ಸುಖೋಯ್‌ ಬಗ್ಗೆ ಮಾಹಿತಿ ಇಲ್ಲ; ಶಾಂತಿ ಕದಡಬೇಡಿ: ಭಾರತಕ್ಕೆ ಚೀನ


Team Udayavani, May 24, 2017, 4:21 PM IST

Sukhoi30-700.jpg

ಬೀಜಿಂಗ್‌ : ನಿನ್ನೆ ಮಂಳವಾರ ತನ್ನ ಎಂದಿನ ಅಭ್ಯಾಸ ಹಾರಾಟದಲ್ಲಿ ಭಾರತ-ಚೀನ ಗಡಿಗೆ ಸಮೀಪದಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಾಯು ಪಡೆಯು ಸುಖೋಯ್‌-30 ಯುದ್ಧ ವಿಮಾನದ ಬಗ್ಗೆ ತನಗೇನೂ ಮಾಹಿತಿ ಇಲ್ಲ ಎಂದು ಚೀನ ಹೇಳಿದೆ. ಮಾತ್ರವಲ್ಲದೆ, ಭಾರತ ಈ ಪ್ರದೇಶದಲ್ಲಿನ ಶಾಂತಿ ಮತ್ತು ಸುಭದ್ರತೆಗೆ ಧಕ್ಕೆ ಉಂಟುಮಾಡಬಾರದು ಎಂದೂ ಅದು ಹೇಳಿದೆ. 

ಇಬ್ಬರು ಪೈಲಟ್‌ಗಳನ್ನು ಒಳಗೊಂಡಿದ್ದ ಸುಖೋಯ್‌ ಯುದ್ಧ ವಿಮಾನವು ನಿನ್ನೆ ಮಂಗಳವಾರ ಅಸ್ಸಾಂನ ತೇಜಪುರ ವಾಯುನೆಲೆಯಿಂದ ಗಗನಕ್ಕೇರಿದ ಬಳಿಕ ನಿಗೂಢವಾಗಿ ನಾಪತ್ತೆಯಾಗಿತ್ತು. 

ನಾಪತ್ತೆಯಾಗಿರುವ ಯುದ್ಧ ವಿಮಾನವನ್ನು ಪತ್ತೆ ಹಚ್ಚಲು ಚೀನವು ಭಾರತಕ್ಕೆ ನೆರವಾಗುವುದೇ ಎಂಬ ಪ್ರಶ್ನೆಗೆ ಚೀನ ವಿದೇಶ ಸಚಿವಾಲಯದ ವಕ್ತಾರ ಲೂ ಕಾಂಗ್‌ ಅವರು “ಭಾರತ ಈಶಾನ್ಯ ಗಡಿ ಭಾಗದಲ್ಲಿನ ಶಾಂತಿಯನ್ನು ಕದಡಬಾರದು’ ಎಂದು ಹೇಳಿದರು. 

“ವಿಮಾನ ನಾಪತ್ತೆಗೆ ಸಂಬಂಧಿಸಿದಂತೆ ನಮಗೆ ಈ ಕ್ಷಣದಲ್ಲಿ  ಯಾವುದೇ ಮಾಹಿತಿ ಇಲ್ಲ’ ಎಂದವರು ಹೇಳಿದರು. 

ಚೀನವು ಭಾರತದ ಅರುಣಾಚಲ ಪ್ರದೇಶವು ದಕ್ಷಿಣ ಟಿಬೆಟ್‌ ಎಂದು ಹೇಳುತ್ತಿದ್ದು ಈ ವರ್ಷ ಎಪ್ರಿಲ್‌ನಲ್ಲಿ  ಟಿಬೆಟ್‌ ಧರ್ಮಗುರು ದಲಾಯಿ ಲಾಮಾ ಅವರು ಅರುಣಾಚಲಕ್ಕೆ ಭೇಟಿ ನೀಡಿರುವುದನ್ನು ಅನುಸರಿಸಿ ಉಭಯ ದೇಶಗಳ ನಡುವಿನ ಬಾಂಧವ್ಯ ಕದಡಿದೆ.

ಭಾರತದ ಈಶಾನ್ಯ ರಾಜ್ಯಗಳ ಮುಂಚೂಣಿ ವಾಯು ನೆಲೆಗಳಲ್ಲಿ ಸುಖೋಯ್‌ 30 ಯುದ್ಧ ವಿಮಾನಗಳನ್ನು ನಿಯೋಜಿಸಲಾಗಿರುವುದು ಕೂಡ ಚೀನಕ್ಕೆ ಅಸಮಾಧಾನ ಉಂಟು ಮಾಡಿದೆ. 

ನಾಪತ್ತೆಯಾಗಿರುವ ಯುದ್ಧ ವಿಮಾನಕ್ಕಾಗಿ ಭಾರತೀಯ ವಾಯು ಪಡೆ ಇನ್ನೂ ತೀವ್ರವಾದ ಹುಡುಕಾಟದಲ್ಲಿ ತೊಡಗಿದೆ. ಅಸ್ಸಾಂನ ಎಲ್ಲ ಜಿಲ್ಲಾಧಿಕಾರಿಗಳಿಗೆ ವಿಮಾನದ ಅವಶೇಷಗಳು ಪತ್ತೆಯಾದಲ್ಲಿ ತತ್‌ಕ್ಷಣ ವರದಿ ಮಾಡುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.