ತ್ಯಾಜ್ಯನೀರಲ್ಲೂ ಕೋವಿಡ್ : ಭಾರತೀಯ ವಿಜ್ಞಾನಿಗಳಿಂದ ಸಂಶೋಧನೆ


Team Udayavani, Jun 24, 2020, 10:25 AM IST

ತ್ಯಾಜ್ಯನೀರಲ್ಲೂ ಕೋವಿಡ್ : ಭಾರತೀಯ ವಿಜ್ಞಾನಿಗಳಿಂದ ಸಂಶೋಧನೆ

ಸಾಂದರ್ಭಿಕ ಚಿತ್ರ

ಗಾಂಧೀನಗರ: ಇದೇ ಮೊದಲ ಬಾರಿಗೆ ಭಾರತೀಯ ವಿಜ್ಞಾನಿಗಳು ತ್ಯಾಜ್ಯ ನೀರಿನಲ್ಲೂ ಕೋವಿಡ್ ವೈರಸ್‌ನ ವಂಶವಾಹಿಯನ್ನು ಪತ್ತೆಹಚ್ಚಿದ್ದಾರೆ. ತ್ಯಾಜ್ಯನೀರು ಆಧರಿತ ಸಾಂಕ್ರಾಮಿಕ ರೋಗಶಾಸ್ತ್ರದ ಮೂಲಕ ಕೋವಿಡ್ ಸೋಂಕು ಕುರಿತು ಅಧ್ಯಯನ ನಡೆಸಲು ಈ ಸಂಶೋಧನೆಯು ನೆರವಾಗಲಿದೆ.

ಗುಜರಾತ್‌ನಲ್ಲಿರುವ ಐಐಟಿ ಗಾಂಧಿನಗರದ ವಿಜ್ಞಾನಿಗಳ ತಂಡದ ಈ ಸಾಧನೆಗೆ ಜಾಗತಿಕ ಸಮುದಾಯವು ಶ್ಲಾಘನೆ ವ್ಯಕ್ತಪಡಿಸಿದೆ. ವಿಜ್ಞಾನಿಗಳ ತಂಡವು ಅಹಮದಾಬಾದ್‌ನ ತ್ಯಾಜ್ಯನೀರಿನಲ್ಲಿ ಕೊರೊನಾವೈರಸ್‌ನ ಆರ್‌ಎನ್‌ಎ ಹೆಚ್ಚಿನ ಪ್ರಮಾಣದಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಈ ಮೂಲಕ ಕೋವಿಡ್ ಸೋಂಕಿಗೆ ಸಂಬಂಧಿಸಿ ತ್ಯಾಜ್ಯನೀರು ಆಧರಿತ ಸಾಂಕ್ರಾಮಿಕ ರೋಗಶಾಸ್ತ್ರ (ಡಬ್ಲ್ಯುಬಿಇ)ದ ಅಧ್ಯಯನ ನಡೆಸುತ್ತಿರುವ ಕೆಲವೇ ಕೆಲವು ರಾಷ್ಟ್ರಗಳ ಪೈಕಿ ಭಾರತವೂ ಸೇರಿದಂತಾಗಿದೆ ಎಂದು ಯುಕೆ ಸೆಂಟರ್‌ ಫಾರ್‌ ಇಕಾಲಜಿ ಆ್ಯಂಡ್‌ ಹೈಡ್ರಾಲಜಿಯ ಪರಿಸರ ಸೂಕ್ಷ್ಮಜೀವ ಶಾಸ್ತ್ರಜ್ಞ ಆ್ಯಂಡ್ರೂ ಸಿಂಗರ್‌ ಟ್ವೀಟ್‌ ಮಾಡಿದ್ದಾರೆ.

ತ್ಯಾಜ್ಯನೀರಿನಲ್ಲಿರುವ ವೈರಸ್‌ನ ಪ್ರಮಾಣವನ್ನು ನೋಡಿಕೊಂಡು ಆ ಪ್ರದೇಶದಲ್ಲಿ ರೋಗ ವ್ಯಾಪಿಸುವಿಕೆಯ ಸ್ಥಿತಿ ಹೇಗಿದೆ ಎಂದು ಅರಿಯುವುದೇ ತ್ಯಾಜ್ಯನೀರು ಆಧರಿತ ಸಾಂಕ್ರಾಮಿಕ ರೋಗಶಾಸ್ತ್ರ ಅಧ್ಯಯನದ ಆಶಯವಾಗಿದೆ. ಗಾಂಧಿನಗರ ಐಐಟಿ ವಿಜ್ಞಾನಿಗಳು ಮೇ 8 ಮತ್ತು 27ರಂದು ಓಲ್ಡ್‌ ಪಿರಾನಾ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಸಂಗ್ರಹಿಸಿದ ತ್ಯಾಜ್ಯನೀರನ್ನು ಪರೀಕ್ಷೆಗೆ ಒಳಪಡಿಸಿದ್ದರು. ಈ ಸ್ಥಾವರಕ್ಕೆ ಅಹಮದಾಬಾದ್‌ ಸಿವಿಲ್‌ ಆಸ್ಪತ್ರೆಯಿಂದ ದಿನಕ್ಕೆ 106 ದಶಲಕ್ಷ ಲೀಟರ್‌ ತ್ಯಾಜ್ಯವು ಸಂಸ್ಕರಣೆಗಾಗಿ ಬರುತ್ತದೆ. ಈ ನೀರಿನಲ್ಲಿ ಸಾರ್ಸ್‌ ಕೋವ್‌-2ರ ಎಲ್ಲ ಮೂರು ವಂಶವಾಹಿಗಳು ಇರುವುದು ಪತ್ತೆಯಾಗಿದೆ. ಆದರೆ, ಸಂಸ್ಕರಣೆಯಾದ ಬಳಿಕ ಹೊರಹೋಗುವ ನೀರಿನಲ್ಲಿ ಈ ಅಂಶ ಕಂಡುಬಂದಿಲ್ಲ.

ಇತ್ತೀಚೆಗಷ್ಟೇ, ಸೋಂಕಿತ ವ್ಯಕ್ತಿಯ ಮಲದಲ್ಲೂ ಸೋಂಕು ಇದ್ದು, ಸಂಸ್ಕರಣಾ ಸ್ಥಾವರವನ್ನು ಪ್ರವೇಶಿಸುವ ತ್ಯಾಜ್ಯನೀರಿನಲ್ಲಿ ವೈರಸ್‌ನ ಆರ್‌ಎನ್‌ಎ ಇರುವುದು ಪತ್ತೆಯಾಗಿತ್ತು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.