ಆಸ್ತಿ ವಿವರ ಘೋಷಣೆ: ಸಚಿವರ ಕುಟುಂಬಸ್ಥರಿಗೂ ಕಡ್ಡಾಯ
ಉತ್ತರ ಪ್ರದೇಶ ಸರ್ಕಾರದಿಂದ ಸದ್ಯದಲ್ಲೇ ಹೊಸ ಆದೇಶ
Team Udayavani, Apr 27, 2022, 7:40 AM IST
ಲಕ್ನೋ: ಭ್ರಷ್ಟಾಚಾರವನ್ನು ಹತ್ತಿಕ್ಕುವಲ್ಲಿ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಉತ್ತರ ಪ್ರದೇಶ ಸರ್ಕಾರ, ಸಚಿವರು, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಕುಟುಂಬ ಸದಸ್ಯರು ಪ್ರತಿ ವರ್ಷ ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂಬ ಹೊಸ ನಿಯಮ ಜಾರಿಗೆ ತರಲು ನಿರ್ಧರಿಸಿದೆ.
ಸದ್ಯದಲ್ಲಿ ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ಈ ಬಗ್ಗೆ ವಿವರಣೆ ಪ್ರಕಟಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
ಅಷ್ಟೇ ಅಲ್ಲ, ಸಚಿವಾಲಯಗಳ ಕಾರ್ಯವೈಖರಿಯಲ್ಲಿ ಅವರ ಕುಟುಂಬಸ್ಥರು ಯಾವುದೇ ರೀತಿಯಲ್ಲೂ ಮೂಗು ತೂರಿಸುವಂತಿಲ್ಲ. ಜೊತೆಗೆ, ಉತ್ತರ ಪ್ರದೇಶದ ಎಲ್ಲಾ 18 ವಲಯಗಳಲ್ಲಿ ಸೇವೆ ಸಲ್ಲಿಸುವ ಸಚಿವರು, ತಮ್ಮ ವಲಯಗಳಿಗೆ ಹೋಗಿ ಜನರನ್ನು ಭೇಟಿ ಮಾಡಿ ಅಲ್ಲಿ ನಿರಂತರವಾಗಿ ಜನಸೇವೆ ಸಲ್ಲಿಸುವಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲಾ ಸಚಿವರು ಆ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಬೇಕು ಎಂದು ಖುದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರವರೇ ಸೂಚಿಸಿದ್ದಾರೆ.
ಇದನ್ನೂ ಓದಿ:CM ಯೋಗಿ ಆದೇಶದ ಬೆನ್ನಲ್ಲೇ 17,000 ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಶಬ್ದದ ಪ್ರಮಾಣ ಇಳಿಕೆ
ಎಸ್ಪಿ ಟೀಕೆ:
ಸಚಿವರ, ಅಧಿಕಾರಿಗಳ ಕುಟುಂಬಸ್ಥರು ಆಸ್ತಿ ವಿವರ ನೀಡುವ ನಿಯಮ ಜಾರಿಗೊಳಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ಸಮಾಜವಾದಿ ಪಾರ್ಟಿ ಟೀಕಿಸಿದೆ. “ಈ ಹಿಂದೆ, ಕೇಂದ್ರ ಸರ್ಕಾರವೂ ಸಚಿವರು ತಮ್ಮ ಆಸ್ತಿ ವಿವರವನ್ನು ಪ್ರತಿವರ್ಷ ಕಡ್ಡಾಯವಾಗಿ ಸಲ್ಲಿಸಬೇಕೆಂದು ಸೂಚಿಸಿತ್ತು. ಇದುವರೆಗೆ ಯಾವ ಸಚಿವರೂ ವಿವರ ಸಲ್ಲಿಸಿಲ್ಲ. ಹಾಗಾಗಿ, ಇಂಥ ಆದೇಶಗಳೆಲ್ಲಾ ಕೇವಲ ಬೂಟಾಟಿಕೆ, ಡ್ರಾಮಾ ಆಗಿರುತ್ತವೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.