ಚೌಕಿದಾರರದ್ದೇ ಹವಾ! ಪ್ರಧಾನಿ ಮೋದಿ ಕರೆಗೆ ದೇಶದೆಲ್ಲೆಡೆ ಸ್ಪಂದನೆ
Team Udayavani, Mar 18, 2019, 12:30 AM IST
ನವದೆಹಲಿ: ಪ್ರಧಾನಿ ಮೋದಿ ಅವರ “ಮೈ ಭಿ ಚೌಕಿದಾರ್’ ಕರೆ ದೇಶಾದ್ಯಂತ ಹವಾ ಎಬ್ಬಿಸಿದೆ. ಶನಿವಾರವಷ್ಟೇ ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಪ್ರಧಾನಿ, ಎಲ್ಲರೂ “ನಾನೂ ಚೌಕಿದಾರ’ ಎಂದು ಘೋಷಿಸುವಂತೆ ಕರೆ ನೀಡಿದ್ದರು. ಇದಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಈ ಲೋಕಸಭೆ ಚುನಾವಣೆಗೆ “ಚೌಕಿದಾರ್’ ಟ್ಯಾಗ್ ಅನ್ನು ಬಳಸಿಕೊಂಡು ಮತ ಬೇಟೆಗೆ ಬಿಜೆಪಿ ಮುಂದಾಗಿದೆ.
ಭಾನುವಾರ ಪ್ರಧಾನಿ ತಮ್ಮ ಟ್ವಿಟರ್ ಖಾತೆಯ ಹೆಸರನ್ನು “ಚೌಕಿದಾರ್ ನರೇಂದ್ರ ಮೋದಿ’ ಎಂದು ಬದಲಿಸಿಕೊಂಡಿದ್ದಾರೆ. ಬೆನ್ನಲ್ಲೇ ಬಿಜೆಪಿಯ ಉಳಿದ ನಾಯಕರೂ ಅವರನ್ನೇ ಅನುಸರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೂ ಟ್ವಿಟರ್ ಖಾತೆಯ ಪ್ರೊಫೈಲ್ ಅನ್ನು “ಚೌಕಿದಾರ್ ಅಮಿತ್ ಶಾ’ ಎಂದು ಬದಲಾಯಿಸಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ದೇಶಾದ್ಯಂತ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಶಾಸಕರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯ ಮಂತ್ರಿಗಳು ಸೇರಿದಂತೆ ಅನೇಕರು “ಚೌಕಿದಾರ’ರಾಗಿ ಬದಲಾಗಿದ್ದಾರೆ.
ರಾಜ್ಯದಲ್ಲೂ ಅಲೆ: ಕರ್ನಾಟಕದಲ್ಲೂ ಚೌಕಿದಾರರ ಅಲೆ ಎದ್ದಿದ್ದು, ಕೆ.ಎಸ್. ಈಶ್ವರಪ್ಪ, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಪ್ರಹ್ಲಾದ್ ಜೋಷಿ, ಸಿ.ಟಿ. ರವಿ, ಪ್ರತಾಪ್ ಸಿಂಹ, ಸುರೇಶ್ ಕುಮಾರ್, ನಳಿನ್ ಕುಮಾರ್ ಕಟೀಲು, ಸದಾನಂದ ಗೌಡ ಸೇರಿದಂತೆ ಅನೇಕರು ತಮ್ಮ ಹೆಸರಿನ ಮೊದಲು “ಚೌಕಿದಾರ’ ಎಂಬ ಪದ ಸೇರಿಸಿದ್ದಾರೆ.
ಇದಲ್ಲದೆ, ಟ್ವಿಟರ್ನಲ್ಲಿಯೂ “ಚೌಕಿದಾರ್ ಫಿರ್ ಸೆ’ (ಮಗದೊಮ್ಮೆ ಚೌಕಿದಾರ), “ಚೌಕಿದಾರ್’, “ಚೌಕಿ ದಾರ್
ನರೇಂದ್ರ ಮೋದಿ’ ಎಂಬಿತ್ಯಾದಿ ಹ್ಯಾಷ್ಟ್ಯಾಗ್ಗಳು ಟ್ರೆಂಡ್ ಆಗಿ ವೆ. ಇದಕ್ಕೆ ಪ್ರತಿಯಾಗಿ “ಏಕ್ ಹೀ ಚೌಕಿ ದಾರ್
ಚೋರ್ ಹೇ'(ಒಬ್ಬನೇ ಚೌಕಿದಾರ ಕಳ್ಳ ), “ಮೋದಿ ವೇರ್ಈಸ್ ಅವರ್ ಮನಿ'(ಮೋದಿ, ನಮ್ಮ ಹಣವೆಲ್ಲಿ?) ಎಂಬ
ಹ್ಯಾಷ್ಟ್ಯಾಗ್ಗಳೂ ಟ್ರೆಂಡ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.