NEET ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಆರೋಪ: ಎನ್‌ಟಿಎಗೆ ಸುಪ್ರೀಂ ತರಾಟೆ


Team Udayavani, Jun 12, 2024, 6:41 AM IST

NEET question paper leak, illegal allegation: Supreme slams NTA

ಹೊಸದಿಲ್ಲಿ: “ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ. ನಮಗೆ ಇದಕ್ಕೆ ಸೂಕ್ತ ಉತ್ತರ ಬೇಕು.’ -ನೀಟ್‌-ಯುಜಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದ್ದು ಹೀಗೆ.

ಅವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಹೊಸದಾಗಿ ನೀಟ್‌-ಯುಜಿ ಪರೀಕ್ಷೆಯನ್ನು ನಡೆಸಬೇಕೆಂದು ಕೋರಿ 10 ನೀಟ್‌ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ| ವಿಕ್ರಮ್‌ ನಾಥ್‌ ಮತ್ತು ನ್ಯಾ| ಅಹ್ಸಾನುದ್ದೀನ್‌ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಎನ್‌ಟಿಎ ಹಾಗೂ ಕೇಂದ್ರ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಇದೇ ವೇಳೆ ಎಂಬಿಬಿಎಸ್‌, ಬಿಡಿಎಸ್‌ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುತ್ತಿರುವ ಕೌನ್ಸೆಲಿಂಗ್‌ ಪ್ರಕ್ರಿಯೆಗೆ ತಡೆಯಾಜ್ಞೆ ತರಲು ನ್ಯಾಯಪೀಠ ನಿರಾಕರಿಸಿದೆ. ಜತೆಗೆ ವಿಚಾರಣೆಯನ್ನು ಜು. 8ಕ್ಕೆ ಮುಂದೂಡಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ಆರೋಪಗಳ ಬಗ್ಗೆ ವಾದ ಆಲಿಸಿದ ನ್ಯಾಯಪೀಠವು ಎನ್‌ಟಿಎಯ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, “ಇದೇನೂ ಸರಳ ವಿಚಾರವಲ್ಲ. ನೀವು ಪರೀಕ್ಷೆಯ ಪಾವಿತ್ರ್ಯವನ್ನೇ ಹಾಳು ಮಾಡಿದ್ದೀರಿ. ನಮಗೆ ಉತ್ತರ ಬೇಕು’ ಎಂದಿತು. ಜತೆಗೆ ಬಿಹಾರದಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಬಿಹಾರ ಸರಕಾರಕ್ಕೂ ನೋಟಿಸ್‌ ಜಾರಿ ಮಾಡಿತು.

ಏನಿದು ವಿವಾದ?

– ನೀಟ್‌-ಯುಜಿಯಲ್ಲಿ 67 ಅಭ್ಯರ್ಥಿಗಳು 720ರ ಪೂರ್ಣಾಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದರು.

– ನೀಟ್‌ ಅಂಕ ನೀತಿಯ ಪ್ರಕಾರ ಇಷ್ಟು ಜನರಿಗೆ ಅಗ್ರಸ್ಥಾನ, ಮತ್ತಿಬ್ಬರಿಗೆ 719, 718 ಅಂಕ ಬರುವ ಸಾಧ್ಯತೆ ಇಲ್ಲ ಎನ್ನುವುದು ಬಹುತೇಕರ ವಾದ.

– ಪರೀಕ್ಷೆಯ ಬಹುತೇಕ ಟಾಪರ್‌ಗಳು ಒಂದೇ ಪರೀಕ್ಷಾ ಕೇಂದ್ರಕ್ಕೆ ಸೇರಿದವರು ಎಂಬ ಆರೋಪ.

– ಹೀಗಾಗಿ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಾಗಿರಬಹುದು ಎಂಬ ಅನುಮಾನ.

– ಆಯ್ದ 1,563 ವಿದ್ಯಾರ್ಥಿಗಳಿಗೆ ನಿರಂಕುಶವಾಗಿ ಕೃಪಾಂಕ ನೀಡಲಾಗಿದೆ ಎಂಬ ಆರೋಪ.

– ರಾಜಸ್ಥಾನದಲ್ಲಿ ಮೊದಲೇ ಅಂಕಗಳನ್ನು ಗುರುತಿಸಿದ್ದ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಹಂಚಿ, ವಾಪಸ್‌ ಪಡೆಯಲಾಗಿತ್ತು ಎಂಬ ಆರೋಪ.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.