್ರಹಿಸುವ ನಿರ್ಣಯವೊಂದನ್ನು 1000ಕ್ಕೂ ಅಧಿಕ ಮುಸ್ಲಿಂ ಧಾರ್ಮಿಕ ಮುಖಂಡರು ಅಂಗೀಕರಿಸಿದ್ದಾರೆ. 

ಮದ್ರಸ  ದಾರೂಲ್‌ ಅಲಿ ಹಸನ್‌ ಅಹ್ಲೆ ಸುನ್ನತ್‌ನ ಸಮಾವೇಶದಲ್ಲಿ, ಜಮಾತ್‌ -ಉದ್‌-ದಾವಾ ಸಹಿತ ಪಾಕ್‌ನ ಉಗ್ರ ಸಂಘಟನೆಗಳನ್ನು ತೀಕ್ಷ್ಣ ವಾಗಿ ಖಂಡಿಸಲಾಗಿದೆ. ನಿರ್ಣಯ ವನ್ನು ವಿಶ್ವಸಂಸ್ಥೆಯ ಭಯೋತ್ಪಾದನೆ ನಿಗ್ರಹ ಸಮಿತಿಯ ಅಧ್ಯಕ್ಷರಾಗಿರುವ ಅಬ್ದುಲ್ಲತೀಫ್ ಅಬೌಲತ್ತ ಹಾಗೂ ಪ್ರತಿ ಯನ್ನು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿಕೊಡಲಾಗಿದೆ. 

ಹಾಫಿಜ್‌ ಸಯೀದ್‌ ಮತ್ತು ಅವನ ನೇತೃತ್ವದ ಉಗ್ರ ಸಂಘಟನೆಗಳು ಜಾಗತಿಕ ಶಾಂತಿಗೆ ಅಪಾಯಕಾರಿ ಯಾಗಿವೆ. ಅವನು ಭಾರತದವನ್ನು ನಂಬರ್‌ ಒನ್‌ ಶತ್ರು ಎಂದು ಹೇಳು ತ್ತಾನೆ. ಆದರೆ ಹಾಫಿಜ್‌ ಇಸ್ಲಾಂ ಮತ್ತು ಮಾನವೀಯತೆಯ ದೊಡ್ಡ ಶತ್ರುವಾಗಿದ್ದಾನೆ ಎಂದು ನಿರ್ಣಯ ಮಂಡಿಸಿದ ಇಸ್ಲಾಮಿಕ್‌ ಡಿಫೆನ್ಸ್‌ ಸೈಬರ್‌ ಸೆಲ್‌ ಎಂಬ ಎನ್‌ಜಿಒದ ಅಧ್ಯಕ್ಷರಾಗಿರುವ ಡಾ| ಅಬ್ದುಲ್‌ ರೆಹಮಾನ್‌ ಅಂಜಾರಿಯ ಹೇಳಿದ್ದಾರೆ. 2015ರಲ್ಲಿ ಅಂಜಾರಿಯ ಐಸಿಸ್‌ ವಿರುದ್ಧ ಜಗತ್ತಿನ ಅತಿ ದೊಡ್ಡ ಫ‌ತ್ವಾ ಹೊರಡಿಸಿ ಸುದ್ದಿಯಾಗಿದ್ದರು. ಭಾರತದ 1000ಕ್ಕೂ ಅಧಿಕ ಮುಸ್ಲಿಮ್‌ ಧಾರ್ಮಿಕ ಮುಖಂಡರು ಮತ್ತು ಮತ ಪಂಡಿತರು ಈ ಫ‌ತ್ವಾಕ್ಕೆ ಸಹಿ ಹಾಕಿ ದ್ದರು. ನಿನ್ನೆ ಅಂಗಿಕàರಿಸಿರುವ ನಿರ್ಣಯ  ಪಾಕ್‌ನಲ್ಲಿರುವ 60ಕ್ಕೂ ಅಧಿಕ ಉಗ್ರ ಸಂಘ ಟನೆಗಳನ್ನು ಹೆಸರಿ ಸಿದ್ದು, ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಶ್ವಸಂಸ್ಥೆಯನ್ನು ಆಗ್ರಹಿಸಿದೆ. 

ನೈತಿಕ ಬದ್ಧತೆ: ಇಸ್ಲಾಂ ಹೆಸರಲ್ಲಿ ಅಮಾಯಕ ಜನರನ್ನು ಸಾಯಿಸು ವವರನ್ನು ಮತ್ತು ಸಾಯಿಸುವವರಿಗೆ ಪ್ರೋತ್ಸಾಹ ನೀಡುವವರನ್ನು ವಿರೋಧಿ ಸುವುದು ನಮ್ಮ ನೈತಿಕ ಬದ್ಧತೆ. ಹಾಫಿಜ್‌ ಸಯೀದ್‌ ಯುವಕರಿಗೆ ಹಿಂಸಾ ಚಾರ ನಡೆಸಲು ಕುಮ್ಮಕ್ಕು ನೀಡುತ್ತಿರುವುದು ಸಂಶಯಾತೀತವಾಗಿ ಸಾಬೀತಾಗಿದೆ. ಹಾಫಿಜ್‌ ಮತ್ತು ಅವನು ಪ್ರತಿಪಾದಿಸುತ್ತಿರುವ ಸಿದ್ಧಾಂತವನ್ನು ವಿರೋಧಿಸುವುದು ಅಗತ್ಯ ಎಂದು ಮದ್ರಸ ದಾರೂಲ್‌ ಉಲೂಮ್‌ ಅಲಿ ಹಸನ್‌ ಅಹ್ಲೆ ಸುನ್ನತ್‌ನ ಪೋಷಕ ರಾಗಿರುವ ಮೌಲಾನ ಮೊಹಮ್ಮದ್‌ ಹಾಶೀಂ ಆಶ್ರಫಿ ಹೇಳಿದ್ದಾರೆ. 

ಹಾಫಿಜ್‌ ಸಯೀದ್‌ ಪಾಕಿಸ್ಥಾನದಲ್ಲಿ ಮಿಲ್ಲಿ ಮುಸ್ಲಿಮ್‌ ಲೀಗ್‌ ಎಂಬ ರಾಜಕೀಯ ಪಕ್ಷ ಸ್ಥಾಪಿಸಿರುವುದಕ್ಕೂ ಸಮಾವೇಶದಲ್ಲಿ ಕಳವಳ ವ್ಯಕ್ತವಾಗಿದೆ. ಪಾಕಿಸ್ಥಾನ ಅಣ್ವಸ್ತ್ರ ಹೊಂದಿರುವ ದೇಶವಾಗಿದ್ದು, ಒಂದು ವೇಳೆ ಅವನ ಪಕ್ಷ ಅಧಿಕಾರಕ್ಕೆ ಬಂದರೆ ಉಗ್ರರ ಕೈಗೆ ಅಧಿಕೃತವಾಗಿ ಅಣ್ವಸ್ತ್ರಗಳು ಸಿಕ್ಕಿ ದಂತಾಗುತ್ತದೆ. ಇದು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ದೊಡ್ಡ ಬೆದರಿಕೆಯಗಿ ಪರಿಣಮಿಸಬಹುದು. ಅವನು ಜಾಗತಿಕವಾಗಿ ಮುಸ್ಲಿಮರ ಮೇಲೆ ಪ್ರಭಾವ ಬೀರಿ ಇನ್ನಷ್ಟು ಯುವಕರನ್ನು ಮತಾಂದರನ್ನಾಗಿ ಮಾಡ ಬಹುದು ಎಂದು 13 ಪುಟಗಳ ನಿರ್ಣಯದಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.