Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

ಮಹಾರಾಷ್ಟ್ರ ಚುನಾವಣೆ ವೇಳೆ ಪಕ್ಷ ಸೇರಿದ್ದ ಆರೋಪಿ... ತೀವ್ರ ಟೀಕೆ

Team Udayavani, Oct 20, 2024, 5:29 PM IST

1-a-shiv

ಮುಂಬಯಿ: ಪತ್ರಕರ್ತೆ ಗೌರಿ ಲಂಕೇಶ್ ಹ*ತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಅವರನ್ನು ಜಲ್ನಾ ಜಿಲ್ಲೆಯಲ್ಲಿ ಪಕ್ಷದ ಪದಾಧಿಕಾರಿ ಹುದ್ದೆಗೆ ನೇಮಕ ಮಾಡುವುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ತಡೆಹಿಡಿದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ, ಪಂಗರ್ಕರ್ ಶುಕ್ರವಾರ ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡಿದ್ದರು.

ಮಾಜಿ ಶಿವಸೇನಾ ಕಾರ್ಯಕರ್ತರಾಗಿದ್ದ ಪಂಗರ್ಕರ್ ಅವರು ಪಕ್ಷಕ್ಕೆ ಮರಳಿದ್ದಾರೆ ಮತ್ತು ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಖೋಟ್ಕರ್ ಹೇಳಿದ್ದರು. ಟೀಕೆಗಳು ಕೇಳಿ ಬಂದ ತತ್ ಕ್ಷಣ ಪಂಗರ್ಕರ್ ಅವರಿಗೆ ಪಕ್ಷದ ಹುದ್ದೆ ನೀಡುವ ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ಶಿವಸೇನೆ ರವಿವಾರ(ಅ 20) ಹೇಳಿಕೆಯಲ್ಲಿ ತಿಳಿಸಿದೆ.

2017ಸೆಪ್ಟೆಂಬರ್ 5 ರಂದು ಬೆಂಗಳೂರಿನ ನಿವಾಸದ ಹೊರಗೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಮಹಾರಾಷ್ಟ್ರದ ತನಿಖಾ ಸಂಸ್ಥೆಗಳ ಳ ಸಹಾಯದಿಂದ ಕರ್ನಾಟಕದ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವರನ್ನು ಬಂಧಿಸಲಾಗಿತ್ತು.

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು. ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. 2011 ರಲ್ಲಿ ಶಿವಸೇನೆ ಪಂಗರ್ಕರ್‌ಗೆ ಟಿಕೆಟ್ ನಿರಾಕರಿಸಿದ್ದ ವೇಳೆ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಯನ್ನು ಸೇರಿದ್ದರು.

ಅರ್ಜುನ್ ಖೋಟ್ಕರ್ ಅವರು ಜಲ್ನಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದ್ದರು, ಆದರೆ ಮಹಾಯುತಿಯಲ್ಲಿ (ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡಿರುವ ಮೈತ್ರಿ ಕೂಟ ) ಸೀಟು ಹಂಚಿಕೆ ಚರ್ಚೆಗಳು ನಡೆಯುತ್ತಿವೆ. ಸದ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕೈಲಾಶ್ ಗೊರಂಟ್ಯಾಲ್ ಶಾಸಕರಾಗಿದ್ದಾರೆ.

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

Manipur

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

JK-Sene

Jammu-Kashmir: ಏಳು ವಲಸಿಗ ಕಾರ್ಮಿಕರ ಹ*ತ್ಯೆಗೈದ ಉಗ್ರರು, ಕೆಲವರಿಗೆ ಗಾಯ

arrested

Baba Siddique ಕೇಸ್: ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪಿ ಬಂಧನ

Airport-BNG

Threat: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂ*ಬ್‌ ಬೆದರಿಕೆ!

1-a-tvk

TVK; ಕೆಲಸ ಆಧಾರಿತ ರಾಜಕೀಯ ಮಾಡುವ ಪಕ್ಷ: ನಟ ವಿಜಯ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Manipur

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

1-a-sidili

Puttur: ಸಿಡಿಲು ಬಡಿದು ಹಾನಿ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1-mulky

Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.