ಅಮೆರಿಕ-ಉ.ಕೊರಿಯ ರೀತಿ ಭಾರತ-ಪಾಕ್‌ ಮಾತುಕತೆ: ಶಹಬಾಜ್‌ ಷರೀಫ್


Team Udayavani, Jun 13, 2018, 11:40 AM IST

kim-trump-700.jpg

ಇಸ್ಲಾಮಾಬಾದ್‌ : ಹಲವು ದಶಕಗಳ ಬದ್ಧ ವೈರಿಗಳಾಗಿರುವ ಅಮೆರಿಕ ಮತ್ತು ಉತ್ತರ ಕೊರಿಯ ಶಾಂತಿ ಮಾತುಕತೆಯ ಮೂಲಕ ತಮ್ಮೊಳಗಿನ ಎಲ್ಲ ಭಿನ್ನಮತಗಳನ್ನು ನಿವಾರಿಸಕೊಂಡ ರೀತಿಯಲ್ಲೇ ಭಾರತ ಮತ್ತು ಪಾಕಿಸ್ಥಾನ ಶಾಂತಿ ಮಾತುಕತೆ ನಡೆಸಲು ಮುಂದಾಗಬೇಕು ಎಂದು ಪಾಕ್‌ ಪದಚ್ಯುತ ಪ್ರದಾನಿ ನವಾಜ್‌ ಷರೀಫ್ ಅವರ ಸಹೋದರ, ಪಾಕಿಸ್ಥಾನದ ಪ್ರಮುಖ ರಾಜಕೀಯ ನಾಯಕ ಶಹಬಾಜ್‌ ಷರೀಫ್ ಹೇಳಿದ್ದಾರೆ.

ಪರಸ್ಪರ ಅಣು ಯುದ್ಧದ ಅಂಚಿನಿಂದ ಈಚೆಗೆ ಬಂದು ಶಾಂತಿ ಮಾತುಕತೆ ನಡೆಸಲು ಉತ್ತರ ಕೊರಿಯ ಮತ್ತು ಅಮೆರಿಕಕ್ಕೆ ಸಾಧ್ಯವೆಂದಾದರೆ ಭಾರತ ಮತ್ತು ಪಾಕಿಸ್ಥಾನಕ್ಕೆ ಅದು ಏಕೆ ಸಾಧ್ಯವಾಗದು ಎಂದು ಶಹಬಾಜ್‌ ಷರೀಫ್ ಅವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಪಾಕ್‌ ಮಾಧ್ಯಮಗಳು ಈ ಟ್ವೀಟನ್ನು ಶಹಬಾಜ್‌ ಅವರೇ ಮಾಡಿರುವುದಾಗಿ ಹೇಳಿವೆಯಾದರೂ ಇವುಗಳನ್ನು ಶರೀಫ್ ಅವರ ಸಿಬಂದಿಗಳು ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ ಸ್ವತಃ ಶಹಬಾಜ್‌ ಮಾಡುವ ಟ್ವೀಟ್‌ಗಳಲ್ಲಿ ‘SS’ ಎಂಬುದಾಗಿ ಅವರ ಸಹಿ ಇರುತ್ತವೆ. ಆದರೆ ಈ ಟ್ವೀಟ್‌ಗಳಲ್ಲಿ ಅಂತಹ ಸಹಿ ಇಲ್ಲದಿರುವುದರಿಂದ ಈ ಟ್ವೀಟ್‌ಗಳನ್ನು ಸ್ವತಃ ಶಹಬಾಜ್‌ ಅವರೇ ಮಾಡಿರಲಿಕ್ಕಿಲ್ಲ ಎಂದು ಹೇಳಲಾಗಿದೆ. 

ಅದೇನಿದ್ದರೂ ಶಹಬಾಜ್‌ ಅವರ ಟ್ವೀಟ್‌ಗಳು ಭಾರತ ಮತ್ತು ಪಾಕಿಸ್ಥಾನ ನಡುವೆ ಶಾಂತಿ ಮಾತುಕತೆ ಏರ್ಪಡಬೇಕೆಂದು ಹೇಳುತ್ತವೆ; ಜತೆಗೆ ಕಾಶ್ಮೀರವನ್ನು ಅಕ್ರಮವಾಗಿ ತನ್ನ ವಶದಲ್ಲಿ ಇರಿಸಿಕೊಂಡಿರುವ ಭಾರತ, ಕಾಶ್ಮೀರಿಗಳ ಮೇಲೆ ದಬ್ಟಾಳಿಕೆ ನಡೆಸುತ್ತಿದೆ ಎಂದು ಆರೋಪಿಸುತ್ತದೆ.

ಆದರೆ ಸ್ವತಃ ಪಾಕಿಸ್ಥಾನದ ಅಕ್ರಮ ವಶದಲ್ಲಿರುವ ಪಿಓಕೆಯಲ್ಲಿ ಅದರ ಸೇನೆ ಅಲ್ಲಿನ ಜನರ ಮೇಲೆ ನಡೆಸುತ್ತಿರುವ ದಬ್ಟಾಳಿಕೆಯ ಬಗ್ಗೆ ಚಕಾರ ಎತ್ತುವುದಿಲ್ಲ; ಮಾತ್ರವಲ್ಲದೆ ಎಲ್‌ಓಸಿಯಲ್ಲಿ ಪಾಕ್‌ ಉಗ್ರರು ಮತ್ತು ಸೇನೆ ಜಮ್ಮು ಕಾಶ್ಮೀರದ ಅಮಾಯಕ ಜನರನ್ನು ಗುರಿ ಇರಿಸಿ ನಡೆಸುತ್ತಿರುವ ದಾಳಿಗಳ ಬಗ್ಗೆಯೂ ಸೊಲ್ಲೆತ್ತುವುದಿಲ್ಲ ಎನ್ನುವುದು ಸ್ಪಷ್ಟವಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.