Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Team Udayavani, Sep 21, 2024, 9:51 AM IST
ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ವಿವಾದದ ನಡುವೆಯೇ ಅಮೂಲ್ ಶುಕ್ರವಾರ (ಸೆ.20) ಸ್ಪಷ್ಟನೆಯನ್ನು ನೀಡಿದೆ.
ಈ ಕುರಿತು ಸ್ಪಷ್ಟನೆ ನೀಡಿದ ಅಮೂಲ್ ನಾವು ತಿರುಪತಿ ದೇವಸ್ಥಾನಕ್ಕೆ ಎಂದಿಗೂ ತುಪ್ಪವನ್ನು ಸರಬರಾಜು ಮಾಡಿಲ್ಲ. ನಮ್ಮ ಸಂಸ್ಥೆಯಿಂದ ತಿರುಪತಿ ದೇವಸ್ಥಾನಕ್ಕೆ ತುಪ್ಪ (ಅಮುಲ್ ತುಪ್ಪ) ಸರಬರಾಜು ಮಾಡಲಾಗಿದೆ ಎಂದು ಹೇಳಲಾದ ತಪ್ಪು ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿವೆ ಎಂದು ಅಮುಲ್ ಇಂಡಿಯಾ ಶುಕ್ರವಾರ ಹೇಳಿದೆ. ಈ ಎಲ್ಲಾ ವರದಿಗಳು ವದಂತಿಗಳಷ್ಟೇ ಎಂದು ಕಂಪನಿ ಹೇಳಿಕೊಂಡಿದೆ.
ಅಮುಲ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿದ್ದು ‘ತಿರುಪತಿ ದೇವಸ್ಥಾನಕ್ಕೆ ತಾನು ಎಂದಿಗೂ ತುಪ್ಪವನ್ನು ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳು ಸಂಪೂರ್ಣ ತಪ್ಪು ಎಂದು ಅಮುಲ್ ಹೇಳಿದೆ. ಅಮುಲ್, “ನಮ್ಮ ತುಪ್ಪವನ್ನು ಅತ್ಯಾಧುನಿಕ ಮತ್ತು ISO ಪ್ರಮಾಣೀಕೃತ ಸ್ಥಾವರಗಳಲ್ಲಿ ತಯಾರಿಸಲಾಗುತ್ತದೆ. ಇದು ಶುದ್ಧ ಹಾಲಿನ ಕೊಬ್ಬಿನಿಂದ ತಯಾರಿಸಲ್ಪಟ್ಟಿದೆ, ಇದನ್ನು ಗುಣಮಟ್ಟದ ಪರೀಕ್ಷೆಯ ನಂತರ ಮಾತ್ರ ಬಳಸಲಾಗುತ್ತದೆ. ನಮ್ಮ ಎಲ್ಲಾ ಉತ್ಪನ್ನಗಳನ್ನು FSSAI ಮಾನದಂಡಗಳ ಪ್ರಕಾರ ತಯಾರಿಸಲಾಗುತ್ತದೆ ಇದರಲ್ಲಿ ಯಾವುದೇ ರೀತಿಯ ಕಲಬೆರಕೆಗೆ ಅವಕಾಶವಿಲ್ಲ.” ಎಂದು ಸ್ಪಷ್ಟಪಡಿಸಿದೆ.
Issued in Public Interest by Amul pic.twitter.com/j7uobwDtJI
— Amul.coop (@Amul_Coop) September 20, 2024
ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನಂತಹ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ ಬಳಿಕ ಇಡೀ ಸಮಸ್ಯೆ ಉದ್ಭವವಾಗಿದೆ. ಈ ಹೇಳಿಕೆಯ ನಂತರ ತಿರುಪತಿ ದೇವಸ್ಥಾನದಲ್ಲಿ ಅಮುಲ್ ತುಪ್ಪವನ್ನು ಬಳಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಡಲು ಪ್ರಾರಂಭಿಸಿತು. ಆದರೆ, ಅಮುಲ್ ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ದೇವಸ್ಥಾನಕ್ಕೆ ಎಂದಿಗೂ ತುಪ್ಪವನ್ನು ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ: Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.