NEET ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ: ಧರ್ಮೇಂದ್ರ ಪ್ರಧಾನ್‌

ವಿವಾದದ ಹಿನ್ನೆಲೆಯಲ್ಲಿ 1,563 ವಿದ್ಯಾರ್ಥಿಗಳಿಗೆ ಕೃಪಾಂಕ ರದ್ದು.. ಕೃಪಾಂಕಿತರಿಗೆ ಮರುಪರೀಕ್ಷೆ

Team Udayavani, Jun 14, 2024, 1:17 AM IST

neet

ಹೊಸದಿಲ್ಲಿ: ನೀಟ್‌- ಯುಜಿ ಪರೀಕ್ಷಾ ಫ‌ಲಿತಾಂಶದ ಬಳಿಕ ಎದ್ದಿದ್ದ ವಿವಾದವನ್ನು ತಣ್ಣಗಾಗಿಸಲು ಕೇಂದ್ರ ಸರಕಾರ ಮತ್ತು ಎನ್‌ಟಿಎ (ನ್ಯಾಶ ನಲ್‌ ಟೆಸ್ಟಿಂಗ್‌ ಏಜೆನ್ಸಿ)ಗಳು ಬಲವಾದ ಹೆಜ್ಜೆಯನ್ನಿರಿಸಿವೆ. ಪ್ರಶ್ನೆಪತ್ರಿಕೆ ಹಂಚಿಕೆಯಲ್ಲಿ ವಿಳಂಬ, ಹರಿದ ಒಎಂಆರ್‌ ಶೀಟ್‌ಗಳ ಹಂಚಿಕೆಯಿಂದ ಸಮಯದ ಕೊರತೆ ಎದುರಿಸಿದ್ದ 1,563 ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಕೃಪಾಂಕ ವನ್ನು ರದ್ದು ಮಾಡಲಾಗಿದೆ ಎಂದು ಕೇಂದ್ರ ಸರಕಾರ ಗುರುವಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಅಲ್ಲ ದೆ ಈ ವಿದ್ಯಾರ್ಥಿಗಳಿಗೆ ಜೂ. 23ರಂದು ಮರುಪರೀಕ್ಷೆ ಮಾಡಲಾಗುವುದು. ಒಂದೋ ವಿದ್ಯಾರ್ಥಿಗಳು ಮರುಪರೀಕ್ಷೆ ಎದುರಿಸಬಹುದು, ಇಲ್ಲವೇ ಕೃಪಾಂಕರಹಿತ ಅಂಕವನ್ನು ಮಾತ್ರ ಉಳಿಸಿಕೊಳ್ಳಬಹುದು ಎಂದು ಸರಕಾರ ಹೇಳಿದೆ.

ಇದೇ ವೇಳೆ ಸರ್ವೋಚ್ಚ ನ್ಯಾಯಾಲಯವು ನೀಟ್‌-ಯುಜಿ ವಿದ್ಯಾರ್ಥಿಗಳಿಗೆ ಜು. 6ರಂದು ನಡೆಯಲಿರುವ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿದೆ. ಆದರೆ ಈ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳು, ಇತರ ಸಂಸ್ಥೆಗಳು ಪ್ರವೇಶ ನೀಡುವ ಬಗ್ಗೆ ತನ್ನ ಅಂತಿಮ ತೀರ್ಪನ್ನು ನೋಡಿ ನಿರ್ಧರಿಸಬೇಕಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ. ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಫ‌ಲಿತಾಂಶವನ್ನು ಸಮಗ್ರವಾಗಿ ರದ್ದು ಮಾಡಬೇಕು, ಜು. 6ರ ಕೌನ್ಸಿಲಿಂಗ್‌ಗೂ ತಡೆ ನೀಡಬೇಕು ಎಂದು ವಿದ್ಯಾರ್ಥಿಗಳ ಪರ ಅರ್ಜಿದಾರರು ವಾದಿಸಿದ್ದರು.

ಜೂ.23ರಂದು ಮರುಪರೀಕ್ಷೆ
ಕೃಪಾಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಜೂ. 23ರಂದು ಮರುಪರೀಕ್ಷೆ ನಡೆಸಲಾಗುವುದು. ಆ ಫ‌ಲಿತಾಂಶವನ್ನೇ ಅಂತಿಮವೆಂದು ಪರಿಗಣಿಸಲಾಗುವುದು. ಜೂ. 30ರಂದು ಫ‌ಲಿತಾಂಶ ಪ್ರಕಟವಾಗಲಿದೆ ಎಂದು ಎನ್‌ಟಿಎ ಹೇಳಿದೆ.

ಕೃಪಾಂಕ ನೀಡಿದ್ದು ಏಕೆ?

ನೀಟ್‌ ಪರೀಕ್ಷೆ ವೇಳೆ ತಪ್ಪು ಪ್ರಶ್ನೆಪತ್ರಿಕೆ ನೀಡ ಲಾಗಿದೆ. ಕೆಲವರಿಗೆ ಹರಿದ ಒಎಂಆರ್‌ ಶೀಟ್‌ ನೀಡಲಾಗಿದೆ, ಕೆಲವರಿಗೆ ಶೀಟ್‌ ನೀಡುವು ದನ್ನೇ ತಡ ಮಾಡಲಾಗಿದೆ. ಇದನ್ನು ಸರಿಪಡಿಸು ವಾಗ ತಮಗೆ ಸಮಯ ನಷ್ಟವಾಗಿದೆ ಎಂದು ಹರಿಯಾಣ, ಮೇಘಾಲಯ, ಛತ್ತೀಸ್‌ಗಢ, ಸೂರತ್‌, ಚಂಡೀಗಢದ 6 ಕೇಂದ್ರಗಳ ವಿದ್ಯಾರ್ಥಿ ಗಳು ದೂರಿದ್ದರು. ಇವರಿಗೆಲ್ಲ ಎನ್‌ಟಿಎ ಕೃಪಾಂಕ ನೀಡಿತ್ತು.

ಕೃಪಾಂಕ ರದ್ದತಿಯಿಂದ ನೀಟ್‌ ಅಗ್ರಸ್ಥಾನಿಗಳ ಸಂಖ್ಯೆ 67ರಿಂದ 61ಕ್ಕೆ ಇಳಿದಿದೆ. ಕೃಪಾಂಕದ ಕಾರಣದಿಂದ ಹರಿಯಾಣದ ಒಂದೇ ತರಬೇತಿ ಕೇಂದ್ರದ ಒಟ್ಟು 6 ಮಂದಿ 720ಕ್ಕೆ 720 ಅಂಕ ಪಡೆದಿದ್ದರು. ಇವರು ಕೃಪಾಂಕಗಳ ಜತೆಗೆ ಅಗ್ರಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ.

ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಅಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವುದು ಕಂಡುಬಂದಿಲ್ಲ. ಯಾವುದೇ ವಿದ್ಯಾರ್ಥಿ ಗಳಿಗೂ ತೊಂದರೆಯಾಗುವುದಿಲ್ಲ. ಎನ್‌ಟಿಎ ಜವಾಬ್ದಾರಿಯುತ ಸಂಸ್ಥೆ. ಅದು ವಾರ್ಷಿಕವಾಗಿ 50 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುತ್ತದೆ. ಉನ್ನತ ಮಟ್ಟದ ಪರೀಕ್ಷೆಗಳನ್ನೂ ನಡೆಸುತ್ತದೆ. ನೀಟ್‌ ಅಂಕ ನೀಡಲು ಸರ್ವೋಚ್ಚ ನ್ಯಾಯಾ ಲಯದ ನಿರ್ದೇಶನವನ್ನೇ ಅನುಸರಿಸಲಾಗಿದೆ. ಅದರಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಸರಿ ಮಾಡಲಾಗುವುದು
-ಧರ್ಮೇಂದ್ರ ಪ್ರಧಾನ್‌, ಕೇಂದ್ರ ಶಿಕ್ಷಣ ಸಚಿವ

ನೀಟ್‌ ಪರೀಕ್ಷೆಯಲ್ಲಿ ಬರೀ ಕೃಪಾಂಕ ನೀಡಿರು ವುದು ಮಾತ್ರ ಸಮಸ್ಯೆಯಲ್ಲ. ಅಲ್ಲಿ ಅಪ್ರಾಮಾಣಿಕತೆಯಿದೆ, ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ, ಭ್ರಷ್ಟಾಚಾರ ನಡೆದಿದೆ. ಮೋದಿ ಸರಕಾರದ ನಡೆಯಿಂದ 24 ಲಕ್ಷ ವಿದ್ಯಾರ್ಥಿ ಗಳ ಭವಿಷ್ಯ ಅತಂತ್ರವಾಗಿದೆ. ಇದರ ವಿರುದ್ಧ ಸಿಬಿಐ ತನಿಖೆ ನಡೆಯ ಬೇಕು, ಇಲ್ಲವೇ ಸರ್ವೋಚ್ಚ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು.
-ಮಲ್ಲಿಕಾರ್ಜುನ ಖರ್ಗೆ,ಕಾಂಗ್ರೆಸ್‌ ಅಧ್ಯಕ್ಷ

ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಗೌರವ್‌ ಗೊಗೋಯಿ, ಈ ವಿಚಾರವನ್ನು ಸಂಸತ್‌ ಅಧಿವೇಶನದಲ್ಲಿ ಎತ್ತಿಕೊಳ್ಳಲಿದ್ದೇವೆ ಎಂದು ತಿಳಿಸಿದರು.

ಹಲವೆಡೆ ಪ್ರತಿಭಟನೆ

ನೀಟ್‌ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಗುರುವಾರ ದಿಲ್ಲಿಯ ಜಂತರ್‌ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿದೆ. “24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬಯಸುತ್ತಿದ್ದಾರೆ, ಹಗರಣವನ್ನಲ್ಲ’ ಎಂದು ಘೋಷಣೆಗಳನ್ನು ಕೂಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಕೃಪಾಂಕ ರದ್ದು ಮಾಡುವ ಮೂಲಕ ಕೇಂದ್ರ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಇನ್ನಾದರೂ ಎಂಬಿಬಿಎಸ್‌ ಆಯ್ಕೆ ವಿಧಾನ ನಿರ್ಧರಿಸುವ ಅಧಿಕಾರ ಮತ್ತೆ ರಾಜ್ಯಗಳಿಗೆ ನೀಡಲಿ.

 ಎಂ.ಕೆ.ಸ್ಟಾಲಿನ್‌, ತಮಿಳುನಾಡು ಸಿಎಂ

 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.