ಮೋಟಾರು ವಾಹನ ಮಸೂದೆಗೆ ಸರ್ವಪಕ್ಷ ಆಕ್ಷೇಪ
Team Udayavani, Jul 28, 2017, 8:30 AM IST
ಹೊಸದಿಲ್ಲಿ: ರಸ್ತೆ ನಿಯಮಗಳನ್ನು ಉಲ್ಲಂಘಿಸಿದರೆ ಭಾರೀ ಪ್ರಮಾಣದ ದಂಡ ವಿಧಿಸುವ, ಪರಿಹಾರ ಮೊತ್ತ ಹೆಚ್ಚಿಸುವ ಅಂಶಗಳನ್ನು ಹೊಂದಿದ ನೂತನ ಮೋಟಾರು ವಾಹನ ಮಸೂದೆಗೆ ರಾಜ್ಯಸಭೆಯಲ್ಲಿ ಸರ್ವ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಪಕ್ಷಗಳು ತಮ್ಮ ಆಕ್ಷೇಪಗಳನ್ನು ಸೋಮವಾರ ಲಿಖೀತವಾಗಿ ರಾಜ್ಯಸಭೆ ಉಪಾಧ್ಯಕ್ಷ ಪಿ.ಜೆ. ಕುರಿಯನ್ ಅವರಿಗೆ ಸಲ್ಲಿಸಿವೆ. ಇದನ್ನು ಪಡೆದು ಕೇಂದ್ರ ಸಾರಿಗೆ ಸಚಿವಾಲಯ ಪ್ರತಿಯೊಂದಕ್ಕೂ ಲಿಖೀತ ರೂಪದಲ್ಲಿ ಉತ್ತರವನ್ನು ಉಪಾಧ್ಯಕ್ಷರಿಗೆ ಮರುಸಲ್ಲಿಸಲಿದೆ.
ಆದರೆ ಹೊಸ ಮಸೂದೆ ಮೋಟಾರು ವಾಹನ ವಲಯದಲ್ಲಿ ಭಾರೀ ಸುಧಾರಣೆಯ ಕ್ರಮಗಳನ್ನು ಒಳಗೊಂಡಿದೆ ಎಂದು ಈ ಕುರಿತಾಗಿ ನಡೆದ ಸರ್ವಪಕ್ಷ ಸಭೆಯ ಬಳಿಕ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೇಳಿದರು. ನೂತನ ಮಸೂದೆಯಲ್ಲಿರುವ ಅಂಶಗಳು ಅತಿ ಕಠಿನವಾಗಿದ್ದು, ಮರುಪರಿಶೀಲನೆ ನಡೆಸಬೇಕು. ಈ ಸಂಬಂಧ ರಾಜ್ಯಸಭೆಯ ಆಯ್ಕೆ ಸಮಿತಿಗೆ ನೀಡಬೇಕು ಎಂಬುದು ವಿಪಕ್ಷಗಳ ಬೇಡಿಕೆಯಾಗಿದೆ. ‘ವಾರ್ಷಿಕ ದೇಶಾದ್ಯಂತ ರಸ್ತೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜೀವಹಾನಿಯಾಗುತ್ತದೆ. ಇದನ್ನು ತಡೆಯುವುದು ಅಗತ್ಯವಿದ್ದು, ಕಾನೂನು ಜಾರಿಯಲ್ಲಿನ ವಿಳಂಬ ಮತ್ತಷ್ಟು ಜೀವ ಹಾನಿಗೆ ಕಾರಣವಾಗುತ್ತದೆ’ ಎಂದು ಗಡ್ಕರಿ ಹೇಳಿದರು. ಹೊಸ ಕಾಯ್ದೆ 1988ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿಯಾಗಿದೆ. ಕಳೆದ ವರ್ಷ ಈ ಮಸೂದೆ ಲೋಕಸಭೆಯಲ್ಲಿ ಪಾಸಾಗಿದ್ದರೂ ಈಗ ರಾಜ್ಯಸಭೆಯಲ್ಲಿ ಪಾಸಾಗದೆ ಉಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.