![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 7, 2020, 5:28 PM IST
ನವದೆಹಲಿ: ನಿರ್ಭಯಾ ಪ್ರಕರಣದ ನಾಲ್ವರು ದೋಷಿತರನ್ನು ಗಲ್ಲಿಗೇರಿಸಲು ಮತ್ತೆ ಹೊಸ ದಿನಾಂಕ ನಿಗದಿಪಡಿಸಬೇಕೆಂದು ಕೋರಿ ತಿಹಾರ್ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳು ಒಂದು ವಾರದೊಳಗೆ ಎಲ್ಲಾ ಕಾನೂನು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ದಿಲ್ಲಿ ಕೋರ್ಟ್ ಫೆ.5ರಂದು ಗಡುವು ನೀಡಿರುವ ಬಗ್ಗೆ ಹೆಚ್ಚುವರಿ ಸೆಷನ್ಸ್ ಜಡ್ಜ್ ಧರ್ಮೇಂದ್ರ ರಾಣಾ ಅವರು ಇಂದಿನ ಅರ್ಜಿ ವಿಚಾರಣೆ ವೇಳೆ ಗಮನ ಸೆಳೆದಿರುವುದಾಗಿ ವರದಿ ತಿಳಿಸಿದೆ.
ಒಂದು ವೇಳೆ ಆರೋಪಿಗಳನ್ನು ಗಲ್ಲುಶಿಕ್ಷೆಗೆ ಒಳಪಡಿಸಿದ ಮೇಲೆ ಮತ್ತೆ ಕಾನೂನು ಅನುಮತಿ ಕೊಟ್ಟರೂ ಬದುಕಿಸಲು ಸಾಧ್ಯವಿದೆಯೇ…ಇದೊಂದು ಅಪರಾಧಿ ಪಾಪಕೃತ್ಯವಾಗಲಿದೆ. ಹೈಕೋರ್ಟ್ ಫೆ.5ರಂದು ದೋಷಿತರಿಗೆ ಒಂದು ವಾರಗಳ ಕಾಲಾವಕಾಶ ನೀಡಿದೆ. ಅದು ನ್ಯಾಯದ ಹಿತಾಸಕ್ತಿ ಮೇಲೆ ಅವರಿಗೆ ಲಭ್ಯವಾಗಲಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಲು ಹೇಳಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಆರೋಪಿಗಳನ್ನು ಗಲ್ಲಿಗೇರಿಸಲು ಅನುಮಾನ ಮತ್ತು ಅನಿಸಿಕೆ ಆಧಾರದ ಮೇಲೆಯೇ ಡೆತ್ ವಾರಂಟ್ ಹೊರಡಿಸಲು ಸಾಧ್ಯವಿಲ್ಲ ಎಂಬ ಅಪರಾಧಿಗಳ ಪರ ವಕೀಲರ ವಾದವನ್ನು ಒಪ್ಪುವುದಾಗಿ ಹೇಳಿದ ನ್ಯಾಯಾಧೀಶರು, ಈ ಅರ್ಜಿ ಅರ್ಹತೆ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ವಜಾಗೊಳಿಸಿದ್ದೇನೆ. ಅಲ್ಲದೇ ಅಗತ್ಯವಿದ್ದಲ್ಲಿ ಸೂಕ್ತ ಮೇಲ್ಮನವಿಯೊಂದಿಗೆ ಸುಪ್ರೀಂಕೋರ್ಟ್ ಗೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನ್ಯಾಯಾಧೀಶರು ತಿಳಿಸಿರುವುದಾಗಿ ವರದಿ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.