ಕೊನೆಗೂ ನೇಣಿಗೆ ಕೊರಳೊಡ್ಡಿದ ಅತ್ಯಾಚಾರಿ ಹಂತಕರು ; ನಿರ್ಭಯಾ ಆತ್ಮಕ್ಕೆ ಶಾಂತಿ


Team Udayavani, Mar 20, 2020, 5:35 AM IST

ಕೊನೆಗೂ ನೇಣಿಗೆ ಕೊರಳೊಡ್ಡಿದ ಅತ್ಯಾಚಾರಿ ಹಂತಕರು ; ನಿರ್ಭಯಾ ಆತ್ಮಕ್ಕೆ ಶಾಂತಿ

ನವದೆಹಲಿ: ಎಂಟು ವರ್ಷಗಳ ಹಿಂದೆ ಅಂದರೆ 2012ರ ಡಿಸೆಂಬರ್ 16ರಂದು ರಾಷ್ಟ್ರ ರಾಜಧಾನಿಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಚಲಿಸುತ್ತಿದ್ದ ಬಸ್ಸಿನಲ್ಲಿ ನಡೆದಿದ್ದ ಹೇಯ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲದಲ್ಲಿ ಅಪರಾಧ ಸಾಬೀತುಗೊಂಡು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ನಾಲ್ವರು ಅಪರಾಧಿಗಳನ್ನು ಇಂದು ಬೆಳಿಗ್ಗೆ 5.30 ಗಂಟೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ನೇಣಿಗೆ ಏರಿಸಲಾಗಿದೆ.

ಈ ಮೂಲಕ ಎಂಟು ವರ್ಷಗಳ ಹಿಂದೆ ರಾಷ್ಟ್ರ ರಾಜಧಾನಿಯನ್ನು ಮಾತ್ರವಲ್ಲದೇ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಈ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳಾದ ಮುಖೇಶ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಅಕ್ಷಯ್ ಠಾಕೂರ್ ಅವರಿಗೆ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಕಟಗೊಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಶಿಕ್ಷೆ ಜಾರಿಯಾದಂತಾಗಿದೆ. ಈ ಮೂಲಕ ದುರುಳರ ಅಟ್ಟಹಾಸಕ್ಕೆ ಬಲಿಯಾಗಿದ್ದ ‘ನಿರ್ಭಯಾ’ ಆತ್ಮಕ್ಕೆ ಕೊನೆಗೂ ಶಾಂತಿ ದೊರೆತಂತಾಗಿದೆ.

ಒಂದೇ ಪ್ರಕರಣದಲ್ಲಿ ತಮ್ಮ ಅಪರಾಧ ಸಾಬೀತುಗೊಂಡು ಗಲ್ಲು ಶಿಕ್ಷೆಗೆ ಗುರಿಯಾದ ನಾಲ್ವರು ಅಪರಾಧಿಗಳನ್ನು ಏಕಕಾಲದಲ್ಲಿ ಗಲ್ಲಿಗೇರಿಸುತ್ತಿರುವುದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಪ್ರಕರಣ ಇದಾಗಿದೆ. ಇಷ್ಟು ಮಾತ್ರವಲ್ಲದೇ ದೇಶದ ಮಗಳೆಂದೇ ಕರೆಯಲ್ಪಡುತ್ತಿದ್ದ ‘ನಿರ್ಭಯಾ’ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಯಾಗುತ್ತಿರುವ ವಿಚಾರದಲ್ಲೂ ಈ ಪ್ರಕರಣ ದೇಶದ ನ್ಯಾಯಾಂಗ ಇತಿಹಾಸದಲ್ಲಿ ಪ್ರಮುಖವಾಗಿ ದಾಖಲಾಗಿದೆ.


ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ರಾಮ್ ಸಿಂಗ್ 2013ರ ಮಾರ್ಚ್ 11ರಂದು ತಿಹಾರ್ ಜೈಲಿನ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದ ಮತ್ತು ಇನ್ನೊಬ್ಬ ಬಾಲಾಪರಾಧಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿ 2015ರ ಡಿಸೆಂಬರ್ 20ರಂದು ಬಿಡುಗಡೆಗೊಂಡಿದ್ದಾನೆ.

ನಿರ್ಭಯಾ ಅತ್ಯಾಚಾರಿ ಹಂತಕರು ನೇಣಿಗೆ ಕೊರಳೊಡ್ಡಿದರು ಎಂಬ ಸುದ್ದಿ ತಿಹಾರ್ ಜೈಲಿನೊಳಗಿಂದ ಬರುತ್ತಿದ್ದಂತೆ ಜೈಲಿನ ಹೊರಭಾಗದಲ್ಲಿ ನೆರೆದಿದ್ದ ಜನರು ಸಂಭ್ರಮಿಸಿದರು. ಮತ್ತು ನಿರ್ಭಯಾ ಆತ್ಮಕ್ಕೆ ತಡವಾಗಿಯಾದರೂ ನ್ಯಾಯ ಸಿಕ್ಕಿತೆಂದು ಪ್ರತಿಕ್ರಿಯಿಸಿದರು.

ಕೊನೇ ಕ್ಷಣದಲ್ಲಿ ಮರಣದಂಡನೆ ಶಿಕ್ಷೆ ತಪ್ಪಿಸುವ ಪ್ರಯತ್ನ ವಿಫಲ ; 5.30ಕ್ಕೆ ಗಲ್ಲು ಪಕ್ಕಾ

ಹೀಗೆ ನಡೆಯಿತು ಗಲ್ಲಿಗೇರಿಸುವ ಪ್ರಕ್ರಿಯೆ:

– ನಾಲ್ವರು ಅಪರಾಧಿಗಳಿಗೆ ವೈದ್ಯರು ಆರೋಗ್ಯ ತಪಾಸಣೆಯನ್ನು ನಡೆಸಿದರು. ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ಖಚಿತಪಡಸಿದ ಬಳಿಕ ಈ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವ ಪ್ರಕ್ರಿಯೆ ಪ್ರಾರಂಭಗೊಂಡಿತು.

– ವಧಾಕಾರ ಪವನ್ ಜಲ್ಲಾದ್ ಅಪರಾಧಿಗಳನ್ನು ಗಲ್ಲಿಗೇರಿಸಲು ನಿಗದಿಪಡಿಸಲಾಗಿದ್ದ ಜೈಲು ಸಂಖ್ಯೆ 3ಕ್ಕೆ ಆಗಮಿಸಿದರು.

– ನಾಲ್ವರು ಅಪರಾಧಿಗಳನ್ನು ವಧಾ ಸ್ಥಾನದತ್ತ ಕರೆದುಕೊಂಡು ಬರಲಾಯಿತು.

– ಬಳಿಕ ಮ್ಯಾಜಿಸ್ಟ್ರೇಟ್ ಅವರು ಈ ನಾಲ್ವರ ಡೆತ್ ವಾರಂಟ್ ಪತ್ರಕ್ಕೆ ಸಹಿ ಹಾಕಿದ ಬಳಿಕ ನಾಲ್ವರನ್ನು ನೇಣಿಗೇರಿಸಲು ಸೂಚನೆ ನೀಡಿದರು.

– ಮ್ಯಾಜಿಸ್ಟ್ರೇಟ್ ಅವರ ಸೂಚನೆಯಂತೆ ವಧಾಕಾರ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಅಕ್ಷಯ್ ಠಾಕೂರ್ ಅವರನ್ನು ನೇಣಿಗೇರಿಸುತ್ತಾರೆ.

– ಬಳಿಕ ಈ ನಾಲ್ವರ ದೇಹಗಳು ಅರ್ಧಗಂಟೆ ನೇತಾಡುತ್ತಿರುವ ರೀತಿಯಲ್ಲೇ ಇರುತ್ತದೆ. ಅರ್ಧ ಗಂಟೆಯ ಬಳಿಕ ಈ ನಾಲ್ವರ ಮೃತದೇಹಗಳನ್ನು ನೇಣುಗಂಬದಿಂದ ಕೆಳಗಿಳಿಸುತ್ತಾರೆ. ಆ ಬಳಿಕ ವೈದ್ಯರು ಈ ದೇಹಗಳನ್ನು ಪರೀಕ್ಷಿಸಿ ಮೃತಪಟ್ಟಿರುವುದನ್ನು ಖಚಿತಪಡಿಸುತ್ತಾರೆ.

– ಈ ಪ್ರಕ್ರಿಯೆ ಎಲ್ಲಾ ಮುಗಿದ ಬಳಿಕ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೆಗೆದುಕೊಂಡು ಹೋಗಲಾಗುತ್ತದೆ.

– ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ನಾಲ್ವರ ಮೃತದೇಹಗಳನ್ನು ಅವರವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುತ್ತದೆ. ಒಂದುವೇಳೆ ಮೃತರ ಕುಟುಂಬ ಸದಸ್ಯರು ಮೃತದೇಹಗಳನ್ನು ಪಡೆದುಕೊಳ್ಳಲು ನಿರಾಕರಿಸಿದಲ್ಲಿ ತಿಹಾರ್ ಜೈಲು ಅಧಿಕಾರಿಗಳೇ ಅಂತಹ ಮೃತದೇಹಗಳನ್ನು ಸೂಕ್ತರೀತಿಯಲ್ಲಿ ಅಂತ್ಯಕ್ರಿಯೆ ನಡೆಸುತ್ತಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.