![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
ಸತತ 10 ತಾಸು ರಾಹುಲ್ ವಿಚಾರಣೆ: ಇ.ಡಿ. ಕ್ರಮ ಖಂಡಿಸಿ ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ
Team Udayavani, Jun 14, 2022, 1:05 AM IST
![ಸತತ 10 ತಾಸು ರಾಹುಲ್ ವಿಚಾರಣೆ: ಇ.ಡಿ. ಕ್ರಮ ಖಂಡಿಸಿ ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ](https://www.udayavani.com/wp-content/uploads/2022/06/ED-6-620x412.jpg)
ಹೊಸದಿಲ್ಲಿ/ಬೆಂಗಳೂರು: ನ್ಯಾಶನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ವು ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿತು. ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಪ್ರತಿಭಟನೆ, ಹೈಡ್ರಾಮಾಗಳ ನಡುವೆಯೇ ಸುಮಾರು 10 ತಾಸುಗಳ ಕಾಲ ರಾಹುಲ್ ವಿಚಾರಣೆ ನಡೆಯಿತು.
ಬೆಳಗ್ಗೆ ಸುಮಾರು 11.10ರ ವೇಳೆಗೆ ಇ.ಡಿ. ಕಚೇರಿ ತಲುಪಿದ ರಾಹುಲ್ ಗಾಂಧಿ ಅವರನ್ನು ಅಪರಾಹ್ನ 2.10ರ ವರೆಗೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಅನಂತರ ಊಟದ ವಿರಾಮದ ವೇಳೆ ಸರ್ ಗಂಗಾರಾಂ ಆಸ್ಪತ್ರೆಗೆ ತೆರಳಿದ ರಾಹುಲ್ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿ ಸೋನಿಯಾ ಗಾಂಧಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುಮಾರು 3.30ರ ವೇಳೆಗೆ ಮತ್ತೆ ವಿಚಾರಣೆಗೆ ಹಾಜರಾದರು. ಹಣಕಾಸು ಅವ್ಯವಹಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 50ರಡಿ ರಾಹುಲ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಸೋಮವಾರ ಇಡೀ ದಿನ ನಡೆದ ವಿಚಾರಣೆ ರಾತ್ರಿ 9ರ ವೇಳೆಗೆ ಮುಕ್ತಾಯವಾಯಿತು.
ಇದೇ ವೇಳೆ ಮಂಗಳವಾರವೂ ರಾಹುಲ್ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿ ಸಿದೆ. ಕೆಲವು ಪ್ರಶ್ನೆಗಳು ಕೇಳಲು ಬಾಕಿಯಿರುವ ಕಾರಣ ವಿಚಾರಣೆ ಮುಂದುವರಿಸಲು ನಿರ್ಧರಿಸಲಾಗಿದೆ.
ಹಿರಿಯ ನಾಯಕರು ಸಾಥ್
ಇದಕ್ಕೆ ಮುನ್ನ ಬೆಳಗ್ಗೆ ದಿಲ್ಲಿಯ ಅಕºರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಇ.ಡಿ. ಕಚೇರಿಯತ್ತ ಸಾಗುವಾಗ ರಾಹುಲ್ಗೆ ಪಕ್ಷದ ಪ್ರಮುಖ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನ ಸಿಎಂ ಅಶೋಕ್ , ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಸಾಥ್ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ನಿರ್ಬಂಧಿಸುವ ಸಲುವಾಗಿ ಇ.ಡಿ. ಕಚೇರಿಗೆ ತೆರಳುವ ಮಾರ್ಗದಲ್ಲಿ ದಿಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದರು, ನಿಷೇಧಾಜ್ಞೆ ಜಾರಿ ಮಾಡಿದ್ದರು. ಆರ್ಎಎಫ್, ಸಿಆರ್ಪಿಎಫ್ ತುಕಡಿಗಳನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಕಾಂಗ್ರೆಸ್ ಶಕ್ತಿಪ್ರದರ್ಶನ
ರಾಹುಲ್ ಇ.ಡಿ. ಕಚೇರಿಗೆ ಹಾಜರಾಗುತ್ತಿದ್ದಂತೆ ದೇಶಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬೀದಿಗಿಳಿದರು. ಬೆಂಗಳೂರು, ರಾಂಚಿ, ಮುಂಬಯಿ, ಶಿಮ್ಲಾ, ಇಟಾನಗರ, ರೋಹrಕ್, ಜೈಪುರ, ಗುವಾಹಟಿ, ಅಹ್ಮದಾಬಾದ್ ಸಹಿತ ದೇಶದ ಬಹುತೇಕ ಎಲ್ಲ ಪ್ರಮುಖ ನಗರಗಳಲ್ಲೂ ಕಾಂಗ್ರೆಸ್ ಶಕ್ತಿಪ್ರದರ್ಶನ ಮಾಡಿದೆ. ಹಲವೆಡೆ ಪ್ರತಿಭಟನಕಾರರನ್ನು ವಶಕ್ಕೆ ಪಡೆದು, ಅನಂತರ ಬಿಡುಗಡೆ ಮಾಡಲಾಗಿದೆ. ದಿಲ್ಲಿಯಲ್ಲಿ ಪ್ರತಿಭಟನನಿರತರಾಗಿದ್ದ ಹಿರಿಯ ನಾಯಕ ಚಿದಂಬರಂ ಅವರನ್ನು ಪೊಲೀಸರು ತಳ್ಳಿದ ಪರಿಣಾಮ ಅವರ ಎಡ ಪಕ್ಕೆಲುಬಿಗೆ ಗಾಯವಾಗಿದೆ.
ದಿನದ ಬೆಳವಣಿಗೆ
01 ಬೆಳಗ್ಗೆ ದಿಲ್ಲಿಯ ಎಐಸಿಸಿ ಪ್ರಧಾನ ಕಚೇರಿಗೆ ರಾಹುಲ್ ಆಗಮನ
02 ಪಕ್ಷದ ಹಿರಿಯ ನಾಯಕರೊಂದಿಗೆ ಇ.ಡಿ. ಕಚೇರಿ ಕಡೆಗೆ ಪಯಣ
0311.10ರ ವೇಳೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರು
04 ಅಪರಾಹ್ನ 2.10ರ ವರೆಗೆ ಇ.ಡಿ. ಅಧಿಕಾರಿಗಳಿಂದ ವಿಚಾರಣೆ
05 ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಹಲವರು ಪೊಲೀಸರ ವಶಕ್ಕೆ
06ಊಟದ ವಿರಾಮದ ವೇಳೆ ಸೋನಿಯಾ ಆರೋಗ್ಯ ವಿಚಾರಿಸಿದ ರಾಹುಲ್
07 ಅಪರಾಹ್ನ 3.30ರಿಂದ ರಾತ್ರಿ 9ರ ವರೆಗೆ ಮತ್ತೆ ವಿಚಾರಣೆಗೆ ಹಾಜರು
ಏನೇನು ಪ್ರಶ್ನೆ?
ಪ್ರಕರಣದ ತನಿಖಾಧಿಕಾರಿಯಾದ ಇ.ಡಿ.ಯ ಸಹಾಯಕ ನಿರ್ದೇಶಕ ಮಟ್ಟದ ಅಧಿಕಾರಿಯು ರಾಹುಲ್ಗೆ ನ್ಯಾಶನಲ್ ಹೆರಾಲ್ಡ್ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಹಾಕಿರುವ ಸಾಧ್ಯತೆಯಿದೆ. ಯಂಗ್ ಇಂಡಿಯನ್ ಕಂಪೆನಿಯ ಸ್ಥಾಪನೆ, ನ್ಯಾಶನಲ್ ಹೆರಾಲ್ಡ್ ಕಾರ್ಯಾಚರಣೆ, ಅಸೋಸಿಯೇಟೆಡ್ ಜರ್ನಲ್ಸ್ ಲಿ. (ಎಜೆಎಲ್)ಗೆ
ಕಾಂಗ್ರೆಸ್ ಪಕ್ಷ ಕೊಟ್ಟಿರುವ ಸಾಲದ ಮೊತ್ತ, ಸುದ್ದಿ ಮಾಧ್ಯಮದೊಳಗಿನ ಹಣಕಾಸು ವರ್ಗಾವಣೆ ಸೇರಿದಂತೆ ಸರಣಿ ಪ್ರಶ್ನೆಗಳನ್ನು ಕೇಳಿರಬಹುದು ಎಂದು ಮೂಲಗಳು ತಿಳಿಸಿವೆ. ಜೂ. 23ರಂದು ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆಗೆ ಒಳಪಡಿಸಲಿದೆ.
ಟಾಪ್ ನ್ಯೂಸ್
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.