ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Team Udayavani, Oct 5, 2024, 3:01 PM IST
ಕೊಲ್ಕತ್ತಾ: ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ವಿಶೇಷ ಆಹಾರದ ಮೆನುವೊಂದನ್ನು ಗೃಹ ಇಲಾಖೆ ಸಿದ್ಧಪಡಿಸಿದೆ.
ಅದರಂತೆ ದುರ್ಗಾ ಪೂಜೆಯ ಸಂದರ್ಭದಲ್ಲಿ ಜೈಲಿನಲ್ಲಿರುವ ಕೈದಿಗಳು ಹಬ್ಬದ ಸಂಭ್ರಮದಿಂದ ದೂರ ಉಳಿಯಬಾರದು ಎಂಬ ಉದ್ದೇಶದಿಂದ ಗೃಹ ಇಲಾಖೆ ಈ ವಿಶೇಷ ದಿನದಂದು ಕೈದಿಗಳಿಗೆ ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಬಸಂತಿ ಪಲಾವ್ ಸೇರಿದಂತೆ ಹಲವಾರು ಬಂಗಾಲಿ ಖಾದ್ಯಗಳನ್ನು ನೀಡಲು ಮುಂದಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅದರಂತೆ ಬರುವ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ ಈ ನಾಲ್ಕು ದಿನದಂದು ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ವಿಶೇಷ ಖಾದ್ಯಗಳನ್ನು ತಯಾರಿಸಿ ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ಹೇಳಿಕೆ ನೀಡಿದ ಜೈಲು ಅಧಿಕಾರಿ ಪ್ರತಿ ವರ್ಷ ಹಬ್ಬದ ಸಮಯದಲ್ಲಿ ಕೈದಿಗಳು ಏನಾದರು ವಿಶೇಷ ಖಾದ್ಯವನ್ನು ನೀಡುವಂತೆ ಆಗ್ರಹಿಸುತ್ತಾರೆ ಆದರೆ ಇದುವರೆಗೂ ಯಾವುದೇ ವಿಶೇಷ ಆಹಾರ ಕೈದಿಗಳಿಗೆ ನೀಡಿಲ್ಲ ಹಾಗಾಗಿ ಈ ಬಾರಿ ಕೈದಿಗಳ ಭೋಜನದಲ್ಲಿ ವಿಶೇಷ ಖಾದ್ಯಗಳನ್ನು ನೀಡಲು ಮುಂದಾಗಿದ್ದೇವೆ, ಜೊತೆಗೆ ಈ ಆಹಾರವನ್ನು ಜೈಲಿನಲ್ಲಿರುವ ಕೈದಿಗಳೇ ತಯಾರಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೈದಿಗಳೇ ತಯಾರಿಸುವ ಈ ವಿಶೇಷ ಖಾದ್ಯದಲ್ಲಿ ಚನ್ನಾ ದಾಲ್, ಪೂರಿ, ಮೀನು ಸಾರು, ಕೋಳಿ ಸಾಂಬಾರ್, ಆಲೂಗಡ್ಡೆ ಸೋರೆಕಾಯಿ ಜೊತೆಗೆ ಸಿಗಡಿ, ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಪಾಯಸ, ಬಸಂತಿ ಪುಲಾವ್ ಇಷ್ಟೆಲ್ಲಾ ಖಾದ್ಯಗಳನ್ನು ಸ್ವತಃ ಕೈದಿಗಳೇ ತಯಾರು ಮಾಡಲಿದ್ದಾರಂತೆ.
ಇದನ್ನೂ ಓದಿ: Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.