![1-havy](https://www.udayavani.com/wp-content/uploads/2024/12/1-havy-415x277.jpg)
ಪ್ರಣಬ್ ಮರು ಆಯ್ಕೆಗೆ ನಿತೀಶ್ಕುಮಾರ್ ಇಂಗಿತ
Team Udayavani, May 16, 2017, 3:45 AM IST
![Nitish-Kumar-800.jpg](https://www.udayavani.com/wp-content/uploads/2017/05/15/Nitish-Kumar-800.jpg)
ಪಾಟ್ನಾ: ಎರಡನೇ ಅವಧಿಗೆ ರಾಷ್ಟ್ರಪತಿ ಹುದ್ದೆಗೆ ಪ್ರಣಬ್ ಮುಖರ್ಜಿ ಅವರನ್ನೇ ಆಯ್ಕೆ ಮಾಡುವಂತೆ ಆಡಳಿತಾರೂಢ ಬಿಜೆಪಿ ಎಲ್ಲ ಪಕ್ಷಗಳ ಮಧ್ಯೆ ಒಮ್ಮತ ಮೂಡಿಸಲು ಯತ್ನಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
“ಪ್ರಣಬ್ ಅವರನ್ನೇ ಎರಡನೇ ಅವಧಿಗೆ ಆಯ್ಕೆ ಮಾಡುವುದಕ್ಕಿಂತ ಉತ್ತಮ ಬೇರೆ ಯಾವುದಿದೆ? ಅದೇ ಉತ್ತಮ ನಡೆಯಾಗಬಲ್ಲದು. ರಾಷ್ಟ್ರಪತಿ ಹುದ್ದೆ ಇಡೀ ದೇಶ ಮತ್ತು ಜನರನ್ನು ಪ್ರತಿನಿಧಿಸುವುದರಿಂದ ಕೇಂದ್ರದಲ್ಲಿ ಆಡಳಿತದಲ್ಲಿರುವ ಪಕ್ಷ ಅಭ್ಯರ್ಥಿ ಕುರಿತಂತೆ ಎಲ್ಲಾ ಪಕ್ಷಗಳನ್ನು ಸಂಪರ್ಕಿಸಿಯೇ ನಿರ್ಧರಿಸಬೇಕು’ ಎಂದು ನಿತೀಶ್ ಹೇಳಿದ್ದಾರೆ.
ಪ್ರಧಾನಿ ಹುದ್ದೆ ರೇಸಲ್ಲಿಲ್ಲ: 2019ರ ಲೋಕಸಭಾ ಚುನಾವಣೆಗೆ ತಾವು ಪ್ರಧಾನಿ ಹುದ್ದೆ ರೇಸಲ್ಲಿಲ್ಲ ಎಂದು ನಿತೀಶ್ ಸ್ಪಷ್ಟಪಡಿಸಿದ್ದಾರೆ. “ನಮ್ಮದು ಸಣ್ಣ ಪಕ್ಷ. ನಮ್ಮನ್ನು ಸುಮ್ಮನೇ ಗುರಿಮಾಡಲಾಗುತ್ತಿದೆ. ನಾನು ಮೂರ್ಖನಲ್ಲ. ಒಂದು ವೇಳೆ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾದೆ ಎಂದ ಮಾತ್ರಕ್ಕೆ ಪ್ರಧಾನಿ ಹುದ್ದೆ ಆಕಾಂಕ್ಷಿಯಲಎಂದಿದ್ದಾರೆ. “ನನಗೆ ಪ್ರಧಾನಿಯಾಗುವ ಆಸೆಯೂ ಇಲ್ಲ, ಸಾಮರ್ಥ್ಯವೂ ಇಲ್ಲ. 2014ರ ಚುನಾವಣೆ ವೇಳೆ ಮೋದಿಯವರಲ್ಲಿ ಅಂಥ ಸಾಮರ್ಥ್ಯವನ್ನು ಜನರು ಕಂಡರು. ಹಾಗಾಗಿ ಅವರು ಪ್ರಧಾನಿಯಾದರು,’ ಎಂದೂ ಹೇಳಿದ್ದಾರೆ.
ಇದೇ ವೇಳೆ, ಇವಿಎಂ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಚುನಾವಣೆಗಳಲ್ಲಿ ಇವಿಎಂ ಬಳಕೆಗೆ ನಮ್ಮ ಬೆಂಬಲವಿದೆ. ಈ ವಿಚಾರದಲ್ಲಿ ಆರ್ಜೆಡಿ ಅಭಿಪ್ರಾಯವನ್ನು ನಾನು ಒಪ್ಪುವುದಿಲ್ಲ. ನಾವು ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದೇವೆ ಎಂದ ಮಾತ್ರಕ್ಕೆ ಜೆಡಿಯು ಮತ್ತು ಆರ್ಜೆಡಿ ಸಿದ್ಧಾಂತ ಒಂದೇ ಆಗಿರಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ಈ ನಡುವೆ, ಲಾಲು ಪ್ರಸಾದ್ ವಿರುದ್ಧದ ಆರೋಪಗಳ ಕುರಿತ ಪ್ರಶ್ನೆಗೆ, “ಈ ಪ್ರಶ್ನೆಯನ್ನು ಲಾಲು ಅವರನ್ನೇ ಕೇಳಬೇಕು. ಇನ್ನು ಬಿಜೆಪಿ ಬಳಿ ಸಾಕ್ಷ್ಯಗಳಿದ್ದರೆ ನೇರವಾಗಿ ಕೋರ್ಟ್ ಮೆಟ್ಟಿಲೇರಲಿ,’ ಎಂದಿದ್ದಾರೆ.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1-mn](https://www.udayavani.com/wp-content/uploads/2024/12/1-mn-150x96.jpg)
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
![Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್](https://www.udayavani.com/wp-content/uploads/2024/12/6-52-150x90.jpg)
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
![Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ](https://www.udayavani.com/wp-content/uploads/2024/12/bus-5-150x100.jpg)
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
![saavu](https://www.udayavani.com/wp-content/uploads/2024/12/saavu-150x102.jpg)
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.