ನೀತಿ ಆಯೋಗ ಉಪಾಧ್ಯಕ್ಷ ಪನಗಾರಿಯಾ ರಾಜೀನಾಮೆ
Team Udayavani, Aug 2, 2017, 8:00 AM IST
ಬೋಧನಾ ವೃತ್ತಿಗೆ ಮರಳುವ ಸಲುವಾಗಿ ಈ ನಿರ್ಧಾರ
ಹೊಸದಿಲ್ಲಿ: ಯೋಜನಾ ಆಯೋಗದ ಬದಲಾಗಿ ಹುಟ್ಟಿಕೊಂಡಿದ್ದ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗಾರಿಯಾ ರಾಜೀನಾಮೆ ನೀಡಿದ್ದಾರೆ. ಆದರೆ ಆ. 31ರ ವರೆಗೆ ಹುದ್ದೆಯ ಲ್ಲಿರುವುದಾಗಿ ಅವರು ಹೇಳಿದ್ದಾರೆ. ಈ ಸಂಬಂಧ ನೀತಿ ಆಯೋಗದ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಪನಗಾರಿಯಾ, ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ. ಆರ್ಬಿಐ ಗವರ್ನರ್ ಆಗಿದ್ದ ರಘುರಾಂ ರಾಜನ್ ಬಳಿಕ, ಮಹತ್ವದ ಹುದ್ದೆ ತೊರೆಯುತ್ತಿರುವ ಎರಡನೇ ಅರ್ಥಶಾಸ್ತ್ರಜ್ಞ ಇವರಾಗಿದ್ದಾರೆ.
ಇಂಡೋ – ಅಮೆರಿಕನ್ ಮೂಲದ ಪನಗಾರಿಯಾ ಅವರು, ಅಮೆರಿಕದ ಕೊಲಂಬಿಯಾ ವಿವಿಯಲ್ಲಿ ಇಂಡಿಯನ್ ಪೊಲಿಟಿಕಲ್ ಎಕಾನಮಿ ವಿಷಯದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. 2015ರಲ್ಲಿ ಯೋಜನಾ ಆಯೋಗದ ಬದಲಿಗೆ ನೀತಿ ಆಯೋಗ ರಚನೆಯಾದ ಮೇಲೆ ಅವರನ್ನು ಉಪಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿತ್ತು. ಇದೀಗ ಕೊಲಂಬಿಯಾ ವಿವಿ ರಜೆ ವಿಸ್ತರಣೆಗೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ವಾಪಸ್ ಹೋಗಲೇಬೇಕಾದ ಅನಿವಾರ್ಯ ಎದುರಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ 65 ವರ್ಷ ವಯಸ್ಸಿನ ತಮಗೆ ಕೊಲಂಬಿಯಾ ವಿವಿಯಂಥ ಸ್ಥಳಗಳಲ್ಲಿ ಕೆಲಸ ಸಿಗುವುದು ಕಷ್ಟ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪನಗಾರಿಯಾ ಅವರು ಈ ಹಿಂದೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್, ವರ್ಲ್ಡ್ ಬ್ಯಾಂಕ್, ಐಎಂಎಫ್ ಮತ್ತು ಯುಎನ್ಸಿಟಿಎಡಿಯಲ್ಲಿ ಕೆಲಸ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.