ನಿತಿನ್ ಗಡ್ಕರಿ ಉತ್ತಮ ವ್ಯಕ್ತಿ, ಅದರೆ ಅವರ ಪಕ್ಷ ಸರಿಯಿಲ್ಲ: ಮಹಾರಾಷ್ಟ್ರ ಸಚಿವ
Team Udayavani, May 31, 2021, 1:00 PM IST
ಔರಾಂಗಾಬಾದ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಒಬ್ಬ ಉತ್ತಮ ವ್ಯಕ್ತಿ. ಅದರೆ ಅವರಿರುವ ಪಕ್ಷ ಸರಿಯಿಲ್ಲ ಎಂದು ಮಹಾರಾಷ್ಟ್ರದ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾನ್ ಹೇಳಿದ್ದಾರೆ.
ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚವಾನ್, ನಿತಿನ್ ಗಡ್ಕರಿಯವರು ಉತ್ತಮ ವ್ಯಕ್ತಿ. ಮಹಾರಾಷ್ಟ್ರದ ಬಗೆಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎಂದರು.
ಕೇಂದ್ರ ಸರ್ಕಾರವು ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದ್ದರೂ, ಜನರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲಾಗಿದೆ ಎಂದರು.
ಇದನ್ನೂ ಓದಿ:ಸೋಂಕು ಹರಡಲು ಕಾರಣವಾಗುತ್ತಿದೆಯೇ ಚಿಕ್ಕಮಗಳೂರು ಜಿಲ್ಲಾ ಕೋವಿಡ್ ಆಸ್ಪತ್ರೆ?
ಪೆಟ್ರೋಲ್ ಬೆಲೆ ಲೀಟರ್ ಗೆ ಸದ್ಯ ನೂರು ರೂಪಾಯಿ ದಾಟಿದೆ. ದೇಶದಲ್ಲಿ ಸುಮಾರು 12.21 ಕೋಟಿ ಜನರು ಕೆಲಸ ಕಳೆದುಕೊಂಡಿದ್ದಾರೆ. ಬಾಂಗ್ಲಾದೇಶದ ಜನರ ತಲಾ ಆದಾಯ ಭಾರತಕ್ಕಿಂತ ಉತ್ತಮವಾಗಿದೆ. ಕೇಂದ್ರ ಸರ್ಕಾರ ಮಾಡುತ್ತಿರುವ ನೀತಿ ನಿಯಮಗಳು ದೇಶವನ್ನು ಹಾಳು ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ್ ಚವಾನ್ ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರವು ಮಹಾರಾಷ್ಟ್ರದ ವಿರುದ್ಧ ತಾರತಮ್ಯ ಧೋರಣ ಅನುಸರಿಸುತ್ತಿದೆ. ಅನುದಾನ ಮತ್ತು ಜಿಎಸ್ ಟಿ ಪರಿಹಾರ ನೀಡುವ ವಿಚಾರದಲ್ಲೂ ಕೇಂದ್ರ ಇದೇ ಧೋರಣೆ ತೋರಿಸಿದೆ ಎಂದು ಅಶೋಕ್ ಚವಾನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.