ನಿರ್ಭಯಾ ಕೇಸ್ ಅಪರಾಧಿಗಳು ಕಾನೂನನ್ನು ಖುಷಿ ಸವಾರಿಯಂತೆ ಬಳಸುತ್ತಿದ್ದಾರೆ; ಕೇಂದ್ರ
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದಿಲ್ಲಿ ಹೈಕೋರ್ಟ್ ನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
Team Udayavani, Feb 1, 2020, 7:07 PM IST
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳು ಗಲ್ಲುಶಿಕ್ಷೆಯನ್ನು ವಿಳಂಬ ಮಾಡುವ ನಿಟ್ಟಿನಲ್ಲಿ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ಖುಷಿಯ ಸವಾರಿಯಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ದಿಲ್ಲಿ ಹೈಕೋರ್ಟ್ ಗೆ ತಿಳಿಸಿದೆ.
ಗಲ್ಲುಶಿಕ್ಷೆ ಜಾರಿಯಾದ ನಂತರ ಮರಣದಂಡನೆ ಪ್ರಕ್ರಿಯೆ ವಿಳಂಬಗೊಳಿಸುವ ನಿಟ್ಟಿನಲ್ಲಿ ನಾಲ್ವರು ಅಪರಾಧಿಗಳು ಕಾನೂನು ಅವಕಾಶಗಳನ್ನು ಬಳಸಿಕೊಂಡು ವಿಳಂಬ ಮಾಡಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದಿಲ್ಲಿ ಹೈಕೋರ್ಟ್ ನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಪೈಶಾಚಿಕ ಕೃತ್ಯ ಎಸಗಿದ್ದರೂ ಕೂಡಾ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೇಶದ ತಾಳ್ಮೆಯನ್ನು ಪರೀಕ್ಷಿಸಲು ಯತ್ನಿಸುತ್ತಿದ್ದು, ಇದು ಇನ್ನಷ್ಟು ವಿಳಂಬವಾಗುತ್ತ ಹೋದರೆ ದೇಶದ ಇತಿಹಾಸದಲ್ಲಿಯೇ ಇದೊಂದು ಕಪ್ಪು ಚುಕ್ಕೆಯಾಗಲಿದೆ ಎಂದು ಮೆಹ್ತಾ ವಾದಿಸಿದರು.
ನಿರ್ಭಯಾ ಪ್ರಕರಣದಲ್ಲಿ ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಇದು ತಿರಸ್ಕೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಯ ಅರ್ಜಿ ತಿರಸ್ಕೃತಗೊಂಡ ನಂತರ ಗಲ್ಲಿಗೇರಿಸಲು 14 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ನಿಗದಿಯಂತೆ ಫೆಬ್ರುವರಿ 1ರಂದು ಬೆಳಗ್ಗೆ 6ಗಂಟೆಗೆ ನಾಲ್ವರು ಅಪರಾಧಿಗಳು ಗಲ್ಲಿಗೇರಬೇಕಾಗಿತ್ತು. ಆದರೆ ಶುಕ್ರವಾರ ವಿಚಾರಣೆ ನಡೆಸಿದ್ದ ಪಟಿಯಾಲಾ ಹೌಸ್ ಕೋರ್ಟ್ ಗಲ್ಲುಶಿಕ್ಷೆಯನ್ನು ಮುಂದೂಡಿತ್ತು. ಇದು ಅಪರಾಧಿಗಳಿಗೆ ಗಲ್ಲುಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುತ್ತಿರುವುದು ಎರಡನೇ ಬಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.