Kolkata ವೈದ್ಯೆ ಪ್ರಕರಣ:ಪ್ರಮುಖ ಆರೋಪಿಯ ನಾರ್ಕೊ ಟೆಸ್ಟ್ ಗೆ ಅನುಮತಿ ನಿರಾಕರಿಸಿದ ಕೋರ್ಟ್

ಏನಿದು ನಾರ್ಕೊ ಟೆಸ್ಟ್‌? ಈ ಪರೀಕ್ಷೆ ನಡೆಸುವುದು ಹೇಗೆ?

Team Udayavani, Sep 13, 2024, 5:26 PM IST

1-nacro

ಹೊಸದಿಲ್ಲಿ:ಕೋಲ್ಕತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹ*ತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಸಂಜಯ್ ರಾಯ್ ಗೆ ನಾರ್ಕೊ ಅನಾಲಿಸಿಸ್ ಪರೀಕ್ಷೆ ನಡೆಸಲು ಕೋರ್ಟ್ ಶುಕ್ರವಾರ(ಸೆ 13) ಅವಕಾಶ ನಿರಾಕರಿಸಿದೆ.

ಸಿಬಿಐ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಸಂಜಯ್ ರಾಯ್ ನ ನಾರ್ಕೊ ಅನಾಲಿಸಿಸ್ ಪರೀಕ್ಷೆ ನಡೆಸಲು ಅವಕಾಶ ಕೋರಿತ್ತು, ಕೋಲ್ಕತಾದ  ಕೋರ್ಟ್ ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 10 ರಂದು ಸಂಜಯ್ ರಾಯ್ ಬಂಧನಕ್ಕೊಳಗಾಗಿದ್ದ. ಆತನಿಗೆ ಕೋರ್ಟ್ ಜಾಮೀನು ನಿರಾಕರಿಸಿತ್ತು.

ಏನಿದು ನಾರ್ಕೊ ಟೆಸ್ಟ್‌?
ಆರೋಪಿಯೊಬ್ಬನ ದೇಹದೊಳಗೆ ಸೋಡಿಯಂ ಪೆಂಟೋಥಾಲ್‌ ಎಂಬ ದ್ರವವನ್ನು ಇಂಜೆಕ್ಟ್ ಮಾಡಿ, ಆತನ ಜ್ಞಾನತಪ್ಪಿಸಿ ಬಳಿಕ ಅವನಿಂದ ಸತ್ಯ ಹೊರಬೀಳಿಸುವ ಕ್ರಿಯೆ ಇದು. ಈ ಸೋಡಿಯಂ ಪೆಂಟೋಥಾಲ್‌ಗೆ ಟ್ರಾಥ್‌ ಸೆರಮ್‌ ಎಂದೂ ಕರೆಯುತ್ತಾರೆ. ವ್ಯಕ್ತಿಯೊಬ್ಬ ಸ್ವಯಂ ಜ್ಞಾನ ಕಳೆದುಕೊಂಡಾಗ ಆತ ಹಿಪ್ನೋಟಿಕ್‌ ಮೋಡ್‌ಗೆ ಹೋಗುತ್ತಾನೆ. ಆಗ ತನಿಖಾಧಿಕಾರಿಗಳು ಮುಕ್ತವಾಗಿ ಪ್ರಶ್ನೆ ಕೇಳಿ ಉತ್ತರ ಪಡೆಯಬಹುದು.

ಈ ಪರೀಕ್ಷೆ ನಡೆಸುವುದು ಹೇಗೆ?
ಒಬ್ಬ ಮಾನಸಿಕ ತಜ್ಞ, ತನಿಖಾಧಿಕಾರಿ ಅಥವಾ ಫಾರೆನ್ಸಿಕ್‌ ತಜ್ಞರೊಬ್ಬರ ಉಪಸ್ಥಿತಿ ಯಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಗೆ ಕೋರ್ಟ್‌ನ ಒಪ್ಪಿಗೆ ಬೇಕು,ವೈದ್ಯಕೀಯವಾಗಿಯೂ ಫಿಟ್‌ ಆಗಿರಬೇಕು. ಇದನ್ನು ಪರಿಶೀಲಿಸಿ, ಸೋಡಿಯಂ ಪೆಂಟೋಥಾಲ್‌ ಅನ್ನು ಆತನ ದೇಹಕ್ಕೆ ಚುಚ್ಚಲಾಗುತ್ತದೆ. ಎಷ್ಟು ಡೋಸೇಜ್‌ ನೀಡಬೇಕು ಎಂಬುದು ಆರೋಪಿಯ ವಯಸ್ಸು, ಲಿಂಗ ಮತ್ತು ಇತರ ವೈದ್ಯಕೀಯ ಸ್ಥಿತಿ ನೋಡಿ ನಿರ್ಧಾರ ಮಾಡಲಾಗುತ್ತದೆ.

ಡೋಸೇಜ್‌ ಹೆಚ್ಚು ಕಡಿಮೆಯಾದರೆ?
ಒಂದು ವೇಳೆ ಡೋಸೇಜ್‌ ಹೆಚ್ಚು ಕಡಿಮೆಯಾದರೆ ಆರೋಪಿ ಅಥವಾ ರೋಗಿ ಕೋಮಾಗೆ ಜಾರಬಹುದು,
ಸಾವೇ ಸಂಭವಿಸಬಹುದು.

ಇದು ನಿಖರವೇ?
ನಾರ್ಕೊ ಅನಾಲಿಸಿಸ್‌ ಟೆಸ್ಟ್‌ ಹೆಚ್ಚು ನಿಖರ ಎಂಬುದು ದೃಢ ಪಟ್ಟಿಲ್ಲ. ಕೆಲವೊಮ್ಮೆ ಆರೋಪಿ ಸುಳ್ಳನ್ನೂ ಹೇಳಿರುತ್ತಾನೆ.

ಭಾರತದಲ್ಲಿ ನಾರ್ಕೊ ಟೆಸ್ಟ್‌
ನಾರ್ಕೊ ಟೆಸ್ಟ್‌ ಅನ್ನು 2002ರ ಗೋಧ್ರಾ ಪ್ರಕರಣದ ಆರೋಪಿಗಳಿಗೆ ಮೊದಲು ಮಾಡಲಾಯಿತು. ಬಳಿಕ 2003ರ ತೆಲಗಿ ನಕಲಿ ಛಾಪಾ ಕಾಗದ ಹಗರಣದಲ್ಲಿ ಅಬ್ದುಲ್‌ ಕರೀಂ ತೆಲಗಿಗೂ ಮಾಡಲಾಗಿತ್ತು. ಗುಜರಾತ್‌ನ ನಿಥಾರಿ ಪ್ರಕರಣದ ಆರೋಪಿಗಳಿಗೂ ನಾರ್ಕೊ ಟೆಸ್ಟ್‌ ನಡೆಸಲಾಗಿತ್ತು.

ಟಾಪ್ ನ್ಯೂಸ್

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.