ಜೆಡಿಯುಗೆ ಇಕ್ಕಟ್ಟು ತಂದ ನಿರ್ಧಾರ: ಹಿರಿಯನಾಯಕ ಶರದ್‌ ಯಾದವ್‌ ಮುನಿಸು


Team Udayavani, Jul 28, 2017, 7:10 AM IST

Sharad-Yadav-Phone-600.jpg

– ಹಿರಿಯ ನಾಯಕ ಶರದ್‌ ಯಾದವ್‌ ಮುನಿಸು ; ದಿಲ್ಲಿಯಲ್ಲಿ ರಾಹುಲ್‌ ಜತೆ ಭೇಟಿ

ಪಟ್ನಾ/ಹೊಸದಿಲ್ಲಿ: ಮಹಾಮೈತ್ರಿ ಮುರಿದು ಬಿಜೆಪಿ ಜತೆಗೆ ಸೇರಿಕೊಂಡು ಸರಕಾರ ರಚನೆ ಮಾಡಿರುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಕ್ರಮ ಜೆಡಿಯು ನಾಯಕ ಶರದ್‌ ಯಾದವ್‌ಗೆ ಅತೃಪ್ತಿ ತಂದಿದೆ. ಇಷ್ಟು ಮಾತ್ರವಲ್ಲ ಪಕ್ಷದ ಇಬ್ಬರು ಹಿರಿಯ ಸಂಸದರೂ ಬಹಿರಂಗವಾಗಿಯೇ ಟೀಕಿಸಿದ್ದಾರೆ. ಹಲವು ದಿನಗಳಿಂದ ಬೆಳವಣಿಗೆ ಮೇಲೆ ನಿಗಾ ಇರಿಸಿದ್ದ ಶರದ್‌ ಯಾದವ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಿತೀಶ್‌ ಕುಮಾರ್‌ ಮತ್ತು ಸುಶೀಲ್‌ಕುಮಾರ್‌ ಮೋದಿ ಪಟ್ನಾದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಹೊಸದಿಲ್ಲಿಯಲ್ಲಿ ಶರದ್‌ ಯಾದವ್‌ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಜೆಡಿಯು ರಾಜ್ಯಸಭಾ ಸದಸ್ಯ ಅಲಿ ಅನ್ವರ್‌ ಪ್ರತಿಕ್ರಿಯೆ ನೀಡಿ ಆತ್ಮಸಾಕ್ಷಿ ಇಂಥ ಬೆಳವಣಿಗೆಗಳಿಗೆ ಅವಕಾಶ ನೀಡದು. ಪಕ್ಷದ ನಾಯಕರ ಜತೆಗೆ ಮುಖ್ಯಮಂತ್ರಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ.  ಪಕ್ಷದ ಇತರ ನಾಯಕರ ಜತೆಗೆ ಮಾತುಕತೆ ನಡೆಸಿದ ಬಳಿಕ ಅಧಿಕೃತವಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ ಎಂದು ಶರದ್‌ ಆಪ್ತರು ಹೇಳಿದ್ದಾರೆ. ಮತ್ತು ಕೇರಳದಲ್ಲಿನ ಪಕ್ಷದ ಏಕೈಕ ಸಂಸದ ಎಂ.ಪಿ.ವೀರೇಂದ್ರ ಕುಮಾರ್‌ ನಿತೀಶ್‌ ನಿರ್ಧಾರದಿಂದ ಆಘಾತವಾಗಿದೆ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಮತ್ತೂಬ್ಬ ಜೆಡಿಯು ನಾಯಕ ಆರ್‌ಸಿಪಿ ಸಿಂಗ್‌ ಪ್ರತಿಕ್ರಿಯಿಸಿದ್ದು, ಈ ಹಿಂದೆ ಬಿಜೆಪಿ ಬೆಂಬಲದಿಂದ ರಾಜ್ಯಸಭೆಗೆ ಅನ್ವರ್‌ ಅವರು ಆಯ್ಕೆಯಾದಾಗ ಅವರಿಗೆ ಏನೂ ಸಮಸ್ಯೆಯಾಗಿರಲಿಲ್ಲ ಎಂದಿದ್ದಾರೆ.

ಸಚಿವ ಸ್ಥಾನ?: ಶರದ್‌ ಯಾದವ್‌ಗೆ ಅತೃಪ್ತಿ ಉಂಟಾಗಿದೆ ಎಂಬ ಸುಳಿವು ಅರಿತ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರನ್ನು ಸಂಧಾನಕ್ಕಾಗಿ ಕಳುಹಿಸಿದ್ದಾರೆ. ಅವರು ಯಾದವ್‌ ಜತೆಗೆ ಖುದ್ದಾಗಿ ಮಾತುಕತೆ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವೆ: ಲಾಲು

ಮಹಾ ಮೈತ್ರಿ ಕೂಟ ಮುರಿದ ನಿತೀಶ್‌ ಕುಮಾರ್‌ ಕ್ರಮವನ್ನು ಅವಕಾಶವಾದಿತನ ಎಂದು ಹರಿ ಹಾಯ್ದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ರಾಜ್ಯಪಾಲರ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಬಿಜೆಪಿ ವಿರುದ್ಧ ನಿತೀಶ್‌ ಹೇಳಿದ್ದ ಮಾತುಗಳೆಲ್ಲ ಸುಳ್ಳು ಎಂದು ಈಗ ಸಾಬೀತಾಗಿದೆ. ತಮ್ಮ ಹಾಗೂ ಕುಟುಂಬದ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳು ನಡೆಸಿದ ದಾಳಿಯೆಲ್ಲವೂ ಪೂರ್ವ ನಿರ್ಧರಿತ ಎಂದು ಆರೋಪಿಸಿದ್ದಾರೆ. ಕೋಮುವಾದಿ ಶಕ್ತಿಗಳಿಗೆ ಎದುರಾಗಿ ಬಿಹಾರದ ಜನರು ನೀಡಿದ್ದ ತೀರ್ಪಿಗೆ ವಂಚನೆ ಮಾಡಿದ್ದಾರೆ ಎಂದು ಅವರು ಖಾರವಾಗಿ ನುಡಿದಿದ್ದಾರೆ.

ಅವಕಾಶವಾದಿತನ, ಮೋಸ ಎಂದ ಕಾಂಗ್ರೆಸ್‌
ಇತ್ತ ಕಾಂಗ್ರೆಸ್‌ ಪಾಳಯವೂ ನಿತೀಶ್‌ ವಿರುದ್ಧ ವ್ಯಾಪಕ ಟೀಕಾ ಪ್ರಹಾರ ನಡೆಸಿದ್ದು, ನಿತೀಶ್‌ ಅವಕಾಶವಾದಿತನ ರಾಜಕೀಯ ಮಾಡಿದ್ದಾರೆ ಮತ್ತು ಬಿಹಾರದ ಜನರ ತೀರ್ಮಾನಕ್ಕೆ ಮೋಸ ಮಾಡಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಕರಾಳ ದಿನ ಎಂದು ಬಣ್ಣಿಸಿದೆ. ಈ ಬಗ್ಗೆ ಹೇಳಿಕೆ ನೀಡಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೆವಾಲ, ;ದೊಡ್ಡ ದೊಡ್ಡ ಮಾತುಗಳು, ಮತ್ತು ಪ್ರಾಮಾಣಿಕತೆಯ ಮಾತುಗಳೆಲ್ಲ ಈಗ ಬೆತ್ತಲಾಗಿದೆ. ಯಾವುದೇ ರೀತಿಯಲ್ಲಾದರೂ, ಎಷ್ಟೇ ವೆಚ್ಚಾದರೂ ಅಧಿಕಾರ ಹಿಡಿಯಬೇಕೆನ್ನುವ ನೀತಿ ಇದಾಗಿದೆ’ ಎಂದು ಹರಿಹಾಯ್ದಿದ್ದಾರೆ. ಬಿಜೆಪಿ ವಿರುದ್ಧ ಬಿಹಾರ ಜನ ಚುನಾವಣೆಯಲ್ಲಿ ತೀರ್ಮಾನ ನೀಡಿದ್ದು, ಈಗ ಮತ್ತೆ ಅವರೊಂದಿಗೆ ಜೆಡಿಯು ಅಧಿಕಾರ ಹಿಡಿದಿರುವುದು ದೊಡ್ಡ ರಾಜಕೀಯ ಸಂಚು ಎಂದು ಅವರು ಬಣ್ಣಿಸಿದ್ದಾರೆ. 

ಬಿಹಾರ ಹಿತಾಸಕ್ತಿಗಾಗಿ ಮೈತ್ರಿ

ಬಿಹಾರದ ಹಿತಾಸಕ್ತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿಯೇ ಕಾಂಗ್ರೆಸ್‌-ಆರ್‌ಜೆಡಿ ಮೈತ್ರಿಗೆ ವಿದಾಯ ಹೇಳಬೇಕಾಯಿತು. ಬಿಜೆಪಿ ಜತೆಗೆ ಸೇರಬೇಕಾಯಿತು ಎಂದು ಮುಖ್ಯಮಂತ್ರಿ ನಿತೀಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಇದರಿಂದಾಗಿ ರಾಜ್ಯದ ಅಭಿವೃದ್ಧಿಯೇ ಆಗಲಿದೆ ಎಂದಿದ್ದಾರೆ. ಪ್ರಮಾಣ ಸ್ವೀಕಾರದ ಬಳಿಕ ಮಾತನಾಡಿದ ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿಲ್ಲ. ಸಂಬಂಧಿಸಿದ ಎಲ್ಲರ ಜತೆಗೂ ಮಾತುಕತೆ ನಡೆಸಿಯೇ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಶರದ್‌ ಯಾದವ್‌ ಮತ್ತು ಇತರ ಜೆಡಿಯು ನಾಯಕರು ಅತೃಪ್ತಿ ಹೊಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಾತುಗಳು ಮಹತ್ವ ಪಡೆದಿವೆ. ರಾಹುಲ್‌ ಗಾಂಧಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ನಿತೀಶ್‌ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಿದ್ದಾರೆ. 

ಲಾಲು ಯಾದವ್‌ ವಿರುದ್ಧ ಇ.ಡಿ ಕೇಸು
ನೂತನ ಮೈತ್ರಿಕೂಟ ಸರಕಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಜಾರಿ ನಿರ್ದೇಶನಾಲಯ ಲಾಲು ಪ್ರಸಾದ್‌ ಯಾದವ್‌ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಡಿಯಲ್ಲಿ ಕೇಸು ದಾಖಲಿಸಿದೆ. ಯುಪಿಎ ಅವಧಿಯಲ್ಲಿ ಲಾಲು ರೈಲ್ವೆ ಸಚಿವರಾಗಿದ್ದ ವೇಳೆ ಇಬ್ಬರು ಉದ್ಯಮಿಗಳಿಗೆ ಹೋಟೆಲ್‌ ನಡೆಸಲು ಪರವಾನಿಗಿ ನೀಡಿದ್ದಕ್ಕೆ ಪ್ರತಿಯಾಗಿ ಅವರಿಗೆ ಜಮೀನು ನೀಡಲಾಗಿತ್ತು ಎಂಬ ಆರೋಪದಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ 8 ಸಾವಿರ ಕೋಟಿ ರೂ. ಮೌಲ್ಯದ ಭೂ ಹಗರಣದಲ್ಲಿ ಪುತ್ರಿ ಮಿಸಾ ಭಾರತಿ ಅವರಿಗೂ ನೋಟಿಸ್‌ ನೀಡಲಾಗಿದ್ದು, ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿದ ಆರೋಪಗಳನ್ನು ಮಾಡಲಾಗಿದೆ.  ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. 

ಇಲ್ಲಿ ಯಾರೂ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ 
2013ರಲ್ಲಿ ಬಿಜೆಪಿಯ ‘ಪ್ರಭಾವಿ’ ನಾಯಕ, ಮೋದಿ ಅವರನ್ನು ಬದ್ಧ ವೈರಿಯಂತೆ ಬಿಂಬಿಸಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಈಗ ಅದೇ ಮೋದಿಯವರ ಆಪ್ತ ಮಿತ್ರ. 2013ರಲ್ಲಿ ಬಿಜೆಪಿ ಜತೆಗಿನ 17 ವರ್ಷಗಳ ಸಖ್ಯ ಮುರಿದುಕೊಂಡ ನಿತೀಶ್‌, ಮೂಲ ತತ್ವಗಳೊಂದಿಗೆ ರಾಜಿಯಾಗಲು ಸಾಧ್ಯವೇ ಇಲ್ಲ ಎಂದಿದ್ದರು. ಲಾಲುರನ್ನು ‘ಶೈತಾನ್‌’, ನನ್ನನ್ನು ‘ಅಹಂಕಾರಿ’ ಎಂದು ಮೋದಿ ಕರೆದಿದ್ದಾರೆ. ಇದು ಪ್ರಧಾನಿಯಾದವರಿಗೆ ಶೋಭೆ ತರುವುದಿಲ್ಲ ಎಂದು 2015ರಲ್ಲಿ ಹರಿಹಾಯ್ದಿದ್ದರು. ನಂತರ ‘ಸಂಘ’ ಮುಕ್ತ ಭಾರತಕ್ಕಾಗಿ ಬಿಜೆಪಿಯೇತರ ಪಕ್ಷಗಳು ಒಂದಾಗಬೇಕು ಎಂದು 2016ರಲ್ಲಿ ಕರೆ ನೀಡಿದ್ದ ನಿತೀಶ್‌,  ಅದೇ ಬಿಜೆಪಿ (ಮೋದಿ) ಜತೆ ಕೈಜೋಡಿಸಿದ್ದಾರೆ. ‘ರಾಜಕೀಯದಲ್ಲಿ ಯಾರೂ ಮಿತ್ರರಲ್ಲ; ಯಾರೂ ಶತ್ರುಗಳಲ್ಲ’ ಎಂಬ ಗಾದೆ ಮಾತನ್ನು ಪ್ರಸ್ತುತ ನಿತೀಶ್‌ ಅವರ ನಡೆ ಸತ್ಯವಾಗಿಸಿದೆ.

ಬಿಹಾರ ಸಿಎಂ ಅವಕಾಶವಾದಿ ರಾಜಕಾರಣಿ. ಬಿಹಾರದ ಜನರು ಜೆಡಿಯು- ಕಾಂಗ್ರೆಸ್‌-ಆರ್‌ಜೆಡಿ ಮೈತ್ರಿಗೆ ಅಧಿಕಾರ ನೀಡಿದ್ದರು. ಅಧಿಕಾರದ ಆಸೆಗೆ ತತ್ವ-ಸಿದ್ಧಾಂತಗಳನ್ನು ಗಾಳಿಗೆ ತೂರಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ.
– ಸಿದ್ದರಾಮಯ್ಯ, ಮುಖ್ಯಮಂತ್ರಿ.

ಸ್ವಾರ್ಥ ಸಾಧನೆಗಾಗಿ ನಿತೀಶ್‌ ಕುಮಾರ್‌ ಕೋಮುವಾದಿ ಬಿಜೆಪಿ ಜತೆಗೆ ಕೈಜೋಡಿಸಿದ್ದಾರೆ. ಅದರ ವಿರುದ್ಧವೇ ಕೆಲ ಸಮಯದ ಹಿಂದೆ ಅವರು ಹೋರಾಟ ಮಾಡುತ್ತಿದ್ದರು. ಮೂರು ನಾಲ್ಕು ತಿಂಗಳಿಂದ ಇಂಥ ಪ್ರಯತ್ನ ನಡೆಯುತ್ತಿದೆ.
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ಉಪಾಧ್ಯಕ್ಷ

ಕಳೆದೆರಡು ದಿನಗಳಲ್ಲಿ ಬಿಹಾರದಲ್ಲಾದ ಕ್ಷಿಪ್ರ ಬೆಳವಣಿಗೆ ದುರದೃಷ್ಟಕರವಾದದ್ದು. ಈ ಋಣಾತ್ಮಕ ಬೆಳವಣಿಗೆಯಿಂದ ನಾವೆಲ್ಲರೂ ಆಘಾತ ಕ್ಕೊಳಗಾಗಿದ್ದೇವೆ.
– ಸುರವರಮ್‌ ಸುಧಾಕರ ರೆಡ್ಡಿ, ಸಿಪಿಐ ನಾಯಕ 

ನನ್ನ ವಿರುದ್ಧ ರಾಜಕೀಯ ಹಗೆತನ ತೋರಿಸಲಾಗುತ್ತಿದೆ. ರಾಜಕೀಯವಾಗಿ ನನ್ನ ಏಳಿಗೆ ಸಹಿಸದ ಜೆಡಿಯು ಮತ್ತು ಬಿಜೆಪಿ ಪಕ್ಷಗಳಿಗೆ  ಹೊಟ್ಟೆಕಿಚ್ಚು ತಂದಿದೆ.
– ತೇಜಸ್ವಿ ಯಾದವ್‌, ಮಾಜಿ ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.