ಹರಿಯಾಣ: ಕಲ್ಲು ಗಣಿಗಾರಿಕೆ ತಡೆಯಲು ಹೋದ ಡಿವೈಎಸ್ಪಿ ಹತ್ಯೆ
Team Udayavani, Jul 20, 2022, 5:55 AM IST
ಗುರುಗ್ರಾಮ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ಡಿವೈಎಸ್ಪಿ ಮೇಲೆ ಲಾರಿ ಹರಿಸಿ ಹತ್ಯೆ ಮಾಡಲಾಗಿದೆ.
ಹರಿಯಾಣದ ನುಹ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆ ದಿದ್ದು, ಹತ್ಯೆ ಗೀಡಾದ ಅಧಿ ಕಾರಿ ಯನ್ನು ಸುರೇಂದ್ರ ಸಿಂಗ್ ಬಿಷ್ಣೋಯ್ ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಲಾರಿಯ ಚಾಲಕ ನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಜಿಲ್ಲೆಯ ಅರಾವಳಿ ಪರ್ವತ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಬಿಷ್ಣೋಯ್ ಅವರಿಗೆ ಮಾಹಿತಿ ಬಂದಿತ್ತು.
ಪಚ್ಗಾಂವ್ನಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ವೇಳೆ ಸಿಬಂದಿ ಜತೆಗೆ ಅವರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದವರು ಪರಾರಿಯಾಗಿದ್ದಾರೆ. ಈ ಪೈಕಿ ಕೆಲವರು ಕಲ್ಲು ತುಂಬಿದ ಲಾರಿಯನ್ನೇರಿ ಪರಾರಿಯಾಗಲು ಮುಂದಾಗಿದ್ದರು.
ಚಲಿಸುತ್ತಿದ್ದ ಲಾರಿಯನ್ನು ನಿಲ್ಲಿಸುವಂತೆ ಸುರೇಂದ್ರ ಸಿಂಗ್ ಸೂಚನೆ ನೀಡಿದರು. ಆದರೆ ಲಾರಿ ಚಾಲಕ ಡಿವೈಎಸ್ಪಿ ಮೇಲೆಯೇ ವಾಹನ ಹರಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಬಿಷ್ಣೋಯ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು. ಅವರು ನಿವೃತ್ತಿಯಾಗಲು ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದವು.
ರಾಜಕೀಯವಾಗಿಯೂ ಈ ಘಟನೆ ಬಿರುಸು ಪಡೆದುಕೊಂಡಿದೆ. ಅಧಿಕಾರಿಯನ್ನು ಹತ್ಯೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಕಲ್ಲು ಗಣಿ ಮಾಫಿಯಾಕ್ಕೆ ಕಠಿನ ಸಂದೇಶ ರವಾನಿಸಬೇಕು ಎಂದು ಬಿಜೆಪಿ ಸಂಸದ ಬೃಜೇಂದ್ರ ಸಿಂಗ್ ಒತ್ತಾಯಿಸಿದ್ದಾರೆ. ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಕೂಡ ಘಟನೆಯನ್ನು ಖಂಡಿಸಿದ್ದಾರೆ. ಪೊಲೀಸ್ ಅಧಿಕಾರಿಯ ಹತ್ಯೆ ರಾಜ್ಯದಲ್ಲಿ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಹರಿಯಾಣದಲ್ಲಿ ಶಾಸಕರಿಗೆ ಮತ್ತು ಪೊಲೀಸರಿಗೇ ಭದ್ರತೆ ಇಲ್ಲ ಎಂದಾದರೆ ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
1 ಕೋಟಿ ರೂ. ಪರಿಹಾರ
ಹತ್ಯೆಯಾಗಿರುವ ಡಿವೈಎಸ್ಪಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಹೇಳಿದ್ದಾರೆ. ಜತೆಗೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯನ್ನು ಮಟ್ಟ ಹಾಕಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Explainer: FBI ವಾಂಟೆಡ್ ಲಿಸ್ಟ್ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್ ಯಾದವ್?
Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.