![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 19, 2024, 6:40 AM IST
ಕೋಲ್ಕತಾ: ದೇಶಾದ್ಯಂತ ಕೋಲ್ಕತದ ಆರ್.ಜಿ. ಕಾರ್ ಆಸ್ಪತ್ರೆಯಲ್ಲಿ ನಡೆದ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಂತೆಯೇ ಎಚ್ಚೆತ್ತು ಕೊಂಡಿ ರುವ ಪಶ್ಚಿಮ ಬಂಗಾಲ ಸರಕಾರವು ಮಹಿಳಾ ವೈದ್ಯರ ಸುರಕ್ಷೆಯ ನಿಟ್ಟಿನಲ್ಲಿ ಹೊಸ ಯೋಜನೆ ಘೋಷಿಸಿದೆ. ಅದಕ್ಕೆ “ರಟೈರರ್ ಸಾಥಿ-ಹೆಲ್ಪರ್ಸ್ ಆಫ್ ನೈಟ್’ ಎಂದು ಹೆಸರಿಸಲಾಗಿದೆ.
ಅದರ ಅನ್ವಯ ರಾತ್ರಿ ವೇಳೆ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತಾ ಸಿಬಂದಿಯನ್ನು ನಿಯೋಜಿಸಲಾಗುವುದು. ಪೊಲೀಸ್ ಠಾಣೆ ಗಳೊಂದಿಗೆ ಸಂಪರ್ಕ ಹೊಂದಿರುವ ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗುವುದು. ಅವುಗಳ ಡೌನ್ ಲೋಡ್ ಕಡ್ಡಾಯಗೊಳಿಸುವ ಮೂಲಕ ವಿಪತ್ತಿನ ಸಂದರ್ಭದಲ್ಲಿ ನೇರವಾಗಿ ಠಾಣೆಗೆ ಮಾಹಿತಿ ಸಿಗುವಂತೆ ಮಾಡಲಾಗುವುದು ಎಂದು ಸರಕಾರ ಹೇಳಿದೆ. ಆಸ್ಪತ್ರೆಗಳಲ್ಲಿ ವಿಶೇಷ ವಿಶ್ರಾಂತಿ ಕೊಠಡಿಗಳ ನಿರ್ಮಾಣ, ಸಿಸಿಟಿವಿ ಕಣ್ಗಾವಲು ಸಹಿತ ಹಲವು ಕ್ರಮಗಳನ್ನು ಕೈಗೊಳ್ಳುವುದಾಗಿ ಸರಕಾರ ತಿಳಿಸಿದೆ. ಖಾಸಗಿ ಆಸ್ಪತ್ರೆಗಳಿಗೂ ಈ ನಿಯಮ ಅನುಸರಿಸಲು ಸೂಚಿಸಲಾಗಿದೆ ಎಂದು ಸರಕಾರ ಹೇಳಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.