ನಾಗಾಲ್ಯಾಂಡ್‌ನ‌ಲ್ಲಿ ಪ್ರತಿಪಕ್ಷವೇ ಇಲ್ಲ; ಎಲ್ಲಾ ಪಕ್ಷಗಳೂ ಸೇರಿ ಸರ್ಕಾರ ರಚನೆ


Team Udayavani, Mar 7, 2023, 7:25 AM IST

ನಾಗಾಲ್ಯಾಂಡ್‌ನ‌ಲ್ಲಿ ಪ್ರತಿಪಕ್ಷವೇ ಇಲ್ಲ; ಎಲ್ಲಾ ಪಕ್ಷಗಳೂ ಸೇರಿ ಸರ್ಕಾರ ರಚನೆ

ಅಗರ್ತಲಾ/ನವದೆಹಲಿ/ಕೊಹಿಮಾ:ನಾಗಾಲ್ಯಾಂಡ್‌ನ‌ ನೂತನ ವಿಧಾನಸಭೆಯಲ್ಲಿ ಪ್ರತಿಪಕ್ಷವೇ ಇಲ್ಲ. ಅಚ್ಚರಿಯಾದರೂ, ಈ ಅಂಶ ಸತ್ಯ. ಇತ್ತೀಚೆಗೆ ಮುಕ್ತಾಯವಾದ ಚುನಾವಣೆಯಲ್ಲಿ ನ್ಯಾಷನಲಿಸ್ಟ್‌ ಡೆಮಾಕ್ರಾಟಿಕ್‌ ಪ್ರೊಗ್ರೆಸಿವ್‌ ಪಾರ್ಟಿ (ಎನ್‌ಡಿಪಿಪಿ) ಮತ್ತು ಬಿಜೆಪಿ ಮೈತ್ರಿ ಕೂಟ 37 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಮತ್ತೆ ಪಡೆದುಕೊಂಡಿದೆ.

ಎನ್‌ಸಿಪಿ 7, ಎನ್‌ಪಿಪಿ 5, ಎಲ್‌ಜೆಪಿ (ರಾಮ್‌ವಿಲಾಸ್‌ ಪಾಸ್ವಾನ್‌) ನಾಗಾ ಪೀಪಲ್ಸ್‌ ಫ್ರಂಟ್‌, ಆರ್‌ಪಿಐ (ಅಥಾವಳೆ) ತಲಾ 2, ಜೆಡಿಯು 1, ಸ್ವತಂತ್ರರು 4 ಕ್ಷೇತ್ರಗಳಲ್ಲಿ ಗೆದ್ದಿದ್ದರು. ಈಗ ಅವರೆಲ್ಲರೂ ಎನ್‌ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ಬೆಂಬಲ ನೀಡುವ ಬಗ್ಗೆ ಪತ್ರ ನೀಡಿದ್ದಾರೆ. ನಾಗಾಲ್ಯಾಂಡ್‌ನ‌ಲ್ಲಿ ಎನ್‌ಡಿಪಿಪಿ ಶಾಸಕಾಂಗ ಪಕ್ಷದ ನಾಯಕ ನೈಫಿಯೂ ರಿಯೊ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣ ಸ್ವೀಕರಿಸಲಿದ್ದಾರೆ.

ಗಮನಾರ್ಹವೆಂದರೆ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ವಿರೋಧಿಸುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ಈಶಾನ್ಯ ರಾಜ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿದೆ. 2015 ಮತ್ತು 2021ರಲ್ಲಿಯೂ ಕೂಡ ನಾಗಾಲ್ಯಾಂಡ್‌ನ‌ಲ್ಲಿ ಪ್ರತಿಪಕ್ಷಗಳು ಇಲ್ಲದ ಸರ್ಕಾರ ರಚನೆಯಾಗಿತ್ತು.

ಮಾಣಿಕ್‌ ಸಹಾ ಸಿಎಂ:
ಅನಿಶ್ಚಿತತೆಗಳ ನಡುವೆ ಎರಡನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್‌ ಸಹಾ ಅವರು ಆಯ್ಕೆಯಾಗಿದ್ದಾರೆ. ಅಗರ್ತಲಾದಲ್ಲಿ ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಅವರ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೆಲ ದಿನಗಳಿಂದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್‌ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಬಗ್ಗೆ ಹಲವು ವದಂತಿಗಳು ಚಾಲ್ತಿಯಲ್ಲಿ ಇದ್ದವು. ಅವರು ಮಾ.8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಗೆದ್ದಿದೆ.

58 ಶಾಸಕರ ಪ್ರಮಾಣ:
ಮೇಘಾಲಯದ ಮುಖ್ಯಮಂತ್ರಿಯಾಗಿ ಎನ್‌ಪಿಪಿಯ ಕೊನ್ರಾಡ್‌ ಸಂಗ್ಮಾ ಅವರು ಎರಡನೇ ಬಾರಿಗೆ ಮಾ.8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಪಿಪಿ ವತಿಯಿಂದ 8 ಮಂದಿ ಸಚಿವರಾಗಲಿದ್ದಾರೆ. ಬಿಜೆಪಿ, ಹಿಲ್‌ ಸ್ಟೇಟ್‌ ಡೆಮಾಕ್ರಾಟಿಕ್‌ ಪಾರ್ಟಿಯಿಂದ ಒಬ್ಬೊಬ್ಬ ಶಾಸಕರು ಸಚಿವರಾಗಲಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಕೊನ್ರಾಡ್‌ ಸಂಗ್ಮಾ ಹೇಳಿದ್ದಾರೆ.

ಇದೇ ವೇಳೆ, ಸೋಮವಾರ ನೂತನವಾಗಿ ಆಯ್ಕೆಯಾದ 58 ಮಂದಿ ಶಾಸಕರು ವಿಧಾನಸಭೆಯಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎನ್‌ಪಿಸಿ 26, ಬಿಜೆಪಿ 2, ಎಚ್‌ಎಸ್‌ಡಿಪಿಯ 2, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಮಾ.5ರಂದು ನಡೆದಿದ್ದ ಬೆಳವಣಿಗೆಯಲ್ಲಿ ಯುನೈಟೆಡ್‌ ಡೆಮಾಕ್ರಾಟಿಕ್‌ ಪಾರ್ಟಿ ಮತ್ತು ಪೀಪಲ್ಸ್‌ ಡೆಮಾಕ್ರಾಟಿಕ್‌ ಫ್ರಂಟ್‌ನ ಶಾಸಕರು ಬೆಂಬಲ ನೀಡುವ ವಾಗ್ಧಾನ ಮಾಡಿದ್ದರು. ಇದರಿಂದಾಗಿ ಸಗ್ಮಾ ನೇತೃತ್ವದ ಸರ್ಕಾರಕ್ಕೆ ಸದ್ಯ 45 ಶಾಸಕರ ಬೆಂಬಲ ಇದೆ.

ಇಂದಿನಿಂದ 2 ದಿನ ಪ್ರಧಾನಿ ಈಶಾನ್ಯ ಪ್ರವಾಸ
ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರದಿಂದ ಎರಡು ದಿನಗಳ ಕಾಲ ಈಶಾನ್ಯ ರಾಜ್ಯಗಳ ಪ್ರವಾಸ ಕೈಗೊಳ್ಳಲಿದ್ದಾರೆ. ತ್ರಿಪುರಾ, ನಾಗಾಲ್ಯಾಂಡ್‌ ಮತ್ತು ಮೇಘಾಲಯಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಸರ್ಕಾರಗಳ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಂಗಳವಾರ ರಾತ್ರಿ ಅವರು ಗುವಾಹಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಸಂದರ್ಭದಲ್ಲಿ ಅಸ್ಸಾಂನ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಆರೋಗ್ಯ ಸಚಿವ ಕೇಶವ್‌ ಮಹಾಂತ ಹೇಳಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.