
ಲಕ್ಷ ಲಕ್ಷ ಕೊಟ್ಟರು ಮತ್ತಷ್ಟು ಬೇಡಿಕೆ.. ವರದಕ್ಷಿಣೆಗಾಗಿ ಪತ್ನಿ ಕೊಲೆಗೈದ ಪತಿ,ಕುಟುಂಬಸ್ಥರು
Team Udayavani, Apr 2, 2024, 10:30 AM IST

ಲಕ್ನೋ: ವರದಕ್ಷಿಣೆ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಮಹಿಳೆಯನ್ನು ಆಕೆಯ ಪತಿ ಮತ್ತು ಅವನ ಕುಟುಂಬವು ಹೊಡೆದು ಸಾಯಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಡಿಸೆಂಬರ್ 2022 ರಲ್ಲಿ ವಿಕಾಸ್ ಹಾಗೂ ಕರಿಷ್ಮಾ ವಿವಾಹವಾಗಿತ್ತು. ದಂಪತಿಗಳು ವಿಕಾಸ್ ಅವರ ಕುಟುಂಬದೊಂದಿಗೆ ಗ್ರೇಟರ್ ನೋಯ್ಡಾದ ಇಕೋಟೆಕ್ -3 ನ ಖೇಡಾ ಚೌಗನ್ಪುರ ಗ್ರಾಮದಲ್ಲಿ ವಾಸಿಸುತ್ತಿದ್ದರು.
ಮದುವೆ ಸಮಯದಲ್ಲಿ ಕರಿಷ್ಮಾ ಅವರ ಕುಟುಂಬ ವರದಕ್ಷಿಣೆಯಾಗಿ ವರನ ಕುಟುಂಬಕ್ಕೆ 11 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಎಸ್ಯುವಿಯನ್ನು ನೀಡಿತ್ತು. ಆದರೆ ಇದಾದ ಬಳಿಕವೂ ವಿಕಾಸ್ ಅವರ ಕುಟುಂಬವು ವರ್ಷಗಳಿಂದ ಹೆಚ್ಚಿನ ವರದಕ್ಷಿಣೆಗೆ ಬೇಡಿಕೆಯನ್ನಿಟ್ಟು ಕರಿಷ್ಮಾಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಅವರ ಸಹೋದರ ದೀಪಕ್ ಆರೋಪಿಸಿದ್ದಾರೆ.
ಕರಿಷ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಆಕೆಗೆ ದಿನ ನಿತ್ಯದ ಕಿರುಕುಳ ಹೆಚ್ಚಾಗಿತ್ತು. ಈ ಕಾರಣಕ್ಕೆ ವಿಕಾಸ್ ಅವರ ಗ್ರಾಮದಲ್ಲಿ ಹಲವಾರು ಬಾರಿ ಎರಡು ಕುಟುಂಬ ಮಾತುಕತೆ ನಡೆಸಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಿಸಿದವು. ಇದಾದ ಬಳಿಕ ಕರಿಷ್ಮಾ ಅವರ ಕುಟುಂಬವು ವಿಕಾಸ್ ಕುಟುಂಬಕ್ಕೆ ಇನ್ನೂ 10 ಲಕ್ಷ ರೂ. ನೀಡಿದ್ದರೂ ದೌರ್ಜನ್ಯ ನಿಲ್ಲಲಿಲ್ಲ ಎಂದು ದೀಪಕ್ ಆರೋಪಿಸಿದ್ದಾರೆ.
ಇತ್ತೀಚೆಗೆ ದೀಪಕ್ ಅವರ ಕುಟುಂಬವು ಫಾರ್ಚುನರ್ ಕಾರು ಮತ್ತು 21 ಲಕ್ಷದ ಬೇಡಿಕೆಯನ್ನು ಇಟ್ಟಿತ್ತು. ಇದನ್ನು ಪೂರೈಸಲು ಸಾಧ್ಯವಿಲ್ಲ ಎಂದಿದ್ದಕ್ಕೆ ಕರಿಷ್ಮಾಳ ಮೇಲೆ ಪತಿ ಹಾಗೂ ಅವರ ಕುಟುಂಬಸ್ಥರು ಹಲ್ಲೆ ನಡೆಸಿದಿದ್ದಾರೆ.
ಹಲ್ಲೆ ಮಾಡಿದ್ದನ್ನು ಕರಿಷ್ಮಾ ತನ್ನ ಕುಟುಂಬಕ್ಕೆ ಫೋನ್ ಮಾಡಿ ತಿಳಿಸಿದ್ದಾರೆ. ಆಕೆಯ ಕುಟುಂಬ ಮನೆಗೆ ಬರುವಷ್ಟರಲ್ಲಿ ಕರಿಷ್ಮಾಳನ್ನು ಹಲ್ಲೆಗೈದು ಕೊಲೆ ಮಾಡಿದ್ದಾರೆ.
ಈ ಸಂಬಂಧ ಕರಿಷ್ಮಾ ಸಹೋದರ ದೀಪಕ್ ಅವರು ವಿಕಾಸ್ ಹಾಗೂ ಕುಟುಂಬದವರ ಮೇಲೆ ದೂರು ದಾಖಲಿಸಿದ್ದಾರೆ.
ವಿಕಾಸ್, ಆತನ ತಂದೆ ಸೋಂಪಾಲ್ ಭಾಟಿ, ತಾಯಿ ರಾಕೇಶ್, ಸಹೋದರಿ ರಿಂಕಿ ಮತ್ತು ಸಹೋದರರಾದ ಸುನೀಲ್ ಮತ್ತು ಅನಿಲ್ ವಿರುದ್ಧ ವರದಕ್ಷಿಣೆಗಾಗಿ ಕೊಲೆ ಪ್ರಕರಣ ದಾಖಲಾಗಿದೆ.
ವಿಕಾಸ್ ಮತ್ತು ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಇತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.