ತೆರೆಗೆ ಸರಿದ ವೈದ್ಯ ಮಂಡಳಿ

ರಾಜ್ಯಸಭೆಯಲ್ಲಿ ಮಹತ್ವದ ಎನ್‌ಎಂಸಿ ವಿಧೇಯಕಕ್ಕೆ ಒಪ್ಪಿಗೆ

Team Udayavani, Aug 2, 2019, 5:04 AM IST

k-49

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕದ ವಿರುದ್ಧ ವೈದ್ಯ ಸಮುದಾಯ ದೇಶವ್ಯಾಪಿ ಮುಷ್ಕರ ನಡೆಸಿದ ಮಾರನೇ ದಿನವೇ ಅಂದರೆ ಗುರುವಾರ ರಾಜ್ಯಸಭೆಯಲ್ಲಿ ಈ ವಿಧೇಯಕಕ್ಕೆ ಅನುಮೋದನೆ ಸಿಕ್ಕಿದೆ. ಈ ಮೂಲಕ ಸಂಸತ್‌ನಲ್ಲಿ ಬಹುನಿರೀಕ್ಷಿತ ವಿಧೇಯಕ ಅಂಗೀಕಾರಗೊಂಡಂತೆ ಆಗಿದೆ.

ಇದುವರೆಗೆ ಇದ್ದ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಸ್ಥಾನದಲ್ಲಿ ಇನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಬರಲಿದೆ. ಜು.29ರಂದು ಅದು ಲೋಕಸಭೆಯಲ್ಲಿ ಅನುಮೋದನೆಗೊಂಡಿತ್ತು.

ಕೇಂದ್ರದ ನಿರ್ಧಾರವನ್ನು ಎಐಎಡಿಎಂಕೆ ಆಕ್ಷೇಪಿಸಿ ಸದನದಿಂದ ಹೊರ ನಡೆಯಿತು. ಬಳಿಕ ಧ್ವನಿಮತದಿಂದ ಅದಕ್ಕೆ ಅನುಮೋದನೆ ನೀಡಲಾಯಿತು. ಚರ್ಚೆಗೆ ಉತ್ತರಿಸಿ ಮಾತನಾಡಿದ ಕೇಂದ್ರ ಸಚಿವ ಹರ್ಷವರ್ಧನ್‌, ಈ ವಿಧೇಯಕ ದೇಶದಲ್ಲಿ ‘ಮಾಟ ಮಂತ್ರಗಳಿಗೆ ಪ್ರೋತ್ಸಾಹ ನೀಡುವುದಿಲ್ಲ’ ಎಂದರು. ವಿಧೇಯಕದಿಂದ ವೈದ್ಯ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪಡೆಯಲು ಅನುಕೂಲವಾಗಲಿದೆ. 80 ಸಾವಿರ ವೈದ್ಯ ಸೀಟುಗಳ ಪೈಕಿ 40 ಸಾವಿರ ಸರ್ಕಾರಿ ಸಂಸ್ಥೆಗಳ ವ್ಯಾಪ್ತಿಯಲ್ಲಿದೆ. ಜತೆಗೆ ಶುಲ್ಕದ ಮೇಲೆ ಕೂಡ ನಿಯಂತ್ರಣ ಸಾಧಿಸಲಾಗುತ್ತದೆ. ಎಂಸಿಐ ಅವಧಿಯಲ್ಲಿ ಶುಲ್ಕದ ಮೇಲೆ ನಿಯಂತ್ರಣ ಇರಲಿಲ್ಲ. ಖಾಸಗಿ ಕಾಲೇಜುಗಳ ವ್ಯಾಪ್ತಿಯಲ್ಲಿರುವ 40 ಸಾವಿರ ವೈದ್ಯ ಸೀಟುಗಳ ಮೇಲೆ ರಾಜ್ಯ ಸರ್ಕಾರಗಳು ನಿಯಂತ್ರಣ ಹೇರಲು ಅವಕಾಶ ಉಂಟು. ಆಯೋಗದಲ್ಲಿ ಇರಲಿರುವ 25 ಮಂದಿ ಸದಸ್ಯರ ಪೈಕಿ 11 ಮಂದಿ ರಾಜ್ಯಗಳ ಪ್ರತಿನಿಧಿಗಳೇ ಆಗಿರುತ್ತಾರೆ ಮತ್ತು ವೈದ್ಯರೇ ಇರಲಿದ್ದಾರೆ. ನೀಟ್ ಕೌನ್ಸೆಲಿಂಗ್‌ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಇರಲಿದೆ ಎಂದಿದ್ದಾರೆ. ಈ ವಿಧೇಯಕ ಅಂಗೀಕಾರವಾದ್ದರಿಂದ 63 ವರ್ಷಗಳ ಭಾರತೀಯ ವೈದ್ಯಕೀಯ ಮಂಡಳಿ ಇತಿಹಾಸದ ಪುಟ ಸೇರಿದಂತಾಗಿದೆ.

ಚರ್ಚಿಸದೆ ವಿಧೇಯಕಗಳ ಮಂಡನೆ: ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಜತೆಗೆ ಚರ್ಚೆ ನಡೆಸದೆ ವಿಧೇಯಕಗಳನ್ನು ಮಂಡಿಸುತ್ತಿದೆ ಎಂದು ಆರೋಪಿಸಲಾಗಿದೆ. ಅದನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ತಿರಸ್ಕರಿಸಿದ್ದಾರೆ. ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಲೇ, ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ಟಿಎಂಸಿಯ ಸುಗತಾ ರಾಯ್‌, ಡಿಎಂಕೆಯ ಕನಿಮೋಳಿ ಪ್ರತಿಪಕ್ಷಗಳ ಗಮನಕ್ಕೆ ತಾರದೆ ವಿಧೇಯಕಗಳನ್ನು ಮಂಡಿಸಿ ಅನುಮೋದಿಸುತ್ತಿದೆ ಎಂದು ದೂರಿದರು. ಅದನ್ನು ತಿರಸ್ಕರಿಸಿದ ಸಚಿವ ಜೋಶಿ, ಸದನ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ ಎಂದಿದ್ದಾರೆ.

ಕಾಗದ ರಹಿತವಾಗಿರಬೇಕು ಲೋಕಸಭೆ: ಲೋಕಸಭೆಯಲ್ಲಿ ಕಾಗದ ಬಳಕೆ ಸಂಪೂರ್ಣವಾಗಿ ನಿಲ್ಲಬೇಕು ಎಂದು ಸ್ಪೀಕರ್‌ ಓಂ ಬಿರ್ಲಾ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಹಲವಾರು ಕೋಟಿ ರೂ.ಗಳನ್ನು ಉಳಿತಾಯ ಮಾಡಬಹುದು ಎಂದು ಹೇಳಿದ್ದಾರೆ.

ದಿವಾಳಿ ವಿಧೇಯಕಕ್ಕೆ ಒಪ್ಪಿಗೆ

ಕೇಂದ್ರ ಸರ್ಕಾರದ ಮಹತ್ವದ ದಿವಾಳಿ ವಿಧೇಯಕಕ್ಕೆ ಲೋಕಸಭೆ ಧ್ವನಿಮತದಿಂದ ಸಮ್ಮತಿ ಸೂಚಿಸಿದೆ. ಸಾಲ ಮರು ಪಾವತಿ ಮಾಡದೇ ಇರುವ ಕಂಪನಿಗಳ ಆಸ್ತಿ ಹರಾಜು ಮಾಡುವ ಬಗ್ಗೆ ಮತ್ತಷ್ಟು ಹೆಚ್ಚಿನ ಪಾರದರ್ಶಕತೆಯನ್ನು ವಿಧೇಯಕದಲ್ಲಿ ಕಲ್ಪಿಸಲಾಗಿದೆ. 330 ದಿನಗಳ ಒಳಗಾಗಿ ಸಾಲ ನೀಡಿದ ಹಣಕಾಸು ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡ ಸಮಿತಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಒಟ್ಟು ಏಳು ವಿಭಾಗಗಳಿಗೆ ತಿದ್ದುಪಡಿ ತರಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಮತ್ತು ಇತರ ಕಾನೂನಾತ್ಮಕ ಸಂಸ್ಥೆಗಳಿಗೆ ಕೂಡ ನಿಯಮಗಳು ಅನ್ವಯವಾಗುತ್ತವೆ.

ರಾಜ್ಯಸಭೆಯಲ್ಲಿ ಕೋಲಾಹಲ

ಮೇಲ್ಮನೆಯಲ್ಲಿ ನಿಷೇಧಿತ ಚಟುವಟಿಕೆಗಳ (ತಡೆ) ವಿಧೇಯಕದ ಬಗ್ಗೆ ಗುರುವಾರ ಸಂಜೆ 6 ಗಂಟೆಯ ಬಳಿಕ ಚರ್ಚೆ ನಡೆಯಿತು. ಈ ಬಗ್ಗೆ ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್‌ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದರು. ‘ಈ ಹಿಂದೆ ವಿಧೇಯಕಗಳ ಚರ್ಚೆ ಮಧ್ಯಾಹ್ನ 2 ಗಂಟೆಗೆ ಶುರುವಾಗುತ್ತಿತ್ತು. ಈಗ 12 ಗಂಟೆಗೇ ಶುರುವಾಗುತ್ತಿದೆ. ಬುಧವಾರ ಕೂಡ ಸದನ ಚರ್ಚೆಯ ಅವಧಿಯನ್ನು 6 ಗಂಟೆಯ ಬಳಿಕವೂ ವಿಸ್ತರಿಸಲಾಗಿತ್ತು. ಗುರುವಾರ ಕೂಡ 8.50ರ ವರೆಗೆ ಇದ್ದೇವೆ’ ಎಂದರು. ಎಸ್‌ಪಿ, ಟಿಎಂಸಿ ಸೇರಿದಂತೆ ಹಲವು ಪಕ್ಷಗಳ ನಾಯಕರು ಆಜಾದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಮೇಲ್ಮನೆಯಲ್ಲಿ ಚರ್ಚೆಗೆ ಉತ್ತರ ನೀಡಲಿದ್ದಾರೆ. ಹೀಗಾಗಿ, ಬಿಜೆಪಿ ತನ್ನ ಎಲ್ಲಾ ರಾಜ್ಯಸಭಾ ಸದಸ್ಯರು ಸದನದಲ್ಲಿ ಹಾಜರಿದ್ದು, ಮತದಾನದಲ್ಲಿ ಭಾಗವಹಿಸಬೇಕು ಎಂದು ವಿಪ್‌ ನೀಡಿದೆ.

ಸಂಸತ್‌ ಕಲಾಪವನ್ನು ವಿಸ್ತರಿಸುವ ಬಗ್ಗೆ ಕೇಂದ್ರ ಸರಕಾರ ಯೋಚನೆ ಮಾಡುತ್ತಿದೆ. ವಿಧಾನಸಭೆಗಳಿಗೆ ಮಾದರಿಯಾಗಿ ಲೋಕಸಭೆ ಇರಬೇಕು. ಸಂಸದರು ಕೂಡ ಮದುವೆ ಸೇರಿ ದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ ಬೇಕಾಗುತ್ತದೆ. ಸದನದ ಕಲಾಪ ವಿಸ್ತರಿಸಬೇಕು ಎನ್ನುವುದಕ್ಕೆ ಸರಿಯಾದ ಕಾರಣ ನೀಡಿ.
ಮುಲಾಯಂ ಸಿಂಗ್‌ ಯಾದವ್‌, ಎಸ್‌ಪಿ ಸಂಸದ

ಮುಲಾಯಂಜಿ ಅವರೇ, ನೀವು ಹಿರಿಯ ಸದಸ್ಯರಿದ್ದೀರಿ. ಪ್ರಮುಖ ಮಸೂದೆಗಳು ಮಂಡನೆಯಾಗಿ ಚರ್ಚೆಯಾಗಿ ಅಂಗೀಕಾರವಾಗಬೇಕಾಗಿದೆ.ಅದರಿಂದ ಜನರಿಗೆ ಅನುಕೂಲವಾಗಬೇಕಾಗಿದೆ. ಹೀಗಾಗಿ ನಿಮ್ಮ ಅಭಿಪ್ರಾಯ ಒಪ್ಪಲಾಗುವುದಿಲ್ಲ.
ಅರ್ಜುನ್‌ ರಾಮ್‌ ಮೇಘಾಲ್‌, ಸಂಸದೀಯ ವ್ಯವಹಾರಗಳ ಖಾತೆ ಸಹಾಯಕ ಸಚಿವ

27 ಲೋಕಸಭೆಯಲ್ಲಿ ಇದುವರೆಗೆ ಅಂಗೀಕಾರವಾದ ಮಸೂದೆಗಳು
23 ರಾಜ್ಯಸಭೆಯಲ್ಲಿ ಇದುವರೆಗೆ ಅಂಗೀಕಾರವಾದ ಮಸೂದೆಗಳು
19 ಎರಡೂ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳು

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.