ಖಾಸಗಿ ವಾಟ್ಸ್ಆ್ಯಪ್ ಸಂದೇಶಗಳ ಮೇಲೆ ಸರ್ಕಾರದ ನಿಗಾ ಇಲ್ಲ
Team Udayavani, Aug 1, 2023, 6:45 AM IST
ನವದೆಹಲಿ: ಜಾಲತಾಣಗಳಲ್ಲಿ ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು ಪಿಐಬಿ ಫ್ಯಾಕ್ಟ್ಚೆಕ್ಗೆ ಸರ್ಕಾರ ಅಧಿಕಾರ ನೀಡಿದ ಬೆನ್ನಲ್ಲೇ, ಜನರ ವಾಟ್ಸ್ಆ್ಯಪ್ ಚಾಟ್ಗಳನ್ನೂ ಸರ್ಕಾರ ಮೇಲ್ವಿಚಾರಣೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಆದರೆ, ಈ ವಿಚಾರ ಕೇವಲ ವದಂತಿ ಅಷ್ಟೇ, ಸರ್ಕಾರವು ಯಾವುದೇ ಜಾಲತಾಣಗಳಲ್ಲಿನ ಖಾಸಗಿ ಸಂದೇಶಗಳ ಮೇಲ್ವಿಚಾರಣೆ ಮಾಡುತ್ತಿಲ್ಲವೆಂದು ಪಿಐಬಿ ಸ್ಪಷ್ಟನೆ ನೀಡಿದೆ. ವಾಟ್ಸ್ಆ್ಯಪ್ ಚಾಟ್ನಲ್ಲಿ 3 ಬ್ಲೂ ಟಿಕ್ ಇದ್ದರೆ, ಅದನ್ನು ಸರ್ಕಾರ ಗಮನಿಸಿದೆ ಎಂದರ್ಥ.
2 ಬ್ಲೂಟಿಕ್ ಜತೆಗೆ 1 ರೆಡ್ ಟಿಕ್ ಬಂದಲ್ಲಿ ಸರ್ಕಾರ ಸಂದೇಶ ಕಳುಹಿಸಿದವರ ವಿರುದ್ಧ ಕ್ರಮಕ್ಕೆ ಚಿಂತನೆ ನಡೆಸುತ್ತಿದೆ ಹಾಗೂ 2 ರೆಡ್ ಟಿಕ್ ಮತ್ತು 1 ಬ್ಲೂ ಟಿಕ್ ಇದ್ದಲ್ಲಿ ಸಂದೇಶ ಕಳುಹಿಸಿದವರ ಮಾಹಿತಿ ಸಂಗ್ರಹಿಸಿದೆ. 3 ರೆಡ್ ಟಿಕ್ ಬಂದಲ್ಲಿ ಸಂದೇಶ ಕಳುಹಿಸಿದವರಿಗೆ ಸಮನ್ಸ್ ಕಳುಹಿಸಿ, ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಅರ್ಥವೆಂದು ಬರೆದಿದ್ದ ಪೋಸ್ಟರ್ ಒಂದು ಜಾಲತಾಣದಲ್ಲಿ ಇತ್ತೀಚೆಗೆ ಭಾರೀ ವೈರಲ್ ಆಗಿತ್ತು.
ಆದರೆ, ಆ ಪೋಸ್ಟರ್ನಲ್ಲಿರುವ ಅಷ್ಟೂ ವಿಚಾರವೂ ಸುಳ್ಳು. ಸರ್ಕಾರ ಯಾವುದೇ ಖಾಸಗಿ ಸಂದೇಶಗಳನ್ನು ಗಮನಿಸುತ್ತಿಲ್ಲ. ಇನ್ನು ವಾಟ್ಸ್ಆ್ಯಪ್ನಲ್ಲಿ ಇರುವುದೇ ಕೇವಲ 2 ಬಣ್ಣ ಟಿಕ್. ಮೆಸೇಜ್ ಕಳುಹಿಸಿದಾಗ ಬೂದು ಬಣ್ಣದ ಟಿಕ್ ಹಾಗೂ ಅದನ್ನು ಓದಿದ ಬಳಿಕ ನೀಲಿ ಬಣ್ಣದ ಟಿಕ್ ಮಾತ್ರವೇ ಬರಲಿದೆ ಎಂದು ಪಿಐಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.