ಹಫೀಜ್ ಸಹಿತ 12 ಉಗ್ರರ ವಿರುದ್ಧ ದೇಶದ್ರೋಹ ಕೆೇಸ್
Team Udayavani, Jan 19, 2018, 8:32 AM IST
ಹೊಸದಿಲ್ಲಿ: ಲಷ್ಕರ್-ಎ-ತಯ್ನಾಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹಾಗೂ ಹಿಜ್ಬುಲ್ ಮುಜಾ ಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಸಹಿತ 12 ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಗುರುವಾರ ಚಾರ್ಜ್ಶೀಟ್ ಸಲ್ಲಿಸಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಇವರು ಉಗ್ರ ಚಟುವಟಿಕೆಗಳನ್ನು ನಡೆಸಿದ್ದಾಗಿ ಹೇಳಿದ್ದು, ದೇಶದ್ರೋಹ ಪ್ರಕರಣವನ್ನೂ ದಾಖಲಿಸಿದೆ.
ಎನ್ಐಎ 12,794 ಪುಟಗಳ ಸುದೀರ್ಘ ವರದಿಯನ್ನು ಕೋರ್ಟ್ಗೆ ಸಲ್ಲಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುವಿಕೆ ಕುರಿತಂತೆ ತನಿಖೆಯನ್ನು ಮುಂದುವರಿಸಲು ಅನುಮತಿ ಕೋರಿದೆ. 12 ಉಗ್ರರ ವಿರುದ್ಧ ದೇಶದ್ರೋಹ, ಅಪರಾಧ ಚಟುವಟಿಕೆಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ನಡೆಸಿರುವ ಆರೋಪ ಮಾಡಿದೆ. ತನಿಖೆ ವೇಳೆ ಸಾಕಷ್ಟು ಗುರುತರ ಸಾಕ್ಷ್ಯಗಳು ಲಭ್ಯವಾಗಿವೆ. 60 ಕಡೆಗಳಲ್ಲಿ ದಾಳಿ ಮಾಡಿ, 950 ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ 300 ಸಾಕ್ಷಿಗಳಿದ್ದಾರೆ ಎಂದು ವರದಿಯಲ್ಲಿ ಎನ್ಐಎ ವಿವರಿಸಿದೆ.
ಪ್ರತ್ಯೇಕತಾವಾದಿಗಳಿಗೂ ಕಾದಿದೆ ಆತಂಕ: ಕೇವಲ ಪಾಕಿಸ್ಥಾನದಲ್ಲಿ ಅಡಗಿರುವ ಉಗ್ರರನ್ನು ಮಾತ್ರವಲ್ಲ, ಕಾಶ್ಮೀರದಲ್ಲಿನ ಪ್ರತ್ಯೇಕ ತಾವಾದಿಗಳನ್ನೂ ಎನ್ಐಎ ಉಲ್ಲೇ ಖೀಸಿದ್ದು, ಇವರ ವಿರುದ್ಧವೂ ಹಲವು ಆರೋಪಗಳನ್ನು ಮಾಡಿದೆ. ಸೈಯದ್ ಅಲಿ ಶಾ ಗೀಲಾನಿ, ಬಶೀರ್ ಅಹಮದ್ ಭಟ್, ಉದ್ಯಮಿ ಝಹೂರ್ ಅಹಮದ್ ಶಾ ವತಾಲಿ ಮತ್ತು ಫೋಟೋ ಜರ್ನಲಿಸ್ಟ್ ಕಮ್ರನ್ ಯೂಸುಫ್ ವಿರುದ್ಧವೂ ಚಾರ್ಜ್ ಶೀಟ್ ದಾಖಲಿಸಿದೆ. ಈ ಹಿಂದೆ ಕಲ್ಲು ಎಸೆತದ ಪ್ರಕರಣದಲ್ಲಿ ಜಾವೇದ್ ಅಹಮದ್ ಭಟ್ ಜತೆಗೆ ಯೂಸುಫ್ ಕೂಡ ಕಾಣಿಸಿ ಕೊಂಡಿದ್ದರು. ಹುರಿಯತ್ ಮುಖಂಡರು ಹಫೀಜ್ ಮತ್ತು ಸಲಾಹುದ್ದೀನ್ ಮಾರ್ಗ ದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿ ದ್ದಾರೆ ಎಂದು ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.