ಬಾಪು ಕೊನೇ ಮಾತು ಹೇ ರಾಮ್‌ ಅಲ್ಲ ಎಂದು ಹೇಳೇ ಇಲ್ಲ: ಗಾಂಧೀಜಿ ಪಿಎ


Team Udayavani, Jan 30, 2018, 5:00 PM IST

Mahatma-Gandhiji-600.jpg

ಚೆನ್ನೆ : ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರು 70 ವರ್ಷಗಳ ಹಿಂದೆ ಹತ್ಯೆಗೀಡಾದಾಗ “ಹೇ ರಾಮ್‌’ ಎಂದು ಹೇಳಿರಲಿಲ್ಲ ಎಂದು ದಶಕಗಳ ಹಿಂದೆ ಬಹಿರಂಗಪಡಿಸುವ ಮೂಲಕ ಇಡಿಯ ದೇಶಕ್ಕೇ ಆಘಾತ ಉಂಟುಮಾಡಿದ್ದ 96ರ ಹರೆಯದ, ಬಾಪು ಅವರ ಆಪ್ತ ಕಾರ್ಯದರ್ಶಿ ವೆಂಕಿಟ ಕಲ್ಯಾಣಂ ಅವರು “ನನ್ನ ಮಾತುಗಳನ್ನು ಅಂದು ತಪ್ಪಾಗಿ ಗ್ರಹಿಸಲಾಗಿತ್ತು’ಎಂದು ಹೇಳಿದ್ದಾರೆ. 

“ಅಂದು ನಾನು ಹೇಳಿದ್ದನ್ನು ತಪ್ಪಾಗಿ ಗ್ರಹಿಸಲಾಗಿದೆ. ಬಾಪುಜೀ ಹೇ ರಾಮ್‌ ಎಂದು ಹೇಳಿರಲಿಲ್ಲ ಎಂದು ನಾನೆಂದೂ ನುಡಿದಿರಲಿಲ್ಲ; ಅವರು ಹೇ ರಾಮ್‌ ಎಂದು ಹೇಳಿದ್ದು ನನಗೆ ಕೇಳಿಸಲಿಲ್ಲ ಎಂದು ಹೇಳಿದ್ದೆ. ಮಹತ್ಮಾ ಗಾಂಧೀಜಿ ಅವರು ಸಾಯುವಾಗ ಹೇ ರಾಮ್‌ ಎಂದು ಹೇಳಿದ್ದರೋ ಇಲ್ಲವೋ ನನಗೆ ಗೊತ್ತಿಲ್ಲ’ ಎಂದು ವೆಂಕಿಟ ಕಲ್ಯಾಣಂ ಹೇಳಿದ್ದಾರೆ. 

ಕಲ್ಯಾಣಂ ಅವರು 1943ರಿಂದ 1948ರ ವರೆಗೆ ಬಾಪು ಅವರ ಆಪ್ತ ಕಾರ್ಯದರ್ಶಿ ಯಾಗಿದ್ದರು. 1948ರ ಜನವರಿ 30ರಂದು ನಡೆದಿದ್ದ ಬಾಪೂಜೀ ಹತ್ಯೆಯ ಪ್ರತ್ಯಕ್ಷದರ್ಶಿ ಎಂದು ಹೇಳಿಕೊಂಡಿರುವ ಕಲ್ಯಾಣಂ “ಗಾಂಧೀಜಿಯವರು ಗುಂಡೇಟಿನಿಂದ ನೆಲಕ್ಕೆ ಕುಸಿದು ಬಿದ್ದಾಗ ಅಲ್ಲಿ ವಿಪರೀತ ಆಕ್ರಂದನ, ಗದ್ದಲ, ಗೊಂದಲ ಉಂಟಾಯಿತು. ಆಗ ನನಗೆ ಏನೂ ಕೇಳಿಸಲಿಲ್ಲ; ಗಾಂಧೀಜಿ ಅವರು ಸಾಯುವಾಗ ಹೇ ರಾಮ್‌ ಎಂದು ಹೇಳಿದ್ದಿರಬಹುದು; ಆದರೆ ನನಗೆ ಅದು ಗೊತ್ತಿಲ್ಲ’ ಎಂದು ಕಲ್ಯಾಣಂ ಹೇಳಿದರು. 

2006ರಲ್ಲಿ ಕಲ್ಯಾಣಂ ಅವರು ಪತ್ರಿಕಾ ಗೋಷ್ಠಿ ನಡೆಸಿ “ಗಾಂಧೀಜಿಯವರು ಗುಂಡೇಟಿನಿಂದ ನೆಲಕ್ಕುರುಳಿ ಬೀಳುವಾಗ ಹೇ ರಾಮ್‌ ಎಂದು ಹೇಳಿರಲಿಲ್ಲ’ ಎಂದು ಹೇಳಿದ್ದರು. 

ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಅವರು ಕಲ್ಯಾಣಂ ಅವರ ಹೇಳಿಕೆಯಲ್ಲಿ  ಹುರುಳಿಲ್ಲ  ಎಂದು ಹೇಳಿದ್ದರು. ಗಾಂಧೀಜಿಯವರ ಹತ್ಯೆ ವಿಚಾರಣೆ ವೇಳೆ ಸಾಕ್ಷ್ಯ ನುಡಿದ್ದ ಸರ್ದಾರ್‌ ಗುರುಬಚನ್‌ ಸಿಂಗ್‌ ಅವರ ಮಾತುಗಳನ್ನು ಉದ್ಧರಿಸಿರುವ ತುಷಾರ್‌ ಗಾಂಧಿ “ಬಾಪು ಅವರು ಗುಂಡೇಟಿನಿಂದ ಕುಸಿದು ಬೀಳುವಾಗ ಕೈಗಳನ್ನು ಎದೆಗವುಚಿಕೊಂಡು “ಹೇ ರಾಮ್‌’ ಎಂದು ಹೇಳಿದ್ದರು’ ಎಂದು ಸ್ಪಷ್ಟಪಡಿಸಿದ್ದಾರೆ.

ಗೋಡ್ಸೆ ಗಾಂಧೀಜಿಯವರನ್ನು ಕೊಂದದ್ದು ಒಂದೇ ಸಲ; ಆದರೆ ರಾಜಕೀಯ ಪಕ್ಷಗಳು ಗಾಂಧೀಜಿಯವರ ಬೋಧನೆಗಳನ್ನು ಅನುಸರಿಸದೆ ನಿತ್ಯವೂ ಅವರನ್ನು ಕೊಲ್ಲುತ್ತಿದ್ದಾರೆ ಎಂದು ಕಲ್ಯಾಣಂ ಹೇಳಿದರು. 

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.