Narendra Modi: ಅಭಿವೃದ್ಧಿ ನೀತಿಗೆ ಬೆಂಬಲ, ವಿಸ್ತರಣ ವಾದಕ್ಕಲ್ಲ: ಪ್ರಧಾನಿ ಮೋದಿ


Team Udayavani, Sep 5, 2024, 10:03 AM IST

Narendra Modi: ಅಭಿವೃದ್ಧಿ ನೀತಿಗೆ ಬೆಂಬಲ, ವಿಸ್ತರಣ ವಾದಕ್ಕಲ್ಲ: ಪ್ರಧಾನಿ ಮೋದಿ

ಹೊಸದಿಲ್ಲಿ: “ಭಾರತವು ಅಭಿವೃದ್ಧಿ ನೀತಿಯನ್ನು ಬೆಂಬಲಿಸುತ್ತದೆಯೇ ವಿನಃ ವಿಸ್ತರಣ ವಾದವನ್ನಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ದಕ್ಷಿಣ ಚೀನ ಸಮುದ್ರ (ಎಸ್‌ಸಿಎಸ್‌), ಪೂರ್ವ ಚೀನ ಸಮುದ್ರ (ಇಸಿಎಸ್‌)ಗಳಲ್ಲಿ ಚೀನದ ಕ್ಯಾತೆ ಹೆಚ್ಚಿರುವಂತೆಯೇ ಚೀನವನ್ನು ಉಲ್ಲೇಖೀಸದಯೇ ಅವರು ಈ ರೀತಿ ಟಾಂಗ್‌ ನೀಡಿದ್ದಾರೆ.

ಬ್ರೂನೈ ರಾಜ ಸುಲ್ತಾನ್‌ ಹಸನಾಲ್‌ ಬೊಲ್ಕಿಯಾ ಏರ್ಪಡಿಸಿದ್ದ ಔತಣ ಕೂಟದಲ್ಲಿ ಪ್ರಧಾನಿ ಭಾಗಿಯಾಗಿದ್ದರು. ಈ ವೇಳೆ ಭದ್ರತೆ, ಹೂಡಿಕೆ, ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ಸಹಕಾರದ ಕುರಿತು ಮಾತುಕತೆ ನಡೆಸಲಾಗಿದೆ. ಅಲ್ಲದೇ ದಕ್ಷಿಣ ಹಾಗೂ ಪೂರ್ವ ಚೀನ ಸಮುದ್ರಗಳಲ್ಲಿನ ವಿವಾದ, ಸದ್ಯದ ಬೆಳವಣಿಗೆ ಕುರಿತೂ ಮಾತುಕತೆ ನಡೆದಿದೆ.

ಈ ವೇಳೆ ಪ್ರಧಾನಿ “ಭಾರತ ಸದಾ ಅಭಿವೃದ್ಧಿ ನೀತಿಯನ್ನು ಬೆಂಬಲಿಸುತ್ತದೆ. ವಿಸ್ತರಣ ವಾದವನ್ನು ಅಲ್ಲ. ಸಾಗರ ಭದ್ರತೆ, ಶಾಂತಿ ಮತ್ತು ಸ್ಥಿರತೆ ಕಾಪಾಡಿಕೊಳ್ಳಲು ನಾವು ಉತ್ತೇಜಿಸುತ್ತೇವೆ. ಭಾರತ ಸದಾ ಆಸಿಯನ್‌ ಕೇಂದ್ರೀಕರಣಕ್ಕೆ ಆದ್ಯತೆ ನೀಡುತ್ತಾ ಬಂದಿದೆ. ಅದನ್ನೇ ಮುಂದುವರಿಸುತ್ತದೆ’ ಎಂದಿದ್ದಾರೆ.

ದಕ್ಷಿಣ ಮತ್ತು ಪೂರ್ವ ಚೀನ ಸಮುದ್ರ ಸಂಬಂಧಿಸಿದಂತೆ ಬ್ರೂನೈ, ಫಿಲಿಪೈನ್ಸ್‌, ಮಲೇಷ್ಯಾ, ವಿಯೆಟ್ನಾಂ, ತೈವಾನ್‌ ಜತೆಗೆ ಚೀನ ತಕರಾರು ಹೊಂದಿದ್ದು, ಇತ್ತೀಚಿನ ದಿನಗಳಲ್ಲಿ ಈ ರಾಷ್ಟ್ರಗಳ ಜತೆಗಿನ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ. ಈ ನಡುವೆಯೇ ಪ್ರಧಾನಿ ಹೇಳಿಕೆ ಮಹತ್ವ ಪಡೆದಿದೆ.

ಬಾಹ್ಯಾಕಾಶ ಯೋಜನೆ ಉತ್ತೇಜನಕ್ಕೆ ಒಪ್ಪಂದ: ಬಾಹ್ಯಾಕಾಶ ಕ್ಷೇತ್ರದ ಕಾರ್ಯಾಚರಣೆಗೆ ಪರಸ್ಪರ ಬೆಂಬಲ ನೀಡುವ ನಿಟ್ಟಿನಲ್ಲಿ ಮೋದಿ ಮತ್ತು ಬೊಲ್ಕಿಯಾ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಉಪಗ್ರಹ ಮತ್ತು ಉಡಾವಣ ವಾಹನಗಳ ಅಭಿವೃದ್ಧಿಗಾಗಿ ಟೆಲಿಮಿಟರಿ ಟ್ರ್ಯಾಕಿಂಗ್‌ ಮತ್ತು ಟೆಲಿ ಕಮಾಂಡ್‌ ಸ್ಟೇಷನ್‌ಗಳಿಗೆ ಸಹಕಾರ ಒದಗಿಸಲು ಈ ಒಪ್ಪಂದ ಪ್ರಸ್ತಾವಿಸಿದೆ.

ಟಾಪ್ ನ್ಯೂಸ್

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

voter

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

1-pkkk

Shiv Sena (UBT) ನಮ್ಮಲ್ಲೇ ನಾಯಕರಿದ್ದಾರೆ, ಬಿಜೆಪಿ ಮುಖಂಡರ ಅಗತ್ಯ ಇಲ್ಲ: ಪ್ರಿಯಾಂಕಾ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.