![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 26, 2021, 6:28 AM IST
ಮುಂಬಯಿ: ಕೇಂದ್ರ ಸರಕಾರದ “ಒಂದು ಜಿಲ್ಲೆ; ಒಂದು ಉತ್ಪನ್ನ’ ಯೋಜನೆಯನ್ನು ಜನಪ್ರಿಯ ಗೊಳಿಸಲು ಬ್ಯಾಂಕ್ಗಳು ಆಯಾ ರಾಜ್ಯ ಸರಕಾರಗಳ ಜತೆಗೆ ಚರ್ಚಿಸಬೇಕು. ಈ ಬಗ್ಗೆ ಬ್ಯಾಂಕ್ಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮುಂಬಯಿನಲ್ಲಿ ಮಾತನಾಡಿದ ಅವರು, ರಫ್ತುದಾರರಿಗೆ ಅಗತ್ಯವಾಗಿರುವ ಅಂಶಗಳು ಮತ್ತು ಕೊರತೆ ನಿವಾರಿಸುವ ನಿಟ್ಟಿನಲ್ಲಿ ರಫ್ತು ಉತ್ತೇಜನ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿಗಳ ಜತೆಗೆ ಮಾತುಕತೆ ನಡೆಸುವಂತೆಯೂ ಸೂಚಿಸಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್ಗಳು ಹೂಡಿಕೆದಾರರ ವಿಶ್ವಾಸಗಳಿಸಿಕೊಂಡ ಬಳಿಕ 12 ಸಾವಿರ ಕೋಟಿ ರೂ. ಮೊತ್ತ ಸಂಗ್ರಹಿಸುತ್ತಿವೆ.
ರಾಹುಲ್ ಗಾಂಧಿಗೆ ಏನು ಗೊತ್ತು? :
“ಸಂಪತ್ತು ಕ್ರೋಡೀಕರಣ ಎಂದರೆ ರಾಹುಲ್ ಗಾಂಧಿಗೆ ಏನು ಗೊತ್ತು?’ ಹೀಗೆಂದು ಪ್ರಶ್ನೆ ಮಾಡಿದ್ದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. ಕಾಂಗ್ರೆಸ್ ನೇತೃತ್ವದ ಸರಕಾರದ ಅವಧಿಯಲ್ಲಿಯೇ ದೇಶದ ಸಂಪನ್ಮೂಲ ಗಳನ್ನು ಮಾರಾಟ ಮಾಡಿ, ಲಂಚ ಪಡೆದುಕೊಳ್ಳುತ್ತಿತ್ತು. ಸರಕಾರಿ ಆಸ್ತಿಗಳ ಮೂಲಕ 6 ಲಕ್ಷ ಕೋಟಿ ರೂ.ಮೌಲ್ಯದ ಸಂಪನ್ಮೂಲ ಕ್ರೋಡೀಕರಣಕ್ಕೆ ಕೈಗೊಂಡ ನಿರ್ಧಾರಕ್ಕೆ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ವಿತ್ತ ಸಚಿವರು ಈ ಪ್ರಶ್ನೆ ಮಾಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.