![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-415x268.jpg)
ಉದ್ಯೋಗ ಸೃಷ್ಟಿಗಾಗಿ ಹೊಸ ಸಾಲ ಯೋಜನೆ
Team Udayavani, Jul 2, 2019, 6:00 AM IST
![42](https://www.udayavani.com/wp-content/uploads/2019/07/42-620x406.jpg)
ನವದೆಹಲಿ: ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ಸಣ್ಣ, ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ಸಾಲ ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಬಗ್ಗೆ ರಾಜ್ಯಸಭೆಯಲ್ಲಿ ಮಾಹಿತಿ ನೀಡಿರುವ ಕೇಂದ್ರ ಮಧ್ಯಮ, ಸಣ್ಣ ಉದ್ದಿಮೆ ಸಚಿವ ನಿತಿನ್ ಗಡ್ಕರಿ, ಈ ಹೊಸ ಯೋಜನೆಯಲ್ಲಿ ಎಸ್ಸಿ- ಎಸ್ಟಿ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಉದ್ಯೋಗ ಸೃಜಿಸುವ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆ ಮಾಡಲಾಗಿಲ್ಲ ಎಂದು ಕೇಂದ್ರ ಸರ್ಕಾರದ ಇತ್ತೀಚಿನ ದತ್ತಾಂಶಗಳು ಮಾಹಿತಿ ನೀಡಿರುವಂತೆಯೇ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ.
ಈ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್ಗಳ ಜತೆಗೆ ಮಾತುಕತೆ ನಡೆಸಲಾಗುತ್ತದೆ. ಈ ಮೂಲಕ ಬಡವರಿಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಪ್ರಯತ್ನ ಮಾಡಲಾಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.
59 ನಿಮಿಷಗಳಲ್ಲಿ ಸಾಲ: ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯೋಗ ಯೋಜನೆಗಳಿಗೆ 59 ನಿಮಿಷಗಳಲ್ಲಿ ಸಾಲ ನೀಡಲಾಗುತ್ತದೆ. ಅದಕ್ಕಾಗಿ ಎಸ್ಐಡಿಬಿಐ ಬ್ಯಾಂಕ್ ಸಹಯೋಗದಲ್ಲಿ www.psbloansin59minutes.com ಎಂಬ ವೆಬ್ಸೈಟ್ ರೂಪಿಸಲಾಗಿದೆ. ಅದರಲ್ಲಿ ಸರ್ಕಾರಿ ಸ್ವಾಮ್ಯದ ಇತರ ಬ್ಯಾಂಕ್ಗಳೂ ಇವೆ. 1 ಲಕ್ಷ ರೂ.ಗಳಿಂದ 100 ಲಕ್ಷ ರೂ. ವರೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಿವೆ. ಸರ್ಕಾರಿ ಸ್ವಾಮ್ಯದ 20 ಬ್ಯಾಂಕ್ಗಳು ಈ ವೆಬ್ಸೈಟ್ ಜತೆಗೂಡಿವೆ ಎಂದು ಗಡ್ಕರಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು](https://www.udayavani.com/wp-content/uploads/2024/12/Modi-9-150x83.jpg)
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![hejjenu 1](https://www.udayavani.com/wp-content/uploads/2024/12/hejjenu-1-1-150x80.jpg)
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.